Yakshagana Kalaranga

ಯಕ್ಷಶಿಕ್ಷಣ ಸನಿವಾಸ ಶಿಬಿರ– 2025 ಉದ್ಘಾಟನೆ

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ,ಭೀಮ ಗೋಲ್ಡ್ ಪ್ರೈ.ಲಿ.,ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದುವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2025ನ್ನು 22.03.2025 ರಂದು ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು.ಯಕ್ಷಗಾನ ಶಿಕ್ಷಣ,ವಿದ್ಯಾರ್ಥಿಗಳ ಶೖಕ್ಷಣಿಕ ಕಲಿಕೆಗೆ ಪೂರಕವಾಗಿ ಧನಾತ್ಮಕ ಪರಿಣಾಮ ಬೀರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಯಕ್ಷಗಾನ ಪರಿಪೂರ್ಣ ಕಲಾಪ್ರಕಾರವಾಗಿದ್ದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣ ವಾಗುತ್ತದೆ ಎಂದರು. ಭೀಮ ಗೋಲ್ಡ್ ಪ್ರೈ. ಲಿ. ನ ರಾಘವೇಂದ್ರ ಭಟ್ ಹಾಗೂ ಗುರುಪ್ರಸಾದ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಡಾ.ಕಾವ್ಯಾ ನರೇಂದ್ರ ಬಲ್ಲಾಳ,ಶಿಬಿರದ ನಿರ್ದೇಶಕ ಗುರು ಬನ್ನಂಜೆ ಸಂಜೀವ ಸುವರ್ಣ, ನರಸಿಂಹ ತುಂಗ, ಆದ್ಯತಾ ಭಟ್, ಎಸ್. ವಿ. ಭಟ್, ಯು. ವಿಶ್ವನಾಥ ಶಣೈ, ಯು.ಎಸ್. ರಾಜಗೋಪಾಲ ಆಚಾರ್ಯ, ಎಚ್. ಎನ್ ಶೃಂಗೇಶ್ವರ, ಭುವನ ಪ್ರಸಾದ ಹೆಗ್ಡೆ,ವಿದ್ಯಾ ಪ್ರಸಾದ್,ಅಜಿತ್ ಕುಮಾರ್, ಮಹೇಶ್ ಕುಮಾರ್,ರತ್ನಾಕರ ಶೆಣೈ,ನಿತ್ಯಾನಂದ ಶೆಟ್ಟಿಗಾರ್,ನಾಗೇಂದ್ರ ಗಾಣಿಗ ಉಪಸ್ಥಿತರಿದ್ದರು.ನಾರಾಯಣ ಎಂ.ಹೆಗಡೆ ಸ್ವಾಗತಿಸಿದರು. ಕಲಾರಂಗದ ಅಧ್ಯಕ್ಷರಾದ ಎಂ.ಗಂಗಾಧರ ರಾವ್ ವಂದಿಸಿದರು, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಬಿರದ ಸಂಯೋಜಕರಾದ ನಿರಂಜನ ಭಟ್ ನಿರೂಪಿಸಿದರು. ಒಂದು ವಾರದ ಸನಿವಾಸ ಶಿಬಿರದಲ್ಲಿ ಯಕ್ಷಶಿಕ್ಷಣದ ಶಾಲೆಗಳ 60 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!