ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 43ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 43ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023 Read More »
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಹೆಸ್ಕುತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂದು (23.08.2023) ಯಕ್ಷಶಿಕ್ಷಣ ಉದ್ಘಾಟನೆಗೊಂಡಿತು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಎರಡು ವರ್ಷದಿಂದ ವಿದ್ಯಾರ್ಥಿಯಾಗಿದ್ದುಕೊಂಡು, ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನವನ್ನು ಅಭ್ಯಸಿಸಿದ ಅಬ್ದುಲ್ ರವೂಫ್ ಅವರು ಈ ಶಾಲೆಯ ಮುಖ್ಯೋಪಾಧ್ಯಾಯರಾಗಿರುವುದು ನಾವೆಲ್ಲ ಹೆಮ್ಮೆ ಪಡುವಂತ ವಿಚಾರವಾಗಿದೆ ಎಂದು ಶುಭಕೋರಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ
ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »
ಎಸ್.ವಿ.ಎಚ್ ಕನ್ನಡ ಮಾಧ್ಯಮ ಪ್ರೌಢ ಶಾಲೆ ಇನ್ನಂಜೆಯಲ್ಲಿ ಕಾಪು ವಿಧಾನಸಭಾ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 22-08-2023 ರಂದು ಹಿರಿಯ ಯಕ್ಷಗಾನ ಕಲಾವಿದ ಡಾ. ಕೊಳ್ಯೂರು ರಾಮಚಂದ್ರ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಮತ್ತು ಸದಸ್ಯರಾದ ಸುಬ್ರಹ್ಮಣ್ಯ ಬೈಪಡಿತ್ತಾಯ ಶುಭ ಹಾರೈಸಿದರು. ಶಾಲಾ
ಇನ್ನಂಜೆ ಎಸ್.ವಿ.ಎಚ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »
ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 18.08.2023 ರಂದು ಪ್ರಾರಂಭಿಸಲಾಯಿತು. ಯಕ್ಷಗಾನ ಕಲಾರಂಗದ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆಯವರು ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಗೀತದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸುತ್ತಾ ಯಕ್ಷಗಾನದ ಮಹತ್ವವನ್ನು ತಿಳಿಸಿದರು. ಯಕ್ಷಗುರು ನರಸಿಂಹ ತುಂಗರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಎಸ್. ಎನ್. ಸ್ವಾಗತಿಸಿದರು. ಶಿಕ್ಷಕಿ ಅಕ್ಷತಾ ವಿ. ಕಾರ್ಯಕ್ರಮವನ್ನು
ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಯಲ್ಲಿ ಯಕ್ಷಶಿಕ್ಷಣ ಆರಂಭ. Read More »
2007ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸುವ ಉದ್ದೇಶದಿಂದ ಹುಟ್ಟಿಕೊಂಡ ಯಕ್ಷಶಿಕ್ಷಣ ಟ್ರಸ್ಟ್ ಪ್ರತೀ ವರ್ಷ 40ಕ್ಕೂ ಮೇಲ್ಪಟ್ಟು ಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸಿ ಪ್ರದರ್ಶನದ ವ್ಯವಸ್ಥೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ ಸನಿಹದ ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೂ ಯಕ್ಷಶಿಕ್ಷಣ ಅಭಿಯಾನ ವಿಸ್ತರಣೆಗೊಂಡಿದೆ. ಉಡುಪಿ, ಕಾಪು ಮತ್ತು ಕುಂದಾಪುರ ಕ್ಷೇತ್ರಗಳಲ್ಲಿ ಕ್ರಮವಾಗಿ 43, 15 ಮತ್ತು 11 ಹೀಗೆ ಒಟ್ಟೂ 69 ಪ್ರೌಢಶಾಲೆಗಳಲ್ಲಿ 31 ಗುರುಗಳು ಯಕ್ಷಶಿಕ್ಷಣವನ್ನು ನೀಡುತ್ತಿದ್ದಾರೆ. ಆಗಸ್ಟ್ 16, 2023ರಂದು ಈ
ಯಕ್ಷಶಿಕ್ಷಣ ಗುರುಗಳ ಸಮಾವೇಶ. Read More »
ಉಡುಪಿಯ ಯಕ್ಷಗಾನ ಕಲಾರಂಗವು ಪ್ರತೀ ವರ್ಷ ವಿದ್ವಾಂಸರಿಗೆ ನೀಡುವ 40,000 ರೂಪಾಯಿ ನಿಧಿಯನ್ನೊಳಗೊಂಡಿರುವ ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಸಂಸ್ಮರಣ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಹಿರಿಯ ಮೃದಂಗ ವಾದಕ ವಿದ್ವಾನ್ ಕೆ. ಬಾಬು ರೈ ಅವರಿಗೆ ಆಗಸ್ಟ್ 15, 2023ರಂದು ಎಡನೀರು ಮಠದಲ್ಲಿ ಕೆ. ಬಾಬು ರೈಯವರ ಶತಮಾನೋತ್ಸವ ಆಚರಣೆಯ ಸಂದರ್ಭ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳು ತಮ್ಮ ಅನುಗ್ರಹ ಸಂದೇಶದಲ್ಲಿ ಬಾಬು ರೈಗಳು ಶತಾಯುಷಿ ಕಲಾವಿದರಷ್ಟೇ ಅಲ್ಲ ಶತಮಾನದ ಶ್ರೇಷ್ಠ ಕಲಾವಿದರು. ಅವರ
ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ. Read More »
ಅಪ್ಪಟ ಕಲೋಪಾಸಕರಾಗಿರುವ ಮೃದಂಗ ವಿದ್ವಾನ್ ಕೋಟೆಕ್ಕಾರು ಬಾಬು ರೈ ಅವರಿಗೆ ಜನ್ಮಶತಮಾನೋತ್ಸವ. ಹರೆಯದಂತೆಯೇ ಇವರ ವಿದ್ವತ್ತಿನ ಘನತೆಗೂ ಶತ-ಮಾನ ! 1943ರಲ್ಲಿ ಯಕ್ಷಗಾನ ಮದ್ದಲೆವಾದಕನಾಗಿ ಯಕ್ಷಗಾನ ಕಲಾಕ್ಷೇತ್ರವನ್ನು ಪ್ರವೇಶಿಸಿ ಮಧೂರು ಮೇಳದಲ್ಲಿ ತಿರುಗಾಟ ನಡೆಸಿದ ಇವರಿಗೆ ಸಹೋದರ ಕೋಟೆಕ್ಕಾರ್ ದೇರಣ್ಣ ರೈಗಳೇ ಮೊದಲ ಗುರು. ಜೀವನೋಪಾಯಕ್ಕಾಗಿ ಊರು ತೊರೆದು ಬೆಂಗಳೂರು, ಮೈಸೂರು ಸೇರಿ ಮೈಸೂರು ಮಹಾರಾಜರ ಆಸ್ಥಾನ ವಿದ್ವಾನ್ ಟಿ. ಎಂ. ವೆಂಕಟೇಶ ದೇವರ್ ಅವರೊಂದಿಗೆ ಶಿಷ್ಯತ್ವವನ್ನು ಅಂಗೀಕರಿಸಿಕೊಂಡರು. ಏಳು ವರ್ಷ ಮೃದಂಗ ಕಲಿತು ಸಂಗೀತ ಕ್ಷೇತ್ರದ
ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕೆ. ಬಾಬು ರೈ ಆಯ್ಕೆ. Read More »
12-08-2023 ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆಗೊಂಡಿತು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರಮೀಳಾ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ವಿದ್ಯಾಪ್ರಸಾದ್, ಶಾಲೆಯಲ್ಲಿ ಗುರುಗಳಾಗಿ ನಿಯುಕ್ತರಾದ ಪ್ರಣಮ್ಯಾ ತಂತ್ರಿ ಉಪಸ್ಥಿತರಿದ್ದರು.
ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ. Read More »
ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ ಆಗಸ್ಟ್ 10, 2023 ಗುರುವಾರ ಶಾಲಾ ಸಭಾಭವನದಲ್ಲಿ ನೆರವೇರಿತು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ ಈ ಬಾರಿ ಎಪ್ಪತ್ತು ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಕೆ ಆರಂಭಗೊಂಡಿದ್ದು, ಇನ್ನಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದ್ದು, ಗುರುಗಳ ಕೊರತೆಯಿಂದಾಗಿ ಕೋರಿಕೆ ಈಡೇರಿಸಲಾಗುತ್ತಿಲ್ಲ.ಇದು ಯಕ್ಷಶಿಕ್ಷಣದ ಬಗೆಗಿರುವ ಆಸಕ್ತಿಯ ದ್ಯೋತಕವಾಗಿದೆ ಎಂಬುದಾಗಿ ನುಡಿದರು. ಮುಖ್ಯ ಶಿಕ್ಷಕ ರವೀಂದ್ರರು ಸ್ವಾಗತಿಸಿದರು. ಶಾಲಾ ಸಂಚಾಲಕ ಟಿ. ಕೆ. ಗಣೇಶ್ ರಾವ್, ಉಡುಪಿ ಮೆಸ್ಕಾಂ ಅಧಿಕಾರಿ ಎಸ್. ಗಣರಾಜ ಭಟ್, ಯಕ್ಷಗಾನ
ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ. Read More »