ಯಕ್ಷಶಿಕ್ಷಣ ಟ್ರಸ್ಟ್( ರಿ)ಉಡುಪಿ,ಇವರ ಸಹಕಾರದಿಂದ ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಅಗಸ್ಟ್ 8 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದಾನಿಗಳಾದ ಸುಜಿತ್ ಎಸ್. ಅಮೀನ್ ರವರು ನೆರವೇರಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಸದಸ್ಯರಾದ ನಾರಾಯಣ ಎಂ.ಹೆಗಡೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.ಯಕ್ಷಗಾನ ಗುರುಗಳಾದ ಬಿ. ಕೇಶವ್ ರಾವ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸುಜಿತ್ ಎಸ್.ಅಮೀನ್ ರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗದೀಶ್ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಶಕೀಲಾ ಕಾರ್ಯಕ್ರಮವನ್ನು ನಿರೂಪಿಸಿ, ಯಕ್ಷಗಾನ ತರಬೇತಿಯ ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ವಾಣಿಶ್ರೀ ಅವರು ವಂದಿಸಿದರು.ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.