Yakshagana Kalaranga

Yakshagana Kalaranga

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 12-7-2023 ರಂದು ಆರಂಭವಾಯಿತು.ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ ಎಂದು ಅವರು ನುಡಿದರು. ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ. ಜಿ. ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಯಾದ ಶ್ರೀ ಮುರಲಿ ಕಡೆಕಾರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ […]

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

11.07.2023ರಂದು ಸರಕಾರಿ ಪ್ರೌಢಶಾಲೆ ನುಕ್ಕೂರು ಇಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಆರಂಭಗೊಂಡಿತು. ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್, ಸದಸ್ಯರಾದ ಗಣೇಶ್ ಬ್ರಹ್ಮಾವರ, ಗುರುಗಳಾದ ಮಹೇಶ್ ಕುಮಾರ್ ಮಂದಾರ್ತಿ, ಶಾಲಾ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಹಾಗೂ ಶಾಲಾ ಶಿಕ್ಷಕವ್ರಂದ ಉಪಸ್ಥಿತರಿದ್ದರು.

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

11.07.2023ರಂದು ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಆರಂಭಗೊಂಡಿತು. ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಮುಖ್ಯ ಶಿಕ್ಷಕಿ ಅನಸೂಯ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಾಲೆಯ ಯಕ್ಷಗಾನದಲ್ಲಿ ವೇಷಧಾರಿಯಾಗಿದ್ದ ಹಳೆ ವಿದ್ಯಾರ್ಥಿ ನಿಶ್ವಲ್ ತೀರ್ಥಳ್ಳಿ ಯಕ್ಷ ಗುರುವಾಗಿ ಪಾಲ್ಗೊಳ್ಳುತ್ತಿರುವುದು ಟ್ರಸ್ಟಿಗೆ ಧನ್ಯತೆಯ ವಿಷಯವಾಗಿದೆ.ಈತ ಎರಡು ಶಾಲೆಗಳಲ್ಲಿ ಗುರುವಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಯಕ್ಷಗಾನ ಕೇಂದ್ರದಲ್ಲಿದ್ದುಕೊಂಡು ಗುರು ಬನ್ನಂಜೆ ಸಂಜೀವ ಸುವರ್ಣರ ಶಿಷ್ಯನಾಗಿ ಯಕ್ಷಗಾನವನ್ನು ಶ್ರದ್ಧೆಯಿಂದ ಅಧ್ಯಯನ ಮಾಡಿರುತ್ತಾನೆ.

ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ತೆಂಕುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ

09-07-2023 ರಂದು ಉಡುಪಿ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಯಕ್ಷಗಾನ ಕಲಾರಂಗ ಸಂಯೋಜಿಸಿದ”ದಾಸೋಹಂ ಕೌಸಲೇಂದ್ರಸ್ಯ” ತೆಂಕುತಿಟ್ಟು ಯಕ್ಷಗಾನ ಅತ್ಯಂತ ಸೊಗಸಾಗಿ ಪ್ರಸ್ತುತಗೊಂಡಿತು.

ತೆಂಕುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ Read More »

ಯಕ್ಷಗಾನ ಕಲಾರಂಗ 48ನೆಯ ವಾರ್ಷಿಕ ಮಹಾಸಭೆ

ಉಡುಪಿಯ ಸಾಂಸ್ಕೃತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 48ನೆಯ ವಾರ್ಷಿಕ ಮಹಾಸಭೆಯು ಪೇಜಾವರ ಮಠದ ಶ್ರೀರಾಮವಿಠಲ ಸಭಾಭವನದಲ್ಲಿ ಜುಲೈ 08, 2023 ರಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯು ಡಾ. ರಾಜೇಶ್ ನಾವಡರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆ, ಲೆಕ್ಕಪರಿಶೋಧಕರ ನೇಮಕದ ಅನಂತರ ಕಾರ್ಯಕಾರೀ ಸಮಿತಿ ಮತ್ತು

ಯಕ್ಷಗಾನ ಕಲಾರಂಗ 48ನೆಯ ವಾರ್ಷಿಕ ಮಹಾಸಭೆ Read More »

ಮಲ್ಪೆಯ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

04-07-2023 ರಂದು ಮಲ್ಪೆಯ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ,ಯಕ್ಷ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು.ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿ,ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ಶಶಿಕುಮಾರ್ ಸ್ವಾಗತಿಸಿದರು.ಗುರುಗಳಾದ ನಿತ್ಯಾನಂದ ಶೆಟ್ಟಿಗಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಶೆಟ್ಟಿ ಉಪಸ್ಥಿತರಿದ್ದ ಕಾರ್ಯಕ್ರಮದ ಕೊನೆಗೆ ಶಿಕ್ಷಕಿ ಶ್ರೀಮತಿ ಸಂಧ್ಯಾ ಧನ್ಯವಾದ ಸಲ್ಲಿಸಿದರು.ವಿದ್ಯಾರ್ಥಿನಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದಳು.40 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿಯಲ್ಲಿ ಪಾಲುಗೊಳ್ಳುತ್ತಿದ್ದಾರೆ.ಆರಂಭದಲ್ಲಿ ಅಗಲಿದ, ಭಾಗವತರಾದ ತೋನ್ಸೆ ಜಯಂತ್ ಕುಮಾರ್

ಮಲ್ಪೆಯ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ Read More »

ಬಡಗುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ

ಜುಲೈ 2, 2023ರಂದು ಉಡುಪಿ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಬಡಗುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ ಯಶಸ್ವಿಯಾಗಿ ಪ್ರದರ್ಶನಗೊಂಡಿತು.

ಬಡಗುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ Read More »

ಯಕ್ಷಗಾನ ಸವ್ಯಸಾಚಿ ತೋನ್ಸೆ ಜಯಂತ್ ಕುಮಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜೂನ್ 26 ರಂದು ನಮ್ಮನ್ನಗಲಿದ ಯಕ್ಷಗಾನ ಗುರು, ಭಾಗವತ, ಯಕ್ಷಗಾನದ ಸರ್ವಾಂಗಗಳನ್ನು ಬಲ್ಲ ಕಲಾವಿದ ತೋನ್ಸೆ ಜಯಂತ್ ಕುಮಾರರ ಶ್ರದ್ಧಾಂಜಲಿ ಸಭೆ ಉಡುಪಿ ಬನ್ನಂಜೆಯ ನಾರಾಯಣ ಗುರು ಅಡಿಟೋರಿಯಂನಲ್ಲಿ ಜೂನ್ 29, 2023ರಂದು ಜರಗಿತು. ಉಡುಪಿಯ ಯಕ್ಷಗಾನ ಕಲಾರಂಗ, ಯಕ್ಷಶಿಕ್ಷಣ ಟ್ರಸ್ಟ್ ಹಾಗೂ ತೋನ್ಸೆಯವರ ಶಿಷ್ಯವೃಂದ ಸಂಯುಕ್ತವಾಗಿ ಆಯೋಜಿಸಿದ್ದವು. ಬನ್ನಂಜೆ ಬಿಲ್ಲವರ ಸೇವಾಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು. ಉಡುಪಿಯ ಶಾಸಕರೂ, ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರೂ ಆದ ಯಶಪಾಲ್ ಸುವರ್ಣ, ನಿಕಟಪೂರ್ವ ಶಾಸಕ, ಯಕ್ಷಶಿಕ್ಷಣ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ.

ಯಕ್ಷಗಾನ ಸವ್ಯಸಾಚಿ ತೋನ್ಸೆ ಜಯಂತ್ ಕುಮಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ Read More »

We're currently hard at work gathering information and crafting content to bring you the best experience. Stay tuned for exciting updates!