ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ – ‘ಸಂಸ್ಕಾರ ನೀಡುವ ಯಕ್ಷಗಾನ ಕಲಾವಿದರು ಅಭಿನಂದನೀಯರು’.ಪೇಜಾವರ ಶ್ರೀ.
ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ 18.11.2023 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು.ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ, ಶ್ರೀಮಂತ ಕಲೆ ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ದೊಡ್ಡದು. ಅವರು ಸದಾ ಅಭಿನಂದನೀಯರು ಎಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಅಂತಹ ಕಲಾವಿದರನ್ನು ಗೌರವಿಸುವುದು ಸ್ತುತ್ಯರ್ಹ ಎಂದರು. ಕಲಾವಿದರಾದ ಚಿದಂಬರಬಾಬು , ಕೋಟ […]








