ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026
ವೃತ್ತಿ ಮೇಳದ ಯುವ ಕಲಾವಿದರಿಗೆ ಯಕ್ಷಗಾನ ಕಲಾರಂಗವು ಆಯೋಜಿಸಿದ್ದ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರದ ಸಮಾರೋಪ ಮತ್ತು ಸಂಸ್ಥೆ ಯಕ್ಷ ವಿದ್ವಾಂಸರಿಗೆ ನೀಡುತ್ತಾ ಬಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸಮಾರಂಭವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು (05.06.2026) ಜರುಗಿತು. 60000 ರೂ. ನಗದನ್ನೊಳಗೊಂಡ ಈ ಪ್ರಶಸ್ತಿಯನ್ನು ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮಕರ್ತೃ ಡಾ. ಜಿ. ಭೀಮೇಶ್ವರ ಜೋಶಿಯವರು ಪ್ರದಾನ ಮಾಡಿ, ಕಲಾರಂಗವು ಕಲೆ-ಶಿಕ್ಷಣ-ಸಮಾಜಕ್ಕೆ ಮಾಡುತ್ತಿರುವ ಸೇವೆ ಅನ್ಯಾದೃಶ. […]








