Yakshagana Kalaranga

ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ

ಯಕ್ಷಶಿಕ್ಷಣ ಟ್ರಸ್ಟ್( ರಿ) ಉಡುಪಿ ಕಳೆದ 17 ವರ್ಷಗಳಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದು, ಈ ವರ್ಷ ಶಾಸಕರಾದ ಗುರುರಾಜ ಗಂಟಿಹೊಳೆಯವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ 11 ಶಾಲೆಗಳು ಸೇರಿ ಒಟ್ಟೂ 91 ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಸಲು ಯೋಜಿಸಿದೆ. ಈ ಪ್ರಯುಕ್ತ ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ ಇಂದು(12.6.24) ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದ ಹೊರಾಂಗಣದಲ್ಲಿ ಜರಗಿತು.ಉಡುಪಿ ಕ್ಷೇತ್ರದ ಶಾಸಕ,ಟ್ರಸ್ಟ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಾತನಾಡಿ,ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯನಿರ್ವಹಣೆಯಲ್ಲಿ ಕಲಾರಂಗದ ಕಾರ್ಯಕರ್ತರ ದುಡಿಮೆ ದೊಡ್ಡದು, ನಾವೆಲ್ಲ ಒಟ್ಟಾಗಿ ಈ ಮಹಾಭಿಯನವನ್ನು ಯಶಸ್ವಿಯಾಗಿಸೋಣ ಎಂದರು.ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ ಮಕ್ಕಳಿಗೆ ಸಂಸ್ಕಾರ ನೀಡುವ ಈ ಕಲಾಪ್ರಕಾರ ಉಳಿಸಿ ಬೆಳೆಸುವಲ್ಲಿ ಯಕ್ಷ ಗುರುಗಳ ಕೊಡುಗೆ ಮಹತ್ತ್ವದ್ದು ಎಂದು ಅಭಿಪ್ರಾಯ ಪಟ್ಟರು. ಹಿರಿಯ ಟ್ರಸ್ಟಿ ಎಸ್.ವಿ ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಕೋಶಾಧಿಕಾರಿ ಎಚ್.ಎನ್ ಶೃಂಗೇಶ್ವರ, ಟ್ರಸ್ಟಿಗಳಾದ ವಿ .ಜಿ.ಶೆಟ್ಟಿ, ನಾರಾಯಣ ಎಂ. ಹೆಗಡೆ, ಮೀನಾಲಕ್ಷಣಿ ಅಡ್ಯಂತಾಯ, ಗಣೇಶ್ ಬ್ರಹ್ಮಾವರ,ನಾಗರಾಜ ಹೆಗಡೆ ಉಪಸ್ಥಿತರಿದ್ದರು. 40 ಕಲಾವಿದರು ಗುರುಗಳಾಗಿ ಸೇವೆ ಸಲ್ಲಿಸಲಿರುವರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆಮಾಡಿ ಅಗತ್ಯ ಸೂಚನೆ ನೀಡಲಾಯಿತು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!