Yakshagana Kalaranga

Yakshagana Kalaranga

ಯಕ್ಷಶಿಕ್ಷಣ ಶಾಲಾ ಮುಖ್ಯಶಿಕ್ಷಕರ ಸಮಾವೇಶ.

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ, ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ 69 ಪ್ರೌಢಶಾಲೆಗಳ 70 ಪ್ರದರ್ಶನಗಳನ್ನು ನವೆಂಬರ್ 29, 2023ರಿಂದ ಜನವರಿ 05, 2024ರ ವರೆಗೆ ಬ್ರಹ್ಮಾವರ, ಉಡುಪಿ ರಾಜಾಂಗಣ, ಕಾಪು, ಶಿರ್ವ, ಮಣೂರು ಹಾಗೂ ಕುಂದಾಪುರದಲ್ಲಿ ಆಯೋಜಿಸಿದ್ದು, ಈ ಹಿನ್ನಲೆಯಲ್ಲಿ ಈ ಶಾಲೆಯ ಮುಖ್ಯಶಿಕ್ಷಕರ ಸಮಾಲೋಚನಾ ಸಭೆಯನ್ನು ಇಂದು (03.11.2023) ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಪಾಲ್ಗೊಂಡು ಶಾಲೆಯ […]

ಯಕ್ಷಶಿಕ್ಷಣ ಶಾಲಾ ಮುಖ್ಯಶಿಕ್ಷಕರ ಸಮಾವೇಶ. Read More »

ಬೈಂದೂರು ಶಾಸಕರಿಂದ ನೂತನ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ.

ಕುಂದಾಪುರ ಹೆಮ್ಮಾಡಿಯ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಿಂಚನಾಳ (ಪ್ರಥಮ ಪಿಯುಸಿ) ಮನೆ ತೀರಾ ಜೀರ್ಣಾವಸ್ಥೆಯಲ್ಲಿದ್ದ ಹಿನ್ನಲೆಯಲ್ಲಿ ನೂತನ ಮನೆ ನಿರ್ಮಿಸಲಾಗುತ್ತಿದ್ದು, ಇಂದು (30.10.2023) ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಕ್ಷಗಾನ ಕಲಾರಂಗ ನಂಬಿಕಸ್ಥ ಸಂಸ್ಥೆಯಾಗಿದ್ದು, ನನ್ನ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ 4 ಮನೆಗಳ ವೆಚ್ಚವನ್ನು ದಾನಿಗಳ ನೆರವಿನಿಂದ ನೀಡಲು ಬದ್ಧನಾಗಿದ್ದೇನೆ. ತನ್ನ ಕ್ಷೇತ್ರದ ಒಟ್ಟು ಸಾಮಾಜಿಕ ಚಟುವಟಿಕೆಗಳ ಕೆಲಸಗಳಿಗೆ ಕಲಾರಂಗದ ತಂಡದ ನೆರವು ಅಗತ್ಯ. ಒಟ್ಟಾಗಿ ನೊಂದವರ ಬಾಳಿಗೆ ಬೆಳಕು

ಬೈಂದೂರು ಶಾಸಕರಿಂದ ನೂತನ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ. Read More »

ವಿದ್ಯಾಪೋಷಕ ವಿದ್ಯಾರ್ಥಿಗಳಿಗೆ ವಿನಮ್ರ ಸಹಾಧನ ವಿತರಣಾ ಸಮಾರಂಭ – 2023

ಪ್ರಾಮಾಣಿತೆ, ಸನ್ನಡತೆ, ವಿನಯಶೀಲತೆಯುಳ್ಳ ವಿದ್ಯಾರ್ಥಿ ಸಮಾಜಕ್ಕೆ ಆಸ್ತಿಯಾಗುತ್ತಾನೆ. ವಿದ್ಯಾರ್ಥಿಗಳು ಅನುಕರಣೆಯನ್ನಲ್ಲ ಅನುಸರಣೆಯನ್ನು ರೂಢಿಸಿಕೊಳ್ಳಬೇಕು ಎಂದು ಅಕ್ಟೋಬರ್ 1, 2023 ಭಾನುವಾರ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಜರಗಿದ 18ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಶ್ರೀ ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ನುಡಿದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್, ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶ್ರೀರಮಣ ಉಪಾಧ್ಯ, ಡಾ. ಶರತ್

ವಿದ್ಯಾಪೋಷಕ ವಿದ್ಯಾರ್ಥಿಗಳಿಗೆ ವಿನಮ್ರ ಸಹಾಧನ ವಿತರಣಾ ಸಮಾರಂಭ – 2023 Read More »

ಯಕ್ಷಗಾನ ಕಲಾವಿದರ ಮಕ್ಕಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ.

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಈ ವರ್ಷದಿಂದ ಯಕ್ಷನಿಧಿಯ ಸದಸ್ಯ ಕಲಾವಿದರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಆರಂಭಿಸಿದ್ದು, 24.09.2023ರಂದು ಆರ್ಥಿಕ ನೆರವಾಗಿ 48 ಕಲಾವಿದರ 54 ಮಕ್ಕಳಿಗೆ ರೂಪಾಯಿ 5,24,000/- ಸಹಾಯಧನವನ್ನು ವಿತರಿಸಿತು. ಕಲಾರಂಗದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡಿ ಮಾತನಾಡಿದ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಕಲಾವಿದರು ಸಮಾಜದ ಆಸ್ತಿ, ಅವರ ಯೋಗಕ್ಷೇಮ ನೋಡಿಕೊಳ್ಳುವುದು ಸಮಾಜದ ಹೊಣೆ. ಈ ನಿಟ್ಟಿನಲ್ಲಿ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ಮಾಡುತ್ತಾ ಬಂದ

ಯಕ್ಷಗಾನ ಕಲಾವಿದರ ಮಕ್ಕಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ. Read More »

ಕಲಾಂತರಂಗ 2022-23 ಬಿಡುಗಡೆ.

ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ ‘ಕಲಾಂತರಂಗ – 2022-23’ನ್ನು 16.09.2023 ರಂದು ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಅದಮಾರು ಮಠದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆ ಯಕ್ಷನಿಧಿ, ವಿದ್ಯಾಪೋಷಕ್ ಮತ್ತು ಯಕ್ಷಶಿಕ್ಷಣದ ಕುರಿತು ಮಾಡುತ್ತಿರುವ ಒಂದು ವರ್ಷದ ಮಾಹಿತಿಯನ್ನು ಒಳಗೊಂಡಿರುವ ಈ ಹೊತ್ತಗೆಯನ್ನು ಅನಾವರಣಗೊಳಿಸಿ, ಒಂದೇ ಮನಸ್ಸಿನಿಂದ ನೀವೆಲ್ಲಾ ಒಟ್ಟಾಗಿ ಮಾಡುವ ಕೆಲಸ ಸಮಾಜಕ್ಕೆ ತುಂಬಾ ಉಪಯುಕ್ತವಾಗಿದೆ. ಸಂಸ್ಥೆ ಇನ್ನಷ್ಟು ಉತ್ಕರ್ಷೆಯನ್ನು ಸಾಧಿಸಲಿ ಎಂದು ಆಶೀರ್ವದಿಸಿದರು. ಆರಂಭದಲ್ಲಿ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್. ವಿ.

ಕಲಾಂತರಂಗ 2022-23 ಬಿಡುಗಡೆ. Read More »

ಕುತ್ಯಾರು ಸೂರ್ಯಚೈತನ್ಯ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

ಯಕ್ಷ ಶಿಕ್ಷಣ ಟ್ರಸ್ಟ್( ರಿ)ಉಡುಪಿ ಈ ವರ್ಷ ಕಾಪು ವಿಧಾನ ಸಭಾ ಕ್ಷೇತ್ತದ 15 ಪ್ರೌಢ ಶಾಲೆಗಳಲ್ಲಿ ಯಕ್ಷ ಶಿಕ್ಷಣ ಆರಂಭಿಸಿದ್ದು ಕುತ್ಯಾರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತರಗತಿ ಉದ್ಘಾಟನೆ ಸಪ್ಟಂಬರ್ 2, 2023ರಂದು ಜರಗಿತು. ಜ್ಯೋತಿ ಬೆಳಗಿಸಿ ಶುಭ ಕೋರಿದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ಶಿಕ್ಷಣವೂ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಜತೆ ಕಾರ್ಯದರ್ಶಿ ನಾರಾಯಣ ಎಂ.

ಕುತ್ಯಾರು ಸೂರ್ಯಚೈತನ್ಯ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ Read More »

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ ವಿದ್ಯಾರ್ಥಿನಿ, ದ್ವಿತೀಯ ಪಿ.ಯು.ಸಿ.ಯಲ್ಲಿ ಓದುತ್ತಿರುವ ರಂಗನಕೆರೆಯ ಜಯಂತಿ ಕೃಷ್ಣ ಬಂಗೇರ ಸುಪುತ್ರಿ ನಿಶ್ಮಿತಾಳಿಗೆ ನಿರ್ಮಿಸಿದ ನೂತನ ಮನೆ ‘ಸಾವಿತ್ರಿ ರಾಮಚಂದ್ರ ಸದನ’ ಇದರ ಉದ್ಘಾಟನೆಯನ್ನು ಮನೆಯ ಪ್ರಾಯೋಜಕರಾದ ಡಾ. ಎಂ. ಆರ್ ಹೆಗಡೆ ಮತ್ತು ಕಮಲಾ ಹೆಗಡೆ ದಂಪತಿಗಳು ಇಂದು (28.08.2023) ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅವರ ಮಾತಾಪಿತರಾದ ಸಾವಿತ್ರಿ ಆರ್ ಹೆಗಡೆ ಮತ್ತು ರಾಮಚಂದ್ರ ಹೆಗಡೆ ನೆನಪಿನಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೇಜಾವರ ಶ್ರೀಗಳ ಮಾತಿನಿಂದ ಪ್ರೇರಣೆಗೊಂಡು,

ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ

ಉಡುಪಿ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಚಕ್ ನ ಇಂಜಿನಿಯರ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ ಆಗಸ್ಟ್ 27, 2023 ಭಾನುವಾರ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಂಗಣದಲ್ಲಿ ಜರಗಿತು. ಖ್ಯಾತ ಅಂಕಣಕಾರ, ಲೇಖಕ ಡಾ. ಬಿ ಭಾಸ್ಕರ್ ರಾವ್, ಡಾ. ಎಂ. ಆರ್. ಹೆಗಡೆ, ರಘುರಾಜ್ ರಾವ್, ಪ್ರವೀಣ್ ವಿ. ಗುಡಿ, ಡಾ. ಯು. ಸಿ. ನಿರಂಜನ್, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾತುಗಳನ್ನಾಡಿದರು.ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಉಪಾಧ್ಯಕ್ಷ ಎಸ್. ವಿ. ಭಟ್, ಜೊತೆ

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ Read More »

We're currently hard at work gathering information and crafting content to bring you the best experience. Stay tuned for exciting updates!