Yakshagana Kalaranga

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ಕಾರ್ಯಕ್ರಮ – 2024

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ.

ಸೆಪ್ಟೆಂಬರ್ 29, 2024 ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 20ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕಿರಿಯ ಸ್ವಾಮೀಜಿ ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತರಿದ್ದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಮಣಿಪಾಲ ಮಾಹೆಯ ಉಪಕುಲಪತಿಗಳಾದ ಲೆ. ಜ. (ಡಾ.) ಎಂ. ಡಿ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಪ್ರಸಾದ್ ಅಡ್ಯಂತಾಯ, ಡಾ. ಜಿ. ಎಸ್. ಚಂದ್ರಶೇಖರ, ಶ್ರೀ ಕೆ. ರಘುಪತಿ ಭಟ್, ಶ್ರೀ ಯು. ವಿಶ್ವನಾಥ ಶೆಣೈ, ಶ್ರೀ ಎಚ್. ನಾಗರಾಜ ಶೆಟ್ಟಿ, ಶ್ರೀ ಕೆ. ಅಶೋಕ್ ನಾಯಕ್, ಶ್ರೀ ಪಿ. ಸದಾನಂದ ಶೆಣೈ, ಶ್ರೀ ಕೆ. ಸದಾಶಿವ ಭಟ್, ಶ್ರೀಮತಿ ವಿಲಾಸಿನಿ ಬಾಬುರಾಯ ಶೆಣೈ, ಶ್ರೀ ಯು. ಎಸ್. ರಾಜಗೋಪಾಲ ಆಚಾರ್ಯ ಇವರ ಗೌರವ ಉಪಸ್ಥಿತಿಯಲ್ಲಿ ಡಾ. ಎಚ್. ಎಸ್. ಶೆಟ್ಟಿ, ಡಾ. ಜೆ. ಎನ್. ಭಟ್, ಡಾ. ಬಿ. ಭಾಸ್ಕರ ರಾವ್, ವಿ. ಗುಂಡಿಬೈಲ್ ಸುಬ್ರಹ್ಮಣ್ಯ ಭಟ್, ಶ್ರೀ ಹರಿಪ್ರಸಾದ್ ಭಟ್, ಡಾ. ರಂಜಿತ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ತಮ್ಮ ಅಪೂರ್ವ ಅನುಭವಗಳನ್ನು ಹಂಚಿಕೊಂಡರು.
ಚೆನ್ನೈನ ಕೆ. ಅಣ್ಣಾಮಲೈಯವರು ಪ್ರತೀ ವರ್ಷ ನೀಡುತ್ತಿರುವ ರೂ. 25000/- ನೆರವನ್ನು ಬೈಂದೂರು ಸರಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಧಿಕ ಅಂಕಗಳಿಸಿದ ನಾಲ್ವರು ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು. ಯು. ಉಪೇಂದ್ರ ಅವರ ನೆನಪಿನಲ್ಲಿ ಉತ್ತಮ ಕಡತ ನಿರ್ವಹಣೆಗೆ ನೀಡುವ ಹಾಗೂ ಅಕ್ಷತಾ ದೇವಾಡಿಗ ಇವಳ ಸ್ಮರಣಾರ್ಥ ಉತ್ತಮ ಪತ್ರ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಎಸ್. ವಿ. ಭಟ್ ಶ್ರೀಗಳಿಗೆ ಫಲಸಮರ್ಪಿಸಿದರು. ಅಶೋಕ್ ಎಂ. ವಂದಿಸಿದರು. ಜೊತೆಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ ನಿರೂಪಿಸಿದರು.

ಪ್ರತ್ಯರ್ಪಣ ಗುಣದಿಂದಲೇ ಜಗತ್ತಿನ ಚಲನೆ – ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ : ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 19 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದ್ದು, ವಿಂಶತಿ ವರ್ಷದಲ್ಲಿ 1182 ವಿದ್ಯಾರ್ಥಿಗಳಿಗೆ 1,15,36,000/- ರೂಪಾಯಿ ವಿದ್ಯಾರ್ಥಿವೇತನವನ್ನು ಸೆಪ್ಟೆಂಬರ್ 29, 2024 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿತರಿಸಲಾಯಿತು.

ಪ್ರತ್ಯರ್ಪಣ ಗುಣದಿಂದಲೇ ಜಗತ್ತಿನ ಚಲನೆ ನಡೆಯುತ್ತದೆ. ಪಡೆದ ಸಹಾಯವನ್ನು ದಾನದ ರೂಪದಲ್ಲಿ ಮುಂದಿನ ಪೀಳಿಗೆಗೆ ತಲುಪಿಸಿದರೆ ಬದುಕು ಸಾರ್ಥಕವಾಗುತ್ತದೆ. ಕರ್ತವ್ಯಗಳನ್ನು ಶ್ರದ್ಧೆಯಿಂದ ಮಾಡಿದಾಗ ಅವಕಾಶಗಳು ಒದಗಿಬರುತ್ತವೆ. ಗೀತೆಯ ಸಂದೇಶದಂತೆ ಭಗವದರ್ಪಣ ಬುದ್ಧಿಯಿಂದ ಮಾಡಿದ ಕೆಲಸ ಸಾರ್ಥಕವಾಗುತ್ತದೆ. ಲೌಕಿಕ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ವಿದ್ಯೆಯನ್ನು ಕಲಿತು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದು ಹಾರೈಸಿದರು. ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ತಮ್ಮ ಆಶೀರ್ವಚನದಲ್ಲಿ ವಿದ್ಯೆ ವಿನಯದಿಂದ ಶೋಭಿಸುತ್ತದೆ. ವಿದ್ಯಾರ್ಥಿಗಳು ವಿನಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ 20 ವಿದ್ಯಾರ್ಥಿಗಳಿಗೆ ಚೆಕ್ ಮತ್ತು 10 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪನ್ನು ವಿತರಿಸಲಾಯಿತು. ಧಾರವಾಡ ವಿದ್ಯಾಪೋಷಕ್‍ನ ಸ್ಥಾಪಕ ವಿಶ್ವಸ್ಥರಾದ ಪ್ರಮೋದ್ ಕುಲಕರ್ಣಿಯವರಿಗೆ ಸ್ವಾಮೀಜಿಯವರು ಸ್ಮರಣಿಕೆ, ಅಭಿನಂದನಾ ಪತ್ರ ನೀಡಿ ಅನುಗ್ರಹಿಸಿದರು. ಅಭ್ಯಾಗತರಾಗಿ ಕೋಟ ಗೀತಾನಂದ ಫೌಂಡೇಶನ್‍ನ ಆನಂದ ಸಿ. ಕುಂದರ್, ಬೆಂಗಳೂರು ಟೆಕ್ಸೈಲ್ ಪ್ರೈ. ಲಿ.ನ ಎಂ. ಡಿ. ಹರೀಶ್ ರಾಯಸ್, ಮುಂಬೈ ಒಎನ್‍ಜಿಸಿಯ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್, ಉಡುಪಿ ಸಾಯಿರಾಧ ಸಮೂಹ ಸಂಸ್ಥೆಗಳ ಮನೋಹರ ಎಸ್. ಶೆಟ್ಟಿ, ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರಿಶ್ಚಂದ್ರ, ಮಂಗಳೂರು ಪ್ರೇರಣಾ ಇನ್ಫೋಸಿಸ್‍ನ ರವಿರಾಜ ಬೆಳ್ಮ, ಉದ್ಯಮಿ ಆನಂದ ಪಿ. ಸುವರ್ಣ, ಉದ್ಯಮಿ ಕೆ. ನಾಗರಾಜ ರಾವ್, ಬ್ರಹ್ಮಾವರ ಪ್ರಣವ್ ಆಸ್ಪತ್ರೆಯ ಡಾ. ರಂಜಿತ್ ಕುಮಾರ್ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಶ್ರೀಮತಿ ವಿದ್ಯಾಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದರು. ಜತೆ ಕಾರ್ಯದರ್ಶಿ ಎಚ್. ಎನ್. ಶೃಂಗೇಶ್ವರ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!