![](https://yakshaganakalaranga.com/wp-content/uploads/2022/11/GSS_8266-1024x683.jpg)
![](https://yakshaganakalaranga.com/wp-content/uploads/2022/11/GSS_8270-1024x683.jpg)
![](https://yakshaganakalaranga.com/wp-content/uploads/2022/11/GSS_8272-1024x683.jpg)
![](https://yakshaganakalaranga.com/wp-content/uploads/2022/11/GSS_8289-1024x683.jpg)
![](https://yakshaganakalaranga.com/wp-content/uploads/2022/11/GSS_8300-1024x683.jpg)
![](https://yakshaganakalaranga.com/wp-content/uploads/2022/11/GSS_8305-1024x683.jpg)
![](https://yakshaganakalaranga.com/wp-content/uploads/2022/11/GSS_8306-1024x831.jpg)
![](https://yakshaganakalaranga.com/wp-content/uploads/2022/11/GSS_8314-1024x683.jpg)
![](https://yakshaganakalaranga.com/wp-content/uploads/2022/11/GSS_8319-1024x683.jpg)
![](https://yakshaganakalaranga.com/wp-content/uploads/2022/11/GSS_8351-1024x683.jpg)
![](https://yakshaganakalaranga.com/wp-content/uploads/2022/11/GSS_8323-1024x683.jpg)
![](https://yakshaganakalaranga.com/wp-content/uploads/2022/11/GSS_8338-1024x683.jpg)
![](https://yakshaganakalaranga.com/wp-content/uploads/2022/11/GSS_8348-1024x683.jpg)
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಪ್ರವರ್ತಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ವಿದ್ಯಾಪೋಷಕ್ನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಬೊಮ್ಮರಬೆಟ್ಟುವಿನ ಮಂಜುಶ್ರೀ ಹಾಗೂ ಅಲ್ತಾರಿನ ಪೂರ್ಣಿಮಾ ಇವರಿಗೆ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ 16-11-2022ರಂದು ಉದ್ಘಾಟನೆಗೊಂಡಿತು. ಎರಡೂ ಮನೆಗಳನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಎಚ್.ಎಸ್ ಶೆಟ್ಟಿಯವರು ಸಂಸ್ಥೆಯ ಸಮಾಜಮುಖಿ ಕಾರ್ಯ ಹಾಗೂ ಪಾರದರ್ಶಕ ವ್ಯವಹಾರದಿಂದ ನಾನು ಆಕರ್ಷಿತನಾಗಿದ್ದೇನೆ.ನಿಮ್ಮ ಕಾರ್ಯಕ್ರಮಗಳಿಗೆ ನಮ್ಮ ಸೊಸೈಟಿ ಮುಂದೆಯೂ ನೆರವು ನೀಡುತ್ತದೆ ಎಂದು ಭರವಸೆ ನೀಡಿದರು. ಸೊಸೈಟಿಯ ಉಪಾಧ್ಯಕ್ಷರಾದ ಎಚ್. ನಾಗರಾಜ ಶೆಟ್ಟಿ, ಯು. ವಿಶ್ವನಾಥ ಶೆಣೈ, ರಾಜಗೋಪಾಲ ಆಚಾರ್ಯ, ಬಿ. ಸೀತಾರಾಮ ಶೆಟ್ಟಿ, ಎಚ್. ರಾಜೀವ ಶೆಟ್ಟಿ, ಕೂಡ್ಲಿ ಗಣಪತಿ ಉಡುಪ, ಬಿ.ಟಿ. ನಾಯ್ಕ್, ಸಂಸ್ಥೆಯ ಉಪಾಧ್ಯಕ್ಷರುಗಳಾದ ಪಿ. ಕಿಶನ್ ಹೆಗ್ಡೆ ಹಾಗೂ ವಿ.ಜಿ. ಶೆಟ್ಟಿ, ಸದಸ್ಯರುಗಳಾದ ಭುವನಪ್ರಸಾದ್ ಹೆಗ್ಡೆ, ಕೆ. ಸದಾಶಿವ ರಾವ್, ಅನಂತರಾಜ ಉಪಾಧ್ಯ, ಸಂತೋಷ್ ಕುಮಾರ್ ಶೆಟ್ಟಿ, ಹೆಚ್.ಎನ್. ಶೃಂಗೇಶ್ವರ, ವಿದ್ಯಾಪ್ರಸಾದ್, ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ರಾಜೇಶ್ ನಾವಡ, ದಿನೇಶ್ ಪೂಜಾರಿ, ಕಿಶೋರ್ ಸಿ. ಉದ್ಯಾವರ, ಕಿಶನ್ ರಾವ್ ಮತ್ತು ಶ್ರೀಮತಿ ಸುಮನ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಎರಡೂ ಮನೆಗಳು ಸೇರಿ ಸಂಸ್ಥೆ ಈವರೆಗೆ 36 ಮನೆಗಳನ್ನು ನಿರ್ಮಿಸಿಕೊಟ್ಟಿದೆ.