Yakshagana Kalaranga

Yakshagana Kalaranga

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026

ವೃತ್ತಿ ಮೇಳದ ಯುವ ಕಲಾವಿದರಿಗೆ ಯಕ್ಷಗಾನ ಕಲಾರಂಗವು ಆಯೋಜಿಸಿದ್ದ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರದ ಸಮಾರೋಪ ಮತ್ತು ಸಂಸ್ಥೆ ಯಕ್ಷ ವಿದ್ವಾಂಸರಿಗೆ ನೀಡುತ್ತಾ ಬಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸಮಾರಂಭವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು (05.06.2026) ಜರುಗಿತು. 60000 ರೂ. ನಗದನ್ನೊಳಗೊಂಡ ಈ ಪ್ರಶಸ್ತಿಯನ್ನು ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮಕರ್ತೃ ಡಾ. ಜಿ. ಭೀಮೇಶ್ವರ ಜೋಶಿಯವರು ಪ್ರದಾನ ಮಾಡಿ, ಕಲಾರಂಗವು ಕಲೆ-ಶಿಕ್ಷಣ-ಸಮಾಜಕ್ಕೆ ಮಾಡುತ್ತಿರುವ ಸೇವೆ ಅನ್ಯಾದೃಶ. […]

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 ಸಮಾರೋಪ ಮತ್ತು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ – 2026 Read More »

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026

ಮಾರ್ಗದರ್ಶಿ ಶಿಬಿರ ಉದ್ಘಾಟನೆ.ಉಡುಪಿಯ ಯಕ್ಷಗಾನ ಕಲಾರಂಗ ವೃತ್ತಿ ಮೇಳದ ಯುವ ಕಲಾವಿದರಿಗೆ ಆಯೋಜಿಸಿದ ನಾಲ್ಕು ದಿನಗಳ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಉದ್ಘಾಟನೆ 02.06.2026ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಜರುಗಿತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡಿ ಯಕ್ಷಗಾನದಂತಹ ಶೈಲೀಕೃತ ಕಲೆ ಪರಂಪರೆಯೊಂದಿಗೆ ಔಚಿತ್ಯವರಿತು ಹೊಸತನ್ನು ಸೇರಿಸಿಕೊಳ್ಳತ್ತಾ ಬೆಳೆಯಬೇಕಾಗಿದೆ. ಪ್ರಜ್ಞಾವಂತ ಕಲಾವಿದ ಇದನ್ನು ಮಾಡಲು ಸಾಧ್ಯ. ಇದಕ್ಕೆ ಇಂತಹ ಶಿಬಿರಗಳು ಪೂರಕವಾಗುತ್ತವೆ. ಯಕ್ಷಗಾನ ಕಲಾರಂಗ ಕಲಾವಿದರ ಕ್ಷೇಮ ಚಿಂತನೆಯೊಂದಿಗೆ

ಯಕ್ಷಗಾನ ಮಾರ್ಗದರ್ಶಿ ಶಿಬಿರ – 2026 Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ ಅಮಾಸೆಬೈಲಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾನ್ವಿತ (ಶ್ರೀಮತಿ ಶೋಭಾ ಮತ್ತು ಶ್ರೀ ಸುರೇಶ್ ಕೊಠಾರಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಅಮಾಸೆಬೈಲಿನಲ್ಲಿ ಉಡುಪಿ ಅಂಬಲಪಾಡಿಯ ಶ್ರೀಮತಿ ಮೀರಾ ರಾಮಮೂರ್ತಿ ಭಟ್ಟ ಮತ್ತು ಮಕ್ಕಳು ರಾಮಮೂರ್ತಿ ಭಟ್ಟ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ರಾಮಮೂರ್ತಿ’ 28.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಮೀರಾ ರಾಮಮೂರ್ತಿ ಭಟ್ಟರು ಮಾತನಾಡಿ ‘ಕೆರೆಯ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 97ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 96ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾನ್ಯ ಎಂ. (ಎಸ್.ಎಸ್.ಎಲ್.ಸಿ 99.36%, ಶ್ರೀಮತಿ ಪದ್ಮಾವತಿ ಮತ್ತು ದಿ. ಮಹಾಬಲ ಮರಕಾಲ ಇವರ ಪುತ್ರಿ) ಇವಳಿಗೆ ಬೈಂದೂರು ತಾಲೂಕಿನ ಪಡುವರಿಯಲ್ಲಿ, ತನ್ನ ಮಾತಾಪಿತೃಗಳಾದ ಸತ್ಯಭಾಮ ಮತ್ತು ವೆಂಕಟನರಸಿಂಹ ಉಪಾಧ್ಯಾಯ ಇವರ ಸ್ಮರಣೆಯಲ್ಲಿ ಅವರ ಪುತ್ರ, ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಜಿ. ಎಂ.,ಕಾರ್ಕಳ ಕಲ್ಮಠದ ಶ್ರೀ ದೇವಾನಂದ ಉಪಾಧ್ಯಾಯ ಮತ್ತು ಪತ್ನಿ ಶ್ರೀಮತಿ ನಮಿತಾ ಉಪಾಧ್ಯಾಯರ ಪ್ರಾಯೋಜಕತ್ವದಲ್ಲಿ ಪುನರ್ನವೀಕರಣಗೊಂಡ ಮನೆ ‘ಭಾನು’ 24.05.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 96ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ( ಶ್ಯಾಮಲಾ ಮತ್ತು ಚಂದ್ರ ನಾಯ್ಕ್ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕೆರಾಡಿಯಲ್ಲಿ ಉಡುಪಿಯ ಸಾಮಾಜಿಕ ಕಳಕಳಿಯ ಐವರು ಮಿತ್ರರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ಪಂಚಮ್’ 09.05.2026 ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಹಾಗೂ ಉದ್ಯಮಿ-ಶಿಕ್ಷಣ ಪ್ರೇಮಿ ಕೆರಾಡಿ ಚಂದ್ರಶೇಖರ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಗೆ ಆಯ್ಕೆ ಮಾಡಲು ವಿದ್ಯಾರ್ಥಿಗಳ ಮನೆ ಭೇಟಿ ಮಾಡುತ್ತದೆ

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 95ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸೃಜನ್ ಎಸ್. (SSLCಯಲ್ಲಿ 87.36%, ಶ್ರೀಮತಿ ರಮ್ಯಾ ಮತ್ತು ಶ್ರೀ ಸತೀಶ್ ಭಂಡಾರಿ ಇವರ ಪುತ್ರ) ಇವನಿಗೆ ಹೆಬ್ರಿ ತಾಲೂಕಿನ ಆರ್ಡಿಯಲ್ಲಿ ಕನ್ನರ್ಪಾಡಿಯ ಡಾ. ಪಿ. ಆರ್. ರಾಜಗೋಪಾಲ ಮತ್ತು ಶ್ರೀ ಪಿ. ಆರ್. ರಮೇಶ್ ಇವರು ತಮ್ಮ ಮಾತಾ-ಪಿತೃಗಳಾದ ಪಿ. ರಾಘವೇಂದ್ರ ತಂತ್ರಿ ಮತ್ತು ಯಶೋದಾ ಆರ್. ತಂತ್ರಿ ಇವರ ಸ್ಮರಣೆಯಲ್ಲಿ ನಿರ್ಮಿಸಿದ ನೂತನ ಮನೆ ‘ಯಶೋರಾಗ’ 04.05.2026 ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 94ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಜನಿ(sslcಯಲ್ಲಿ 98%, 1puc 97%),(ಶ್ರೀಮತಿ ಸರಸ್ವತಿ ಮತ್ತು ಶ್ರೀ ಬಸವ ಪೂಜಾರಿ ಇವರ ಪುತ್ರಿ) ಇವಳಿಗೆ ಬ್ರಹ್ಮಾವರದ ತಾಲೂಕಿನ ವಡ್ಡರ್ಸೆಯಲ್ಲಿ ಶ್ರೀ ದಯಾಶಂಕರ ಶೆಟ್ಟಿ ಮತ್ತು ಶ್ರೀಮತಿ ಪ್ರತಿಭಾ ಶೆಟ್ಟಿ ಇವರ ಗೌರವಾರ್ಥ ಮುಂಬೈಯ ವಿಂಡ್ಸರ್ ರೆಫ್ರೆಕ್ಟರೀಸ್ ಪ್ರೈ.ಲಿ. ಸಂಸ್ಥೆಯ ಸಿಇಒ ಶ್ರೀಮತಿ ಪ್ರಜ್ಞಾ ಶೆಟ್ಟಿ ಇವರು ಸಂಸ್ಥೆಯ ವತಿಯಿಂದ ನಿರ್ಮಿಸಿದ ನೂತನ ಮನೆ ‘ಪ್ರತಿಭಾ ನಿಲಯ’ವನ್ನು ಕುಂದಾಪುರ ಶಾಸಕರಾದ ಕಿರಣ್

ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ Read More »

ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ ಉದ್ಘಾಟನೆ

ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 19.04.2026 ರಂದು ವಿದ್ಯಾಪೋಷಕ್‌ನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವರಾದ ಡಾ. ಚಂದ್ರಶೇಖರ ಶೆಟ್ಟಿಯವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಮಾತುಗಳಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತರಾಗದೆ, ತಮ್ಮ ಜ್ಞಾನ ವಿಕಾಸಕ್ಕೆ ಪೂರಕವಾಗುವ ಪುಸ್ತಕಗಳ ಓದನ್ನು ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಅದಮಾರು ಮಠ ಎಜುಕೇಶನಲ್ ಕೌನ್ಸಿಲ್ ನ ಗೌರವ ಕಾರ್ಯದರ್ಶಿಗಳಾದ ಡಾ. ಎ. ಪಿ. ಭಟ್ ಅವರು ಮೂಲ ವಿಜ್ಞಾನಕ್ಕೆ ಒತ್ತು ಕೊಡುವ

ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ ಉದ್ಘಾಟನೆ Read More »

We're currently hard at work gathering information and crafting content to bring you the best experience. Stay tuned for exciting updates!