Yakshagana Kalaranga

ಯಕ್ಷಗಾನ ಕಲಾರಂಗದ 81ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ (ಶ್ರೀಮತಿ ಶ್ಯಾಮಲಾ ಮತ್ತು ಶ್ರೀ ದೇವೇಂದ್ರ ಇವರ ಪುತ್ರ) ಇವನಿಗೆ ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ. ರಾಜೇಶ್ವರೀ ಜಿ. ಭಟ್ ಅವರು ತಮ್ಮ ತೀರ್ಥರೂಪರಾದ ಕೆ. ರಾಮಕೃಷ್ಣ ರಾವ್ ಅವರ ಸ್ಮರಣೆಯಲ್ಲಿ, 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಜಾನಕೀರಾಮ’ ಮನೆಯನ್ನು 02.12.2025 ರಂದು ಜಾನಕಿ ಕೆ. ಆರ್. ರಾವ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಡಾ. ರಾಜೇಶ್ವರೀ ಜಿ. ಭಟ್ ಅವರು ನಮ್ಮ ಬದುಕು ರೂಪುಗೊಳ್ಳುವಲ್ಲಿ ತಂದೆಯ ವ್ಯಕ್ತಿತ್ವ ತಾಯಿಯ ಪರಿಶ್ರಮ ಮತ್ತು ಮಾರ್ಗದರ್ಶನ ಮಹತ್ತ್ವ್ವದ ಪಾತ್ರ ವಹಿಸಿದೆ ಎಂದರು. ಡಾ. ಗುರುಮೂರ್ತಿಯವರು ಕಲಾರಂಗದ ನಾಯಕತ್ವ, ಪಾರದರ್ಶಕ ವ್ಯವಹಾರ, ಕಾರ್ಯಕರ್ತರ ಅರ್ಪಣಾ ಮನೋಭಾವ ನಮ್ಮ ಮೇಲೆ ಪ್ರಭಾವ ಬೀರಿದೆ. ನಿರಂತರ ಈ ಸಂಸ್ಥೆಯೊಂದಿಗೆ ನಾವಿದ್ದೇವೆ ಎಂದರು. ಯು. ಎಸ್. ರಾಜಗೋಪಾಲ ಆಚಾರ್ಯರು ಡಾ ರಾಜೇಶ್ವರಿಯವರ ತಂದೆ ತಾಯಿಯರ ಉದಾರ ವ್ಯಕ್ತಿತವವನ್ನು ಪರಿಚಯಿಸಿದರು. ಡಾ. ಕೆ. ಆರ್. ಗುರುಪ್ರಸಾದ್ ಮಾತನಾಡಿ ಸಮಾಜಮುಖಿಯಾಗಿ ಕೆಲಸ ಮಾಡುವ ಕಲಾರಂಗದ ಪರಿಚಯವಾದುದು ಅತ್ಯಂತ ಸಂತಸ ತಂದಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಲಾರಂಗದಂತಹ ಸಂಸ್ಥೆ ಎಲ್ಲಾ ಊರುಗಳಲ್ಲಿದ್ದರೆ ರಾಮರಾಜ್ಯದ ಕನಸು ನನಸಾಗುವದು ಸುಲಭ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಶಕುಂತಲಾ ಭಟ್, ಕಾರ್ತಿಕ್ ಭಟ್, ಸಂಸ್ಥೆಯ ಉಪಾಧ್ಯಕ್ಷರಾದ, ಎಸ್ ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಜತೆಕಾರ್ಯದರ್ಶಿ ವಿದ್ಯಾಪ್ರಸಾದ್, ಸದಸ್ಯರಾದ ಭುವನ ಪ್ರಸಾದ ಹೆಗ್ಡೆ, ಎ. ಅನಂತರಾಜ ಉಪಾಧ್ಯ, ಮಂಜುನಾಥ ಹೆಬ್ಬಾರ್, ಕಿಶೋರ್ ಸಿ. ಉದ್ಯಾವರ, ಡಾ. ರಾಜೇಶ ನಾವಡ, ಎ. ಅಜಿತ್ ಕುಮಾರ್, ಪ್ರಭಾಕರ ಬಂಡಿ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಗಂಗಾದ ಉಪನ್ಯಾಸಕಿ ದಿವ್ಯಾ ಭಟ್ ಪ್ರಾರ್ಥನೆಗೈದರು.

Leave a Comment

Your email address will not be published. Required fields are marked *

We're currently hard at work gathering information and crafting content to bring you the best experience. Stay tuned for exciting updates!