Yakshagana Kalaranga

Yakshagana Kalaranga

ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ

ಪದವಿಯೊಂದಿಗೆ ಮಾನವೀಯ ಗುಣವನ್ನು ಬೆಳೆಸಿಕೊಳ್ಳಿ – ಡಾ. ಮಹಾಬಲೇಶ್ವರ ರಾವ್ ಕೇವಲ ಪದವಿ ಪಡೆಯುವುದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಸಾಕಷ್ಟು ಕೌಶಲ್ಯಗಳ ತರಬೇತಿಯನ್ನು ಪಡೆದಿರಬೇಕು. ಶೈಕ್ಷಣಿಕ ಪಠ್ಯದೊಂದಿಗೆ ವರ್ತಮಾನ ಕಾಲದ ಎಲ್ಲಾ ವಿದ್ಯಾಮಾನಗಳ ಅರಿವು ವಿದ್ಯಾರ್ಥಿಗಳಿಗಿರಬೇಕು. ಸಾಮರ್ಥ್ಯ ಸ್ಥಾಪಿಸಿಕೊಳ್ಳುವ ಮೂಲಕ ವೃತ್ತಿ ಕೌಶಲ್ಯದೊಂದಿಗೆ ಶ್ರದ್ಧೆವಹಿಸಿ ದುಡಿದರೆ ಉನ್ನತ ಸ್ಥಾನಗಳು ದೊರೆಯುತ್ತವೆ. ಇದರೊಂದಿಗೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಡಾ. ರಾವ್ ಕರೆ ನೀಡಿದರು. ಅವರು ಉಡುಪಿಯ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಅಂತಿಮ ಪದವಿ ಓದುತ್ತಿರುವ […]

ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ Read More »

ಯಕ್ಷಗಾನ ಕಲಾರಂಗ (ರಿ.) ಉಡುಪಿ – 51ನೇ ವಾರ್ಷಿಕ ಮಹಾಸಭೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ 51ನೇ ವಾರ್ಷಿಕ ಮಹಾಸಭೆಯು 11.07.2026ರಂದು ಸಂಜೆ 6.00 ಗಂಟೆಗೆ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಿತು. ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಅಗಲಿದ ಸದಸ್ಯರಿಗೆ, ಕಲಾವಿದರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಗತ ಮಹಾಸಭೆಯ ವರದಿ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ 2025-26ರ ಪರಿಶೋಧಿತ ಲೆಕ್ಕಪತ್ರ ಮಂಡಿಸಿದರು. 2026-27ನೇ ಸಾಲಿಗೆ ಸಿಎ

ಯಕ್ಷಗಾನ ಕಲಾರಂಗ (ರಿ.) ಉಡುಪಿ – 51ನೇ ವಾರ್ಷಿಕ ಮಹಾಸಭೆ Read More »

ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ

05.7.2026: ಯಕ್ಷಗಾನ ಕಲಾರಂಗದ ಐ.ವೈ.ಸಿ.ಸಭಾಂಗಣದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ‘ಶ್ರೀಮತಿ ಪರಿಣಯ’ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು. ಸೋದೆ ಮಠಾಧೀಶರಾದ ಶ್ರೀ.ಶ್ರೀ.ವಿಶ್ವವಲ್ಲಭ ತೀರ್ಥ ಶ್ರೀಪಾದರು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 12.7.2026 : ಯಕ್ಷಗಾನ ಕಲಾರಂಗದಲ್ಲಿ ಬಡಗುತಿಟ್ಟಿನ ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರಿಂದ ‘ಪವನಸುತ ಪಾಂಚಾಲೆ’, ಯಕ್ಷಗಾನ ಅತ್ಯಂತ ಸೊಗಸಾಗಿ ಪ್ರದರ್ಶನಗೊಂಡಿತು. ಅದಮಾರು ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಯಕ್ಷಗಾನವನ್ನು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.

ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ Read More »

ಯಕ್ಷಗಾನ ಕಲಾರಂಗ – ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಯಕ್ಷಗಾನ ಕಲಾರಂಗವು ಸಾಧಕ ಹಿರಿಯ ಅರ್ಥಧಾರಿಗಳಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾ ಭವನದಲ್ಲಿ ಇಂದು (11/07/26) ಜರುಗಿತು. ಈ ವರ್ಷ ಹೊಸದಾಗಿ ಸೇರಿಕೊಂಡ ಡಿ. ಬಿ. ವೆಂಕಟಸುಬ್ಬಾ ಜೋಯಿಸ್ ಹಾಗು ಮಟ್ಟಿ ಮುರಳೀಧರ ರಾವ್, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ರೂ.20000 ನಗದನ್ನೊಳಗೊಂಡ ಪ್ರಶಸ್ತಿಗಳನ್ನು ಅನುಕ್ರಮವಾಗಿ ಶ್ರೀ ವೆಂಕಟರಾಮ ಭಟ್ಟ, ಸುಳ್ಯ, ಡಾ. ಜಿ. ಕೆ. ಹೆಗಡೆ, ಹೊನ್ನಾವರ, ಶ್ರೀ ಕೋಟೆ ರಾಮ ಭಟ್, ಕಾರ್ಕಳ ಇವರುಗಳಿಗೆ ಪ್ರದಾನ

ಯಕ್ಷಗಾನ ಕಲಾರಂಗ – ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ Read More »

ವಿದ್ಯಾಪೋಷಕ್ ಸೂರು ನೂರರ ಸಡಗರ

ಸೂರು ನೂರರ ಸಡಗರಯಕ್ಷಗಾನ ಕಲಾರಂಗ 2012ರಲ್ಲಿ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಪಲ್ಲವಿ ಮತ್ತು ಅವಳ ತಂದೆ ಯಕ್ಷಗಾನದ ಹಾಸ್ಯ ಕಲಾವಿದ ಭೋಜ ಮರಕಾಲರರ ಕುಟುಂಬಕ್ಕೆ ಮನೆಯನ್ನು ನಿರ್ಮಿಸಿಕೊಟ್ಟಿತು. ಅದು ಇಂದಿಗೆ ನೂರನ್ನು ತಲುಪಿ ಸಂಸ್ಥೆ ‘ಸೂರು ನೂರರ ಸಡಗರ’ ಎಂಬ ಶೀರ್ಷಿಕೆಯಲ್ಲಿ ಜೂನ್ 28, 2026 ಭಾನುವಾರದಂದು ಐವೈಸಿ ಸಭಾಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಉಡುಪಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಅನುಗ್ರಹ ಸಂದೇಶ ನೀಡುತ್ತಾ ಯಕ್ಷಗಾನ ಕಲಾರಂಗ ಸಮರ್ಪಣಾ ಭಾವದಿಂದ

ವಿದ್ಯಾಪೋಷಕ್ ಸೂರು ನೂರರ ಸಡಗರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ.ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ (ಶಕುಂತಲಾ ಮತ್ತು ಶಿವ ಇವರ ಪತ್ರಿ) ಎಲ್ಲ ಫಲಾನುಭವಿಗಳ ಪ್ರಾಯೋಜಕತ್ವದಲ್ಲಿ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಶತಸ್ಮೃತಿ’ 28.06.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯರು ಅನ್ನದಾನ ಶ್ರೇಷ್ಠದಾನ ಅದಕ್ಕಿಂತಲೂ ಉನ್ನತವಾದುದು ವಿದ್ಯಾ ದಾನ. ಅನ್ನವು ಕ್ಷಣಿಕವಾದ ತೃಪ್ತಿಯನ್ನು ಕೊಡುತ್ತದೆ. ವಿದ್ಯಾದಾನ ಅನ್ನವನ್ನು ಗಳಿಸುವ ಮಾರ್ಗ ತೋರಿಸುತ್ತದೆ. ಯಕ್ಷಗಾನ ಕಲಾರಂಗದವರು

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 100ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 98ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೀಷಾ ಖಾರ್ವಿ (ಶ್ರೀಮತಿ ಅನಿತಾ ಮತ್ತು ಶ್ರೀ ಮಂಜುನಾಥ ಖಾರ್ವಿ ಇವರ ಪುತ್ರಿ, sslc 95%,1 puc 97%) ಇವಳಿಗೆ ಗಂಗೊಳ್ಳಿಯಲ್ಲಿ, ತನ್ನ ಮಾತಾಪಿತೃಗಳಾದ ಜಲಜಾಕ್ಷಿ ಮತ್ತು ರಾಘವೇಂದ್ರ ರಾವ್ ಇವರ ಸ್ಮರಣೆಯಲ್ಲಿ ಅವರ ಸುಪುತ್ರ ಮುಂಬೈಯ ಶ್ರೀ ಆರ್. ಸುಂದರ ರಾವ್ ಮತ್ತು ಸೊಸೆ ಶ್ರೀಮತಿ ಪ್ರೇಮಾ ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀ ರಾಘವೇಂದ್ರ ನಿಲಯ’ ನಿನ್ನೆ (12.06.2026) ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಸುಂದರ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 98ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026

ವೃತ್ತಿ ಮೇಳದ ಯುವ ಕಲಾವಿದರಿಗೆ ಯಕ್ಷಗಾನ ಕಲಾರಂಗವು ಆಯೋಜಿಸಿದ್ದ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರದ ಸಮಾರೋಪ ಮತ್ತು ಸಂಸ್ಥೆ ಯಕ್ಷ ವಿದ್ವಾಂಸರಿಗೆ ನೀಡುತ್ತಾ ಬಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸಮಾರಂಭವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು (05.06.2026) ಜರುಗಿತು. 60000 ರೂ. ನಗದನ್ನೊಳಗೊಂಡ ಈ ಪ್ರಶಸ್ತಿಯನ್ನು ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮಕರ್ತೃ ಡಾ. ಜಿ. ಭೀಮೇಶ್ವರ ಜೋಶಿಯವರು ಪ್ರದಾನ ಮಾಡಿ, ಕಲಾರಂಗವು ಕಲೆ-ಶಿಕ್ಷಣ-ಸಮಾಜಕ್ಕೆ ಮಾಡುತ್ತಿರುವ ಸೇವೆ ಅನ್ಯಾದೃಶ.

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026 Read More »

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026

ಮಾರ್ಗದರ್ಶಿ ಶಿಬಿರ ಉದ್ಘಾಟನೆ.ಉಡುಪಿಯ ಯಕ್ಷಗಾನ ಕಲಾರಂಗ ವೃತ್ತಿ ಮೇಳದ ಯುವ ಕಲಾವಿದರಿಗೆ ಆಯೋಜಿಸಿದ ನಾಲ್ಕು ದಿನಗಳ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಉದ್ಘಾಟನೆ 02.06.2026ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಜರುಗಿತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡಿ ಯಕ್ಷಗಾನದಂತಹ ಶೈಲೀಕೃತ ಕಲೆ ಪರಂಪರೆಯೊಂದಿಗೆ ಔಚಿತ್ಯವರಿತು ಹೊಸತನ್ನು ಸೇರಿಸಿಕೊಳ್ಳತ್ತಾ ಬೆಳೆಯಬೇಕಾಗಿದೆ. ಪ್ರಜ್ಞಾವಂತ ಕಲಾವಿದ ಇದನ್ನು ಮಾಡಲು ಸಾಧ್ಯ. ಇದಕ್ಕೆ ಇಂತಹ ಶಿಬಿರಗಳು ಪೂರಕವಾಗುತ್ತವೆ. ಯಕ್ಷಗಾನ ಕಲಾರಂಗ ಕಲಾವಿದರ ಕ್ಷೇಮ ಚಿಂತನೆಯೊಂದಿಗೆ

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 Read More »

We're currently hard at work gathering information and crafting content to bring you the best experience. Stay tuned for exciting updates!