Yakshagana Kalaranga

Yakshagana Kalaranga

ಕುಂದಾಪುರ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ.

ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ವಠಾರದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ ನ ಕುಂದಾಪುರ ಪರಿಸರದ ಐದು ಶಾಲೆಗಳ ಆರು ಪ್ರದರ್ಶನ 05.01.2024ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಈ ಮಹಾ ಅಭಿಯಾನ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಮುಂದೆಯೂ ನಾವೆಲ್ಲ ಒಟ್ಟಾಗಿ ನಮ್ಮ ಮಣ್ಣಿನ ಈ ಶ್ರೀಮಂತ ಕಲೆಯನ್ನು ಉಳಿಸಿ ಬೆಳೆಸೋಣ ಎಂದು ಹೇಳಿದರು. ಕುಂದಾಪುರದ ಸಹಾಯಕ ಆಯುಕ್ತರಾದ ಶ್ರೀಮತಿ ರಶ್ಮಿ, ಬಿ. ಎಸ್. ಪ್ರಮಾಣಪತ್ರ ವಿತರಿಸಿ ಮಾತನಾಡುತ್ತಾ […]

ಕುಂದಾಪುರ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ. Read More »

ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.

03.01.2024 ರಂದು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ವಠಾರದಲ್ಲಿ ಮೂರು ದಿನ ಜರುಗಲಿರುವ ಕಿಶೋರ ಯಕ್ಷಗಾನ ಸಂಭ್ರಮವನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಕುಂದಾಪುರ ತಹಶೀಲ್ದಾರರಾದ ಶ್ರೀಮತಿ ಶೋಭಾಲಕ್ಷ್ಮಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೋಭಾ ಶೆಟ್ಟಿ, ಎಂ. ಗಂಗಾಧರ ರಾವ್, ರಾಮಕೃಷ್ಣ ಬಿ. ಜಿ., ಗೌತಮ್ ಶೆಟ್ಟಿ, ಸೂರ್ಯಕಾಂತ್ ದಫೇದಾರ್ ಭಾಗವಹಿಸಿದ್ದರು. ಎಸ್. ವಿ. ಭಟ್ ವೇದಿಕೆಯಲ್ಲಿದ್ದರು, ಯಕ್ಷ ಶಿಕ್ಷಣ ಟ್ರಸ್ಟ್ ನ ಎಚ್. ಎನ್. ಶೃಂಗೇಶ್ವರ, ನಾಗರಾಜ

ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ. Read More »

ಮಣೂರು ಪಡುಕೆರೆ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ.

ಮಣೂರು ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ ನ ಮಣೂರು ಪರಿಸರದ ಆರು ಶಾಲೆಗಳ ಪ್ರದರ್ಶನ 01.01.2024ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಯಕ್ಷಶಿಕ್ಷಣ ಟ್ರಸ್ಟ್ ಸಮರ್ಪಣಾ ಭಾವದಿಂದ ಈ ಕೆಲಸವನ್ನು ಮಾಡುತ್ತಿದೆ. ಯಕ್ಷಗಾನ ಕಲಾರಂಗದ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು. ಆನಂದ ಸಿ. ಕುಂದರ್ ಮಾತನಾಡಿ ಕನ್ನಡ ಉಳಿಸುವಲ್ಲಿ ಯಕ್ಷಶಿಕ್ಷಣದ ಪಾತ್ರ ಮಹತ್ತ್ವದ್ದು, ಮುಂದಿನ ಬಾರಿಯೂ ಮಣೂರಿನಲ್ಲಿ ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಅವಕಾಶ ಸಿಗಬೇಕೆಂದು

ಮಣೂರು ಪಡುಕೆರೆ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ. Read More »

ಮಣೂರಿನಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.

30-12-2023 ರಂದು ಮಣೂರಿನಲ್ಲಿ ಮೂರು ದಿನ ಜರುಗಲಿರುವ ಕಿಶೋರ ಯಕ್ಷಗಾನ ಸಂಭ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ಡಾ.ಜಿ.ಶಂಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಡಾ. ಪ್ರಭಾಕರ ತೋಳಾರ್, ಶ್ರೀ ಡೆನ್ನಿಸ್ ಬಾಂಜಿ, ನಿರಂಜನ್ ನಾಯ್ಕ್, ಯಕ್ಷ ಶಿಕ್ಷಣ ಟ್ರಸ್ಟ್ ನ ವಿ.ಜಿ.ಶೆಟ್ಟಿ, ಎಚ್.ಎನ್.ಶೃಂಗೇಶ್ವರ, ನಾಗರಾಜ ಹೆಗಡೆ ಪಾಲುಗೊಂಡರು. ಕಾರ್ಯದರ್ಶಿ ಮುರಲಿ ಕರೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ ಬ್ರಹ್ಮಾವರ ಧನ್ಯವಾದ ಸಲ್ಲಿಸಿದರು. ಆರಂಭದಲ್ಲಿ ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿದರು.

ಮಣೂರಿನಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ. Read More »

ಶಿರ್ವದಲ್ಲಿ ಕಿಶೋರ ಯಕ್ಷಗಾನ ಸಮಾರೋಪ.

ಶಿರ್ವದ ಮಹಿಳಾ ಸೌಧದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ ನ ಶಿರ್ವ ಪರಿಸರದ ಎಂಟು ಶಾಲೆಗಳ ಪ್ರದರ್ಶನ 29.12.2023ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ತನ್ನ ಆಶಯದಂತೆ ಕಾಪು ಕ್ಷೇತ್ರದ 15 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ, ಪ್ರದರ್ಶನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಯಕ್ಷಶಿಕ್ಷಣ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು ಎಂದು ಹರ್ಷ ವ್ಯಕ್ತಪಡಿಸಿದರು. ಸಮಾರೋಪ ಸಮಾರಂಭದಲ್ಲಿ ಎಂ. ಗಂಗಾಧರ ರಾವ್, ಮಟ್ಟಾರು ರತ್ನಾಕರ

ಶಿರ್ವದಲ್ಲಿ ಕಿಶೋರ ಯಕ್ಷಗಾನ ಸಮಾರೋಪ. Read More »

ಯಕ್ಷನಿಧಿ ಡೈರಿ – 2024 ಬಿಡುಗಡೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ ಕಳೆದ ಎರಡು ದಶಕಗಳಿಂದ ವೃತ್ತಿ ಮೇಳದ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡಿರುವ ಡೈರಿ ನೀಡುತ್ತಾ ಬಂದಿದ್ದು, ‘ಯಕ್ಷನಿಧಿ ಡೈರಿ – 2024’ರ ಬಿಡುಗಡೆ ಕಾರ್ಯಕ್ರಮವು 27-12-2023 ರಂದು ಸಂಸ್ಥೆಯ ಕಚೇರಿಯಲ್ಲಿ ಜರಗಿತು. ಉಡುಪಿಯ ಖ್ಯಾತ ಲೆಕ್ಕ ಪರಿಶೋಧಕರಾದ ಸಿಎ ಗಣೇಶ್ ಕಾಂಚನ್ ಮತ್ತು ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕಡಂದೇಲು ಪುರುಷೋತ್ತಮ ಭಟ್‍ರ ಮಗ ಕೆ. ಸದಾಶಿ ಭಟ್ ಡೈರಿ ಬಿಡುಗಡೆ ಮಾಡಿದರು. ಸಂಸ್ಥೆಯ ಸಮಾಜಮುಖಿ ಕಾರ್ಯಗಳನ್ನು, ಕಲಾವಿದರ ಕ್ಷೇಮಚಿಂತನೆಗೆ ಮಾಡುತ್ತಿರುವ

ಯಕ್ಷನಿಧಿ ಡೈರಿ – 2024 ಬಿಡುಗಡೆ Read More »

ಯಕ್ಷಗಾನ ಕಲಿಕೆಗೆ ಪೂರಕ – ಪ್ರೊ. ವೈ. ಭಾಸ್ಕರ ಶೆಟ್ಟಿ

ಯಕ್ಷಗಾನದ ಕಲಿಕೆ ಮಕ್ಕಳಲ್ಲಿ ಆತ್ಮವಿಶ್ವಾಸ, ಪುರಾಣಜ್ಞಾನ, ಭಾಷಾ ಕೌಶಲ, ಕಠಿಣ ಪರಿಶ್ರಮ ಪ್ರವೃತ್ತಿ, ಕ್ರಿಯಾಶೀಲತೆಯನ್ನು ಬೆಳೆಸುತ್ತದೆ. ಇದರಿಂದ ಸಹಜವಾಗಿಯೆ ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಾರೆ ಎಂದು ಎಂ. ಎಸ್. ಆರ್. ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ವೈ. ಭಾಸ್ಕರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ ಕಿಶೋರ ಯಕ್ಷಸಂಭ್ರಮ – 2023 ಶಿರ್ವದ ಮಹಿಳಾ ಸೌಧದಲ್ಲಿ ನಡೆಯಲಿರುವ ನಾಲ್ಕು ದಿನಗಳ ಪ್ರದರ್ಶನವನ್ನು 25.12.2023ರಂದು ಉದ್ಘಾಟಿಸಿ ಮಾತನಾಡಿದರು. ಎಂ.

ಯಕ್ಷಗಾನ ಕಲಿಕೆಗೆ ಪೂರಕ – ಪ್ರೊ. ವೈ. ಭಾಸ್ಕರ ಶೆಟ್ಟಿ Read More »

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ – ‘ಸಂಸ್ಕಾರ ನೀಡುವ ಯಕ್ಷಗಾನ ಕಲಾವಿದರು ಅಭಿನಂದನೀಯರು’.ಪೇಜಾವರ ಶ್ರೀ.

ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ 18.11.2023 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು.ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ, ಶ್ರೀಮಂತ ಕಲೆ ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ದೊಡ್ಡದು. ಅವರು ಸದಾ ಅಭಿನಂದನೀಯರು ಎಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಅಂತಹ ಕಲಾವಿದರನ್ನು ಗೌರವಿಸುವುದು ಸ್ತುತ್ಯರ್ಹ ಎಂದರು. ಕಲಾವಿದರಾದ ಚಿದಂಬರಬಾಬು , ಕೋಟ

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ – ‘ಸಂಸ್ಕಾರ ನೀಡುವ ಯಕ್ಷಗಾನ ಕಲಾವಿದರು ಅಭಿನಂದನೀಯರು’.ಪೇಜಾವರ ಶ್ರೀ. Read More »

ಯಕ್ಷಗಾನ ಕಲಾರಂಗದ 50ನೇ ಮನೆಗೆ ಶಿಲಾನ್ಯಾಸ.

ಇಂದು (06.11.2023) ಕಾರ್ಕಳ ತಾ. ಹೊಸ್ಮಾರ್ ನೂರಳ್‍ಬೆಟ್ಟುವಿನಲ್ಲಿ ಯಕ್ಷಗಾನ ಕಲಾರಂಗ ನಿರ್ಮಿಸುವ 50ನೇ ಮನೆಗೆ ಶಿಲಾನ್ಯಾಸ ನೆರವೇರಿಸಲಾಯಿತು. ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ದಕ್ಷಿಣ ತುದಿಯಲ್ಲಿರುವ, ಅತ್ಯಂತ ಶಿಥಿಲವಾಗಿರುವ ಮನೆಯಲ್ಲಿ ವಾಸಿಸುತ್ತಿರುವ, ಪ್ರಥಮ ಪಿಯುಸಿಯ ಪ್ರತಿಭಾವಂತ ವಿದ್ಯಾಪೋಷಕ್ ವಿದ್ಯಾರ್ಥಿನಿ ಚೈತ್ರಾ (ಎಸ್.ಎಸ್.ಎಲ್.ಸಿ 95%) ಇವಳಿಗೆ ತಮ್ಮ ವೈವಾಹಿಕ ಜೀವನದ 50ನೇ ವರ್ಷದ ಶುಭಾವಸರದಲ್ಲಿ ಮನೆಯನ್ನು ಕಟ್ಟಿಕೊಡುವ ಮೂಲಕ ಸಮಾಜಮುಖಿಯಾಗಿ ಆಚರಿಸಲು ಸಂಕಲ್ಪಿಸಿದ ನಿವೃತ್ತ ಶಿಕ್ಷಕ, ಈ ಬಾರಿ ಸಂಸ್ಥೆಯಿಂದ ಸೇವಾಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಯು.

ಯಕ್ಷಗಾನ ಕಲಾರಂಗದ 50ನೇ ಮನೆಗೆ ಶಿಲಾನ್ಯಾಸ. Read More »

We're currently hard at work gathering information and crafting content to bring you the best experience. Stay tuned for exciting updates!