ಬಡಗುತಿಟ್ಟು ಯಕ್ಷಗಾನ – ‘ರಾಜಾ ದಿಲೀಪ’
ಯಕ್ಷಗಾನ ಕಲಾರಂಗದ ಸದಸ್ಯರಿಗಾಗಿ ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಬಡಗು ತಿಟ್ಟಿನ ಕಲಾವಿದರಿಂದ “ರಾಜಾ ದಿಲೀಪ” ಸೊಗಸಾಗಿ ಪ್ರದರ್ಶಿಸಲ್ಪಟ್ಟಿತು. ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಚ್.ಎನ್.ವೆಂಕಟೇಶ್ ಯಕ್ಷಗಾನ ಸಂಯೋಜಿಸಿದ್ದರು.
ಯಕ್ಷಗಾನ ಕಲಾರಂಗದ ಸದಸ್ಯರಿಗಾಗಿ ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಬಡಗು ತಿಟ್ಟಿನ ಕಲಾವಿದರಿಂದ “ರಾಜಾ ದಿಲೀಪ” ಸೊಗಸಾಗಿ ಪ್ರದರ್ಶಿಸಲ್ಪಟ್ಟಿತು. ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಚ್.ಎನ್.ವೆಂಕಟೇಶ್ ಯಕ್ಷಗಾನ ಸಂಯೋಜಿಸಿದ್ದರು.
ನಮ್ಮ ಮೂರನೇ ಪರ್ಯಾಯದಲ್ಲಿ ಆರಂಭಗೊಂಡ ಯಕ್ಷಶಿಕ್ಷಣ ಅಭಿಯಾನ, ಕಳೆದ 16 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಾ, ಪ್ರಕೃತ ನಾಲ್ಕು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ ವಿಸ್ತರಣೆಗೊಂಡಿರುವುದು ಅತ್ಯಂತ ಸ್ತುತ್ಯರ್ಹ. ಯಕ್ಷಗಾನದಿಂದ ವ್ಯಕ್ತಿಯ ಪರಿಪೂರ್ಣ ವಿಕಸನ ಸಾಧ್ಯ. ಅಂತಹ ಅಪೂರ್ವ ಕಲೆಯನ್ನು ಪ್ರೌಢ ವಿದ್ಯಾರ್ಥಿಗಳಿಗೆ ಕಲಿಸುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಯಕ್ಷಶಿಕ್ಷಣ-2024ರ ಅಭಿಯಾನವನ್ನು 11.07.2024ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟಿಸುತ್ತಾ ನುಡಿದರು. ಉಡುಪಿ ಶಾಸಕರೂ, ಯಕ್ಷಶಿಕ್ಷಣ ಅಧ್ಯಕ್ಷರೂ …
ಉಡುಪಿಯ ನಿಟ್ಟೂರು ಪ್ರೌಢಶಾಲೆಯಲ್ಲಿ ಜುಲೈ 10, 2024ರಂದು ಯಕ್ಷಶಿಕ್ಷಣ ತರಗತಿಯನ್ನು ನಿಟ್ಟೂರು ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಯೂ ಆದ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಹಳೆ ವಿದ್ಯಾರ್ಥಿಯಾದ,ಯಕ್ಷಗುರು ನಿಶ್ವಲ್ ಕುಮಾರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ವಿದ್ಯಾರ್ಥಿನಿ ಯಶಶ್ವಿನಿ ಕಾರ್ಯಕ್ರಮ ನಿರೂಪಿಸಿದ ಸಭೆಯ ಕೊನೆಯಲ್ಲಿ ಸಂಗೀತಾ ಧನ್ಯವಾದಗೈದರು.ಯಕ್ಷಗಾನ ಉಸ್ತುವಾರಿ ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.
ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ,ಒಳಕಾಡು ಇಲ್ಲಿ ಜುಲೈ 8 ರಂದು 2024 ಸಾಲಿನ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆಯನ್ನು ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ನೆರವೇರಿಸಿದರು. ಅಭ್ಯಾಗತರಾಗಿ ಸರಕಾರಿ ಪದವಿ ಪೂರ್ವ ಕಾಲೇಜು,ತೆಂಕನಿಡಿಯೂರು ಇದರ ಪ್ರಾಂಶುಪಾಲರಾದ ವಿಶ್ವನಾಥ ಕರಬ ಭಾಗವಹಿಸಿದರು.ಇದೇ ಸಂದರ್ಭದಲ್ಲಿ ಶಾಲೆಯ ವಿವಿಧ ಸಂಘಗಳ ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಯಕ್ಷ ಗುರುಗಳಾದ ರತ್ನಾಕರ ಶೆಣೈ,ನಿವೃತ್ತ ಪ್ರಾಂಶುಪಾಲೆ ತಾರಾ ಮೇಡಮ್,ರವಿರಾಜ ನಾಯಕ್ ಸಂಸ್ಕೃತ ಅಧ್ಯಾಪಕರಾದ ವೆಂಕಟರಮಣ ಉಪಾಧ್ಯ,ಎಸ್.ಡಿ.ಎಂ. ಸಿ.ಯ ಸದಸ್ಯರಾದ ಪ್ರವೀಣ ಪೂಜಾರಿ ಮತ್ತು ವಸಂತಿ …
ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇವರ ವತಿಯಿಂದ ಯಕ್ಚಗಾನ ಕಲಾರಂಗ- ಉಡುಪಿ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯಕ್ಷಗಾನ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ- ಜಾನುವಾರುಕಟ್ಟೆ ಬಿಲ್ಲಾಡಿ( ಬ್ರಹ್ಮಾವರ ವಲಯ) ದಲ್ಲಿ ಇಂದು ಉದ್ಘಾಟಿಸಲಾಯಿತು. ನಿವೃತ್ತ BIERT ಹಾಗೂSDMC ಸದಸ್ಯರಾದ ಶ್ರೀ ಚಂದ್ರಶೇಖರ ಶೆಟ್ಟಿಯವರು ಈ ಯಕ್ಷಶಿಕ್ಷಣವನ್ನು ದೀಪ ಬೆಳಗಿ ಉದ್ಘಾಟಿಸಿದರು.ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಹಾಗೂ ಯಕ್ಷಗಾನ ಕಲಾರಂಗದ ಈ ಮಹೋನ್ನತ ಯಕ್ಷಗಾನ ಅಭಿಯಾನದಿಂದ ನಮ್ಮ ನಾಡಿನ ಆರಾಧನಾ ಕಲೆ ಪೀಳಿಗೆಯಿಂದ ಪೀಳಿಗೆಗೆ ದಾಟಿಸುವುದಕ್ಕೆ ಸಾಧ್ಯವಾಗುತ್ತಿದೆ.ಇದು ಸರಕಾರಿ ಪ್ರೌಢಶಾಲೆಯ ಮಕ್ಕಳ ಹಾಗೂ …
ಸರಕಾರಿ ಪ್ರೌಢಶಾಲೆ ಜಾನುವಾರುಕಟ್ಟೆ- ಯಕ್ಷಶಿಕ್ಷಣ ಉದ್ಘಾಟನೆ Read More »
ಯಕ್ಷಗಾನ ಕಲಾರಂಗದ ಸದಸ್ಯರಿಗಾಗಿ ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ತೆಂಕುತಿಟ್ಟಿನ ಕಲಾವಿದರಿಂದ ಪೃಥ್ವಿರಾಜ್ ಕವತ್ತಾರ್ ಇವರ ನಿರ್ದೇಶನದಲ್ಲಿ “ಶ್ರೀ ಕಲ್ಯಾಣ” ಸೊಗಸಾಗಿ ಪ್ರದರ್ಶಿಸಲ್ಪಟ್ಟು,ವೀಕ್ಷಕರ ಮೆಚ್ಚುಗೆಗಳಿಸಿತು.
ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೌಕೂರು ಮೇಳದ ಯಕ್ಷಗಾನ ಕಲಾವಿದ ನಂದಕುಮಾರ ಪಾಣಾರ ಇವರಿಗೆ ನಿರ್ಮಿಸಿದ “ಲಲಿತಾ ಸದನ”ವನ್ನು ಉದ್ಘಾಟಿಸುತ್ತಾ ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಕುಂದಾಪುರ ತಾಲೂಕಿನ ಬಿದ್ಕಲ್ಕಟ್ಟೆಯಲ್ಲಿ ಜುಲೈ 7ರಂದು ನಡೆದ …
29-06-2024 ಶನಿವಾರ SVS ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯಲ್ಲಿ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಂದ ದೀಪ ಪ್ರಜ್ವಲಿಸುವ ಮೂಲಕ ಯಕ್ಷ ಶಿಕ್ಷಣ ತರಬೇತಿ ಆರಂಭಗೊಂಡಿತು. ಯಕ್ಷಗಾನ ಶಿಕ್ಷಕರಾದ ಮಾರುತಿ, ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವಿದ್ಯಾಪೋಷಕ್ ಫಲಾನುಭವಿ ಪದವಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಮಾವೇಶವು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಜೂನ್ 23ರಂದು ಜರಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎ.ಪಿ.ಭಟ್,ಡಾ.ಸಿ.ಕೆ. ಮಂಜುನಾಥ,ಪ್ರೊ.ಕೆ.ಸದಾಶಿವ ರಾವ್, ರತ್ನ ಕುಮಾರ್ ಮಕ್ಕಳಿಗೆ ಶೈಕ್ಷಣಿಕ ಮತ್ತು ಬದುಕಿಗೆ ಅಗತ್ಯದ ಸಲಹೆ ಮತ್ತು ಮಾರ್ಗದರ್ಶನದ ಮಾತುಗಳನ್ನಾಡಿದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಕಿವಿ ಮಾತು ಹೇಳಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಅಗತ್ಯದ ಸೂಚನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಯು.ಎಸ್.ರಾಜಗೋಪಾಲ ಆಚಾರ್ಯ, ಉಪಾಧ್ಯಕ್ಷ ವಿ.ಜಿ ಶೆಟ್ಟಿ,ನಾರಾಯಣ ಎಂ.ಹೆಗಡೆ, ಎಚ್. ಎನ್.ಶೃಂಗೇಶ್ವರ, ಅಶೋಕ.ಎಂ …