Yakshagana Kalaranga

Yakshagana Kalaranga

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ.

ವಿದ್ಯಾಪೋಷಕ್‍ನ ಇಂಜಿನೀಯರ್, ಮೆಡಿಕಲ್ ಹಾಗು ಸ್ನಾತಕೋತ್ತರದ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸಮಾವೇಶವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ 24.08.2025 ರಂದು ಜರಗಿತು.ಇದೇ ಸಂದರ್ಭದಲ್ಲಿ ಸಂಸ್ಥೆಯ 50ನೇ ವರ್ಷದ ವಾರ್ಷಿಕ ಸಂಚಿಕೆಯನ್ನು ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರೂ ಹಾಗೂ ಕೋಟೇಶ್ವರದ ಸಹನಾ ಕನ್ವೆನ್ಶನ್‍ನ ಮಾಲಕರಾದ ಸುರೇಂದ್ರ ಶೆಟ್ಟಿಯವರು ಉದ್ಘಾಟನೆಗೊಳಿಸಿ ಸಂಸ್ಥಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ದಾನಿಗಳಾದ ಡಾ. ಸುದರ್ಶನಮೂರ್ತಿ, ಲಕ್ಷ್ಮೀ ಎಸ್. ಮೂರ್ತಿ, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಆರ್.ಹೆಗಡೆ, ಡಾ. ಎಂ.ಎಸ್. ರಾವ್, ಡಾ. […]

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ. Read More »

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ (ಶ್ರೀಮತಿ ಜ್ಯೋತಿ ಮತ್ತು ಶ್ರೀ ಭಾಸ್ಕರ ಪೂಜಾರಿ ಇವರ ಪುತ್ರ) ಇವನಿಗೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಡಾ. ಮಹಾಬಲೇಶ್ವರ ರಾವ್ ಅವರು ತಮ್ಮ ಮಾತಾ – ಪಿತರಾದ ಮಣೂರು ವಿಶ್ವನಾಥ ಮಯ್ಯ ಮತ್ತು ಸರಸ್ವತಿ ಇವರ ಸ್ಮರಣೆಯಲ್ಲಿ, 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ವಿಶ್ವಸರಸ್ವತಿ’ಯನ್ನು 17.08.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳು ಮತ್ತು ತಂದೆ ತಾಯಿಗಳನ್ನು

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಘಟಕವು ಈ ವರ್ಷ ವಿದ್ಯಾಪೋಷಕ್ ಗೆ ಆಯ್ಕೆಗೊಂಡ ಪ್ರಥಮ ಪಿ. ಯು ವಿದ್ಯಾರ್ಥಿಗಳ ಮತ್ತು ಹೆತ್ತವರ ಒಂದು ದಿನದ ಸಮಾಲೋಚನಾ ಸಭೆಯನ್ನು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 17.08.25 ರಂದು ಆಯೋಜಿಸಿತ್ತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಖ್ಯಾತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ವಿದ್ಯೆಯ ಮಹತ್ತ್ವ ತಿಳಿಸಿ ವಿದ್ಯಾ ಪೋಷಕ್ ಮೂಲಕ ಯಕ್ಷಗಾನ ಕಲಾರಂಗ ಸಮಾಜದ ಸಂಕಷ್ಟಕ್ಕೆ ವಿಶಿಷ್ಟವಾಗಿ ಸ್ಪಂದಿಸುತ್ತಿದೆ ಎಂದರು. ಪ್ರಥಮ ದರ್ಜೆ ಗುತ್ತಿಗೆದಾರ ದಾನಿ ರಾಜೇಶ್ ಕಾರಂತ ಮಾತನಾಡಿ

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ Read More »

ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚೈತ್ರಾ (ಶ್ರೀಮತಿ ಲಕ್ಷ್ಮಿ ಮತ್ತು ಶ್ರೀ ಜಯಂತ ಇವರ ಪುತ್ರಿ) ಇವಳಿಗೆ ಬೈಂದೂರು ತಾಲೂಕಿನ ತೆಗ್ಗರ್ಸೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕರಾದ ಜಪಾನ್‍ನ ಹರಿಕೃಷ್ಣ ಭಟ್ ಅವರು ತಮ್ಮ ತಂದೆ-ತಾಯಂದಿರಾದ ವಾಸುದೇವ ಭಟ್ ಮತ್ತು ರುಕ್ಮಿಣಿ ಭಟ್ ಇವರ ಸವಿನೆನಪಿನಲ್ಲಿ, 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ರುಕ್ಮಿಣೀವಾಸುದೇವ’ ವನ್ನು 16.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡರು.

ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ.

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12, 2025 ಶನಿವಾರದಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯು ಉಪಾಧ್ಯಕ್ಷರಾದ ಎಸ್. ವಿ. ಭಟ್ ಸ್ವಾಗತಿಸುವುದರ ಮೂಲಕ ಪ್ರಾರಂಭವಾಯಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಅನುಕ್ರಮವಾಗಿ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಮಾಡಿದರು. ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ. Read More »

ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶನ ಸಮಾವೇಶವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ 08.07.2025ರಂದು ಜರಗಿತು. ಅದಮಾರು ಶಿಕ್ಷಣ ಸಂಸ್ಥೆಗಳ ಗೌರವ ಆಡಳಿತಾಧಿಕರಿಗಳಾದ ಡಾ. ಎ. ಪಿ. ಭಟ್ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸನ್ನಡತೆಯನ್ನು ಮೈಗೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಹಿರಿಯ ಉದ್ಯಮಿ ಮಡಾಮಕ್ಕಿ ಶಶಿಧರ ಶೆಟ್ಟಿಯವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಿಎ ಅರುಣ್ ನಾಯಕ್ ಅವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಹುಬ್ಬಳ್ಳಿಯ

ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. Read More »

ತೆಂಕುತಿಟ್ಟು ಯಕ್ಷಗಾನ -2025

ಯಕ್ಷಗಾನ ಕಲಾರಂಗವು ತನ್ನ ಸದಸ್ಯರಿಗೆ ಕಳೆದ ಮೂರು ವರ್ಷಗಳಿಂದ ಜುಲೈ ತಿಂಗಳಲ್ಲಿ ನಡೆಸುತ್ತಾ ಬಂದ ಮಳೆಗಾಲದ ಎರಡು ಯಕ್ಷಗಾನಗಳಲ್ಲಿ ಒಂದು ಪ್ರದರ್ಶನ 06.07.2025 ರಂದು ಜರಗಿತು. ಪೃಥ್ವಿರಾಜ್ ಕವತ್ತಾರ್ ರವರ ಪರಿಕಲ್ಪನೆ ಮತ್ತು ಸಮಗ್ರ ನಿರ್ದೇಶನದಲ್ಲಿ ಸಾಂಪ್ರದಾಯಿಕ ಪೂರ್ವರಂಗ ಸಹಿತ ಶ್ರೀದೇವಿ ಮಹಾತ್ಮೆ ಸುಂದರವಾಗಿ ಪ್ರದರ್ಶನಗೊಂಡಿತು.

ತೆಂಕುತಿಟ್ಟು ಯಕ್ಷಗಾನ -2025 Read More »

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಧಾನ ಸಮಾರಂಭ’ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರ ಸಮಾರೋಪ

4.7.2025 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶತಾವಧಾನಿ ಡಾ.ಆರ್. ಗಣೇಶರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ವಿದ್ವಾಂಸರಿಗೆ ನೀಡಲಾಗುವ, 60000 ರೂ. ನಗದನ್ನೊಳಗೊಂಡ “ಯಕ್ಷಗಾನ ಕಲಾರಂಗ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಲಕ್ಷ್ಮೀಶ ತೋಳ್ಪಾಡಿ ವಹಿಸಿದ್ದು,ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಅಭಿನಂದನಾ ಭಾಷಣ ಮಾಡಿದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪವನ್ನು ಇದೇ ಸಂದರ್ಭದಲ್ಲಿ ನೆರವೇರಿಸಲ್ಪಟ್ಟಿತು. ಪವನ್ ಕಿರಣ್ಕೆರೆ,

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಧಾನ ಸಮಾರಂಭ’ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರ ಸಮಾರೋಪ Read More »

ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ವಿಕಾಳಿಗೆ (ಶ್ರೀಮತಿ ಚಂದ್ರಾವತಿ ಮತ್ತು ಶ್ರೀ ಮಾದೇವ ಖಾರ್ವಿ ಇವರ ಪುತ್ರಿ) ಬೈಂದೂರು ತಾಲೂಕಿನ ಮರವಂತೆಯಲ್ಲಿ ಬೆಂಗಳೂರಿನ ಶ್ರೀಮತಿ ಗೀತಾ ಎಲ್. ಎನ್. ಶೆಟ್ಟಿಯವರು ತಮ್ಮ ತಂದೆ-ತಾಯಿಯವರಾದ ಬಿ. ಎಲ್. ಎನ್. ರೈ ಮತ್ತು ಲಲಿತಾ ರೈಯವರ ಸವಿ ನೆನಪಿನಲ್ಲಿ, 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಲಲಿತಾ ನಿವಾಸ’ವನ್ನು 02.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಠಿಣ ಪರಿಶ್ರಮಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ

ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!