ತಾಳಮದ್ದಲೆ ಸಪ್ತಾಹವನ್ನು ವೀಕ್ಷಿಸಲು ಈ ಕೆಳಗಿನ ಲಿಂಕನ್ನು ಒತ್ತಿರಿ
ತಾಳಮದ್ದಲೆ ಸಪ್ತಾಹವನ್ನು ವೀಕ್ಷಿಸಲು ಈ ಕೆಳಗಿನ ಲಿಂಕನ್ನು ಒತ್ತಿರಿ Read More »
ತಾಳಮದ್ದಲೆ ಸಪ್ತಾಹದ ಅಂಗವಾಗಿ 3ನೇ ದಿನ ಬನ್ನಂಜೆ ಶ್ರೀ ಶಿವಗಿರಿ ಸಭಾಭವನದಲ್ಲಿ ಹರ್ಷ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಸೂರ್ಯಪ್ರಕಾಶ್ ಅವರು 23-05-2023ರಂದು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬನ್ನಂಜೆ ಬಿಲ್ಲವರ ಸೇವಾ ಸಂಘದ ಕಾರ್ಯದರ್ಶಿ ಆನಂದ ಪೂಜಾರಿ ಹಾಗೂ ಕಲಾರಂಗದ ಉಪಾಧ್ಯಕರುಗಳಾದ ಎಸ್. ವಿ. ಭಟ್, ಕಿಶನ್ ಹೆಗ್ಡೆ, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ, ಕಾರ್ಯದರ್ಶಿ ಮುರಲಿ ಕಡೆಕಾರ್ ಉಪಸ್ಥಿತರಿದ್ದರು. ಗಣೇಶ್ ಬ್ರಹ್ಮಾರ ಕಾರ್ಯಕ್ರಮ ನಿರೂಪಿಸಿದರು. ನಂತರ ತಾಳಮದ್ದಲೆ
ಬನ್ನಂಜೆ ಶಿವಗಿರಿ ಸಭಾಭವನದಲ್ಲಿ ತಾಳಮದ್ದಲೆಗೆ ಚಾಲನೆ. Read More »
ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಷಕ್ ನ ದ್ವಿತೀಯ ಪಿ.ಯು.ಸಿ.ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಶಿಬಿರ ಇಂದು(23-5-2023) ಸಾಲಿಗ್ರಾಮ ದೇವಳದ ಜ್ಞಾನ ಮಂದಿರದಲ್ಲಿ ಜರಗಿತು. ನಿರ್ದೇಶಕರಾಗಿ ಹುಬ್ಬಳ್ಳಿಯ ಮೈ ಲೈಫ್ ಮುಖ್ಯಸ್ಥರಾದ ಪ್ರವೀಣ್ ಗುಡಿಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈಗಾಗಲೇ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಡಾ.ಶ್ರುತಕೀರ್ತಿಯವರು ಮುಂದಿನ ನಡೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಸಿ.ಎ. ಮಾಡಲು ಸಂಕಲ್ಪಿಸಿದ ವಿದ್ಯಾರ್ಥಿಗಳಿಗೆ ಸಿಎ. ಪ್ರದೀಪ ಜೋಗಿಯವರು ಸೂಕ್ತ ಸಲಹೆ ನೀಡಿದರು.ಶ್ರೀ ಗುರುನರಸಿಂಹ ದೇವಳದ ಆಡಳಿತ
ವಿದ್ಯಾಪೋಷಕ್ ಒಂದು ದಿನದ ಶೈಕ್ಷಣಿಕ ಶಿಬಿರ. Read More »
ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ತಾಳಮದ್ದಲೆ ಸಪ್ತಾಹ ಆಚರಿಸುತ್ತಾ ಬಂದಿದ್ದು, ಈ ಬಾರಿಯ ತಾಳಮದ್ದಲೆ ಸಪ್ತಾಹವು ಮೇ 21, 2023ರಂದು ಸಂಜೆ 5.00 ಗಂಟೆಗೆ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಖ್ಯಾತ ವೈದ್ಯ ಡಾ. ಕಬ್ಯಾಡಿ ಹರಿರಾಮ ಆಚಾರ್ಯರು ಸಪ್ತಾಹವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತಾಳಮದ್ದಲೆಯ ಕುರಿತು ಮಾತನಾಡುತ್ತಾ ಮೇಲಿನ ಮಾತನ್ನು ಉಲ್ಲೇಖಿಸಿದರು. ಉಡುಪಿಯ ಮಾನ್ಯ ಶಾಸಕರಾದ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ
ಅರ್ಥಧಾರಿಗಳು ಪುರಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ವಾಹಕರು – ಡಾ. ಕಬಿಯಾಡಿ ಹರಿರಾಮ ಆಚಾರ್ಯ Read More »
ಯಕ್ಷಗಾನ ಕಲಾರಂಗ ಪ್ರತಿ ವರ್ಷ ತಾಳಮದ್ದಲೆ ಸಪ್ತಾಹ ಆಚರಿಸುತ್ತಾ ಬಂದಿದ್ದು, ಈ ಬಾರಿಯ ಸಪ್ತಾಹವು ಮೇ 21ರಿಂದ 27ರ ವರೆಗೆ ವಿವಿಧ ಸ್ಥಳಗಳಲ್ಲಿ ನಡೆಯಲಿದೆ. 21-05-2023 ಭಾನುವಾರ ಸಂಜೆ 5.00 ಗಂಟೆಗೆ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ಡಾ. ಕಬ್ಯಾಡಿ ಹರಿರಾಮ ಆಚಾರ್ಯರು ಸಪ್ತಾಹವನ್ನು ಉದ್ಘಾಟಿಸಲಿರುವರು. ಉಡುಪಿಯ ಮಾನ್ಯ ಶಾಸಕರಾದ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಮಾರಂಭದಲ್ಲಿ ಬಿ. ರಾಜ ಗೋಪಾಲ್ ಆಚಾರ್ಯ, ದಿಲೀಪ್ರಾಜ್ ಹೆಗ್ಡೆ ಹಾಗೂ ಗಣೇಶ ಪಾಟೀಲ್ ಪಾಲ್ಗೊಳ್ಳುವರು. ಸಮಾರಂಭದ ಬಳಿಕ ಸಂಜೆ 5.30ರಿಂದ 8.30ರ
21-05-2023ರಂದುಪರ್ಕಳದಲ್ಲಿ ತಾಳಮದ್ದಲೆ ಸಪ್ತಾಹ ಉದ್ಘಾಟನೆ. Read More »
ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳೂ, ಮಂದಾರ್ತಿ ಮೇಳದ ಹಿಮ್ಮೇಳ ಕಲಾವಿದರೂ ಆದ ಮಹೇಶ್ ಕುಮಾರ್ ಇವರ ಗೃಹಪ್ರವೇಶ 06-05-2023ರಂದು ಮಂದಾರ್ತಿಯಲ್ಲಿ ಜರುಗಿದ್ದು, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ನೂತನ ಮನೆಗೆ ಭೇಟಿ ನೀಡಿ, ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ ಉಡುಗೊರೆಯಾಗಿ 50,000 ರೂಪಾಯಿಯನ್ನು ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಮುರಲಿ ಕಡೆಕಾರ್, ಸದಸ್ಯರಾದ ಎಸ್. ವಿ. ಭಟ್, ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಗಣೇಶ್ ಬ್ರಹ್ಮಾವರ
ಯಕ್ಷಶಿಕ್ಷಣ ಟ್ರಸ್ಟಿನ ವತಿಯಿಂದ 50,000 ರೂಪಾಯಿಯ ಉಡುಗೊರೆ Read More »
ಡಿಸೆಂಬರ್ 22, 2022ರಂದು ಕಟೀಲಿನ ಸರಸ್ವತಿ ಸದನದಲ್ಲಿ ತ್ರಿಜನ್ಮ ಮೋಕ್ಷದ ಶಿಶುಪಾಲನ ವೇಷದಲ್ಲಿರುವಾಗಲೇ ಇಹಲೋಕ ಯಾತ್ರೆ ಮುಗಿಸಿದ ಕಲಾವಿದ, ಪ್ರಸಂಗಕರ್ತ ಗುರುವಪ್ಪ ಬಾಯಾರು ಹಾಗೂ ಇತ್ತೀಚೆಗೆ ಅಗಲಿದ ಸಸಿಹಿತ್ಲು ಮೇಳದ ಯುವ ಕಲಾವಿದ ಜಗದೀಶ ನಲ್ಕ ಇವರ ಕುಟುಂಬಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದಿಂದ ಸಾಂತ್ವನ ನಿಧಿಯಾಗಿ ಅನುಕ್ರಮವಾಗಿ ರೂ. 50,000 ಮತ್ತು ರೂ. 75,000 ನೀಡಲಾಯಿತು. ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕರ್ಣಾಟಕ ಬ್ಯಾಂಕಿನ ನಿವೃತ್ತ ಆಡಳಿತಾಧಿಕಾರಿ ಮಹಾಬಲೇಶ್ವರ ಎಂ. ಎಸ್. ಮತ್ತು ಮಾಹೆಯ
ಕಲಾವಿದರ ಕುಟುಂಬಕ್ಕೆ ಯಕ್ಷಗಾನ ಕಲಾರಂಗದಿಂದ ಸಾಂತ್ವನ ನಿಧಿ. Read More »
‘ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಹಾಗೆಯೇ ಕರ್ಣಾಟಕ ಬ್ಯಾಂಕ್ ಕರಾವಳಿ ಭಾಗದ ನಮಗೆ ಅತ್ಯಂತ ಹೆಮ್ಮೆಯ ವಿತ್ತೀಯ ಸಂಸ್ಥೆಯಾಗಿದೆ. ಮಹಾಬಲೇಶ್ವರ ಎಂ. ಎಸ್. ಕರ್ಣಾಟಕ ಬ್ಯಾಂಕ್ಗೆ ದೊಡ್ಡ ಶಕ್ತಿಯಾಗಿದ್ದರು. ಬ್ಯಾಂಕಿನಿಂದ ನಿವೃತ್ತರಾದ ಮೇಲೆ ಅವರನ್ನು ಅಭಿನಂದಿಸುತ್ತಿರುವುದು ಅವರು ಬ್ಯಾಂಕಿನ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆಗೆ ನಿದರ್ಶನ. ಕರ್ಣಾಟಕ ಬ್ಯಾಂಕ್ ಸಮಾಜಸ್ನೇಹಿ, ಗ್ರಾಹಕಸ್ನೇಹಿಯಾಗಿ ವ್ಯವಹರಿಸುತ್ತಾ ಬಂದಿದೆ ಎಂದು ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಯಕ್ಷಗಾನ ಕಲಾರಂಗವು 25-04-2023ರಂದು ಉಡುಪಿಯ ಪೇಜಾವರ ಮಠದ ರಾಮವಿಠಲ ಸಭಾಭವನದಲ್ಲಿ ಆಯೋಜಿಸಿದ್ದ
ಮಹಾಬಲೇಶ್ವರ ಎಂ. ಎಸ್. ಅವರಿಗೆ ಅಭಿನಂದನೆ. Read More »