Yakshagana Kalaranga

ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ವಿಕಾಳಿಗೆ (ಶ್ರೀಮತಿ ಚಂದ್ರಾವತಿ ಮತ್ತು ಶ್ರೀ ಮಾದೇವ ಖಾರ್ವಿ ಇವರ ಪುತ್ರಿ) ಬೈಂದೂರು ತಾಲೂಕಿನ ಮರವಂತೆಯಲ್ಲಿ ಬೆಂಗಳೂರಿನ ಶ್ರೀಮತಿ ಗೀತಾ ಎಲ್. ಎನ್. ಶೆಟ್ಟಿಯವರು ತಮ್ಮ ತಂದೆ-ತಾಯಿಯವರಾದ ಬಿ. ಎಲ್. ಎನ್. ರೈ ಮತ್ತು ಲಲಿತಾ ರೈಯವರ ಸವಿ ನೆನಪಿನಲ್ಲಿ, 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಲಲಿತಾ ನಿವಾಸ’ವನ್ನು 02.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಠಿಣ ಪರಿಶ್ರಮಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ ನಿರಂತರ ಸಾಧನೆಯಿಂದ ಬದುಕನ್ನು ಕಟ್ಟಿಕೊಳ್ಳುವಂತೆ ವಿದ್ಯಾರ್ಥಿನಿಗೆ ಕಿವಿ ಮಾತು ಹೇಳಿದರು. ತನ್ನ ಮಾವ ಡಾ. ಬಿ.ಬಿ. ಶೆಟ್ಟಿಯವರು ಸ್ಥಾಪಿಸಿದ ಯಕ್ಷಗಾನ ಕಲಾರಂಗ ಇಂದು ಸಮಾಜ ಮುಖಿಯಾಗಿ ಮಾಡುತ್ತಿರುವ ಅಗಾಧ ಕಾರ್ಯ ಕಂಡು ಸಂತೋಷವಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಅವರ ಮಗಳು ಗಾಯತ್ರಿ ಶೆಟ್ಟಿ,ಸೊಸೆ ಶ್ವೇತಾ ಶೆಟ್ಟಿ, ಮಡಾಮಕ್ಕಿ ಶಶಿಧರಶೆಟ್ಟಿ ದಂಪತಿಗಳು ಅಭ್ಯಾಗತರಾಗಿ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಎಸ್. ವಿ. ಭಟ್ ಮಾತನಾಡಿ ಗೀತಾ. ಎಲ್. ಎನ್. ಶೆಟ್ಟಿಯವರು ಒದಗಿ ಬಂದ ಆಘಾತವನ್ನು ಮೆಟ್ಟಿನಿಂತು ಮಾಡಿದ ಸಾಧನೆ ಅವರ ಸಾಹಸದ ವ್ಯಕ್ತಿತ್ವವನ್ನು ಪ್ರದರ್ಶಿಸುತ್ತದೆ. ಪರೋಪಕಾರ ಮನೋಭಾವ ಅವರಿಗೆ ವಂಶ ಪಾರಂಪರ್ಯವಾಗಿ ಬಂದ ಬಳುವಳಿ ಅದು ಅವರ ಮಕ್ಕಳಲ್ಲೂ ಮುಂದುವರಿದಿದೆ ಎಂದರು. ಉಪಾಧ್ಯಕ್ಷ ಪಿ. ಕಿಶನ್ ಹೆಗ್ಡೆ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರುಗಳಾದ ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ಭುವನ ಪ್ರಸಾದ ಹೆಗ್ಡೆ,ಅನಂತರಾಜ ಉಪಾಧ್ಯ, ಕಿಶೋರ್ ಸಿ. ಉದ್ಯಾವರ, ಎಚ್. ಎನ್. ವೆಂಕಟೇಶ್, ಗಣಪತಿ ಭಟ್ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!