Yakshagana Kalaranga

Yakshagana Kalaranga

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿಯನ್ನು ಆಗಸ್ಟ್ 5, 2023ರಂದು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್. ವಿ. ಭಟ್ ದೀಪಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಮ್ಮ ವಿಧಾನಸಭಾ ವ್ಯಾಪ್ತಿಯ 10 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ಈ ಬಾರಿ ಆರಂಭಗೊಂಡಿದೆ. ಮುಂದಿನ ವರ್ಷ ಹೆಚ್ಚಿನ ಶಾಲೆಗಳಲ್ಲಿ ಇದನ್ನು ಅಳವಡಿಸುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಉಡುಪಿಯಲ್ಲದೆ […]

ಕುಂದಾಪುರ ಪ.ಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ 27.07.2023ರಂದು ಶ್ರೀ ಕೃಷ್ಣ ಮಠದ ಕನಕಮಂಟಪದಲ್ಲಿ ಪರ್ಯಾಯ ಮಠಾಧೀಶರೂ ಟ್ರಸ್ಟ್ ನ ಗೌರವಾಧ್ಯಕ್ಷರೂ ಆದ ಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ, ಟ್ರಸ್ಟ್ ನೂತನ ಅಧ್ಯಕ್ಷರೂ ಆದ ಯಶ್ಪಾಲ್ ಎ. ಸುವರ್ಣ, ಸ್ಥಾಪಕ ಅಧ್ಯಕ್ಷರಾದ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ಜರಗಿದ ಸಭೆಯಲ್ಲಿ ಕೋಶಾಧಿಕಾರಿ ಎಚ್. ಎನ್. ಶೃಂಗೇಶ್ವರ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವರದಿ

ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023 Read More »

ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

22.07.2023‌ ರಂದು ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಮತ್ತು ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸಿ.ವಿಜಯ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಹಾಬಲೇಶ್ವರ ಉಡುಪ,ಹರೀಶ್ ಶೆಟ್ಟಿ ಅಭ್ಯಾಗತರಾಗಿ ಶುಭ ಹಾರೈಸಿದರು.ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ನಾಯ್ಕ್ ಸ್ವಾಗತಿಸಿದರು.ಶಿಕ್ಷಕ ರಮೇಶ್ ಶೆಟ್ಟಿ ನಿರ್ಮಿಸಿದ ಕಾರ್ಯಕ್ರಮದಲ್ಲಿ ಯಕ್ಷ ಗುರುಗಳಾದ ಮಂಜುನಾಥ ಪ್ರಭುಗಳು ಉಪಸ್ಥಿತರಿದ್ದರು.

ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ

ಕುಂದಾಪುರ ವಿಧಾನಸಭಾ ವ್ಯಾಪ್ತಿಯ 9 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ಆರಂಭಿಸುವರೆ ಶಾಸಕರಾದ ಕಿರಣ್ ಕೊಡ್ಗಿಯವರ ಅಧ್ಯಕ್ಷತೆಯಲ್ಲಿ 22-07-23ರಂದು ಅವರ ಕಛೇರಿಯಲ್ಲಿ ಸಮಾಲೋಚನ ಸಭೆ ಜರಗಿತು. ಸರಕಾರಿ ಪ್ರೌಢಶಾಲೆಗಳಾದ ಕುಂದಾಪುರ, ಕೋಟೇಶ್ವರ, ಕೋಡಿಕನ್ಯಾನ, ಮಣೂರು, ಗುಂಡ್ಮಿ, ತೆಕ್ಕಟ್ಟೆ, ಬೀಜಾಡಿ, ಬಸ್ರೂರು ಹಾಗೂ ಮೊರಾರ್ಜಿದೇಸಾಯಿ ವಸತಿ ಪ್ರೌಢಶಾಲೆ ಕೋಟೇಶ್ವರ ಇಲ್ಲಿ ಈ ಬಾರಿ ಯಕ್ಷಗಾನ ತರಬೇತಿಯನ್ನು ಆರಂಭಿಸಿ ಡಿಸೆಂಬರ್ ತಿಂಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸುವುದೆಂದು ತೀರ್ಮಾನಿಸಲಾಯಿತು. ಯಕ್ಷಶಿಕ್ಷಣದ ರೂಪುರೇಷೆಗಳ ಸಮಗ್ರ ಮಾಹಿತಿಯನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನೀಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ

ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಕುರಿತು ಸಮಾಲೋಚನಾ ಸಭೆ Read More »

ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 20.07.2023ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಯು.ಎಸ್.ನಾಯಕ್ ಪ್ರೌಢಶಾಲೆ ಪಟ್ಲ ಇಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಗುರು ಸುಬ್ರಹ್ಮಣ್ಯ ಪ್ರಸಾದ ಮುದ್ರಾಡಿ ಉಪಸ್ಥಿತರಿದ್ದರು. ಶಿಕ್ಷಕರಾದ ನಟರಾಜ ಪಟ್ಲ ಸ್ವಾಗತಿಸಿದರು. ಸಹ ಶಿಕ್ಷರಾದ ಸದಾನಂದ ಕಾರ್ಯಕ್ರಮ ನಿರ್ವಹಿಸಿ, ವಂದನಾರ್ಪಣೆಗೈದರು.

ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

20-07-2023 ರಂದು ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್. ವಿ. ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾದ್ಯಕ್ಷ ವಿ. ಜಿ. ಶೆಟ್ಟಿ ಯಕ್ಷಶಿಕ್ಷಣ ಯಶಸ್ವಿಯಾಗುವಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಬಹಳ ಮುಖ್ಯವಾದುದೆಂದು ಹೇಳಿದರು. ಹಿರಿಯ ಶಿಕ್ಷಕಿ ಲಕ್ಷ್ಮೀಯವರು ಸ್ವಾಗತಿಸಿದರು. ಯಕ್ಷ ಗುರು ಮಂಜುನಾಥ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಕವಿತಾ ಧನ್ಯವಾದ ಸಮರ್ಪಿಸಿದರು.

ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 19-07-2023 ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ನಿವೃತ್ತ ಉಪನ್ಯಾಸಕ, ಕಲಾವಿದ ಪ್ರೊ.ಕೆ.ಜಿ. ಮಂಜುನಾಥ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಸದಸ್ಯ ಕೆ. ಅಜಿತ್ ಕುಮಾರ್, ಪ್ರಾಂಶುಪಾಲರಾದ ಭಾಸ್ಕರ ಎ. ಅಭ್ಯಾಗತರಾಗಿ

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯನ್ನು ಶಾಲಾ ಮುಖ್ಯಸ್ಥರಾದ ವಂದನೀಯ ಪ್ರದೀಪ್ ಕಾರ್ಡೋಝಾ 18-07-2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತಾ ಕಾಮತ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಿ.ಜಿ ಶೆಟ್ಟಿ, ವಿದ್ಯಾಪ್ರಸಾದ್, ನಿವ್ರತ್ತ ಶಿಕ್ಷಕ ಪದ್ಮನಾಭ ನಾಯಕ್ ಶುಭಾಶಂನೆಗೈದರು. ಯಕ್ಷಗಾನ ಗುರುಗಳಾದ ಶಾಂತಾರಾಮ ಆಚಾರ್ಯ ಉಪಸ್ಥಿತರಿದ್ದರು.ಶಿಕ್ಷಕರಾದ ಸುಧೀರ್ ನಾಯಕ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಯಲ್ಲಿ

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ

15-7-2023ರಂದು ಕಾಪು ದಂಡತೀರ್ಥ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಯನ್ನು ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್,ಉಪಾಧ್ಯಕ್ಷ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯೂ ಆದ ವಿ.ಜಿ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವಿದ್ಯಾ ಸಂಸ್ಥೆಯ ಸಂಚಾಲಕರಾದ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು.ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಯಕ್ಷ ಗುರುಗಳಾದ ಮಂಜುನಾಥ್ ಕುಲಾಲ್, ಉಭಯ ಶಾಲಾ

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »

We're currently hard at work gathering information and crafting content to bring you the best experience. Stay tuned for exciting updates!