Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2024 ಬೈಂದೂರು ಉದ್ಘಾಟನೆ ಮತ್ತು ಸಮಾರೋಪ

30-12-2024 ರಂದು ಬೈಂದೂರಿನಲ್ಲಿ ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆಗೊಂಡಿತು. ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಸಂಜೀವ ಗಾಣಿಗರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಉದ್ಯಮಿಗಳಾದ ದಯಾನಂದ ಬಾಸ್ ಬೈಲ್, ದೀನಪಾಲ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ, ಸುರೇಶ ಬಚವಾಡಿ,ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ, ಹೆಚ್. ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ ಭಾಗವಹಿಸಿದ್ದರು. ಬೈಂದೂರಿನ ಯಕ್ಷಗುರುಕುಲದ ಸಂಚಾಲಕರಾದ ಸುನಿಲ್ ಹೊಲಾಡು ಸ್ವಾಗತಿಸಿದ ಕಾರ್ಯಕ್ರಮವನ್ನು ಶಿಕ್ಷಕರಾದ ಸುಧಾಕರ್ ಪಿ. ನಿರ್ವಹಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶಾಸಕರನ್ನು ಅಭಿನಂದಿಸಿದರು. ಬಳಿಕ ಸರಕಾರಿ ಪ್ರೌಢಶಾಲೆ, ಕಂಬದಕೋಣೆ ಇಲ್ಲಿನ ವಿದ್ಯಾರ್ಥಿಗಳಿಂದ, ಹೆಮ್ಮಾಡಿ ಪ್ರಭಾಕರ್ ಆಚಾರ್ಯ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಮತ್ತು ಸರ್ಕಾರಿ ಪ್ರೌಢಶಾಲೆ, ಉಪ್ಪುಂದ ಇಲ್ಲಿನ ವಿದ್ಯಾರ್ಥಿಗಳಿಂದ ಶ್ರೀಧರ ಗಾಣಿಗ ಇವರ ನಿರ್ದೇಶನದಲ್ಲಿ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.

ಬೈಂದೂರಿನಲ್ಲಿ ಎರಡು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ ಡಿಸೆಂಬರ್ 31, 2024 ರಂದು ಕೊನೆಗೊಂಡಿತು. ಸಮಾರೋಪ ಸಮಾರಂಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ನಾರಾಯಣ ಎಂ. ಹೆಗಡೆ, ಹೆಚ್. ಎನ್. ಶೃಂಗೇಶ್ವರ, ಲಾವಣ್ಯ ಸಂಘಟನೆಯ ಅಧ್ಯಕ್ಷರಾದ ನರಸಿಂಹ ನಾಯಕ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಗೋಪಾಲ ಪೂಜಾರಿ ಮತ್ತು ಪ್ರಕಾಶ್ ಶಾನುಭಾಗ್ ಅಭ್ಯಾಗತರಾಗಿ ಭಾಗವಹಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಮಾನ್ಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ವಿಶೇಷ ಕಲಾಸಕ್ತಿಯನ್ನು ಕೃತಜ್ಞತೆಯಿಂದ ಸ್ಮರಿಸಿಕೊಂಡು, ಎಲ್ಲರನ್ನು ಸ್ವಾಗತಿಸಿದರು. ಸಭೆಯ ಪೂರ್ವದಲ್ಲಿ ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರ ಇಲ್ಲಿನ ವಿದ್ಯಾರ್ಥಿಗಳಿಂದ, ಶ್ರೀಧರ ಗಾಣಿಗ ನಿರ್ದೇಶನದಲ್ಲಿ ವೃಷಸೇನ ಕಾಳಗ ಬಳಿಕ ಸರಕಾರಿ ಪ್ರೌಢಶಾಲೆ, ಬೈಂದೂರು ಇದರ ವಿದ್ಯಾರ್ಥಿಗಳಿಂದ ಗಣೇಶ ದೇವಾಡಿಗ ನಿರ್ದೇಶನದಲ್ಲಿ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು. ಶೋಧನ್ ಕುಮಾರ್ ಕಾರ್ಯಕ್ರಮದ ಸಂಯೋಜಕರಾಗಿ ಸಹಕರಿಸಿದರು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!