Yakshagana Kalaranga

Yakshagana Kalaranga

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 32ನೇ ಮನೆ ಹಸ್ತಾಂತರ – 2022

ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಳ್ಳಿ ನಿಂಜೂರಿನ ಶ್ರೀಮತಿ ಕುಸುಮಾ ಹಾಗೂ ಶ್ರೀ ಗೋಪಾಲ ಆಚಾರ್ಯ ಇವರ ಪುತ್ರಿ ದೀಕ್ಷಾ (ದ್ವಿತೀಯ ಪಿ.ಯು.ಸಿ) ಇವಳಿಗೆ ಉಡುಪಿಯ ಅರುಣ್ ಕುಮಾರ್ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಶ್ರೀದೇವಿ ನಿಲಯ’ವನ್ನು ಶ್ರೀಮತಿ ಶ್ರೀದೇವಿ ಅರುಣ್ ಕುಮಾರ್ ಮತ್ತು ಶ್ರೀ ಅರುಣ್ ಕುಮಾರ್ ಅವರು 07-07-2022 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ ಸಂತೋಷ ನೀಡಿದೆ. ಈ ಮನೆಯಲ್ಲಿ ಎಲ್ಲರೂ ಸುಖ ಸಂತೋಷದಿಂದ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 32ನೇ ಮನೆ ಹಸ್ತಾಂತರ – 2022 Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 31ನೇ ಮನೆ ಹಸ್ತಾಂತರ – 2022

ಯಕ್ಷಗಾನ ಕಲಾರಂಗ ನಿರ್ಮಿಸಿದ 31ನೇ ಮನೆಯ ಉದ್ಘಾಟನಾ ಸಮಾರಂಭ 19-06-2022ರಂದು ಹಿರಿಯಡ್ಕ ಸಮೀಪದ ಕೊಂಡಾಡಿಯಲ್ಲಿ ಜರಗಿತು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರಾದ ರಕ್ಷಿತಾ ಪೂಜಾರಿ ಹಾಗೂ ಧನ್ಯ ಪೂಜಾರಿ ಇವರಿಗೆ ಪೇಜಾವರ ಮಠ ಮತ್ತು ಗುರುರಾಜ ಅಮೀನ್‍ರ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಮನೆ ‘ಶ್ರೀಗುರುಕೃಪಾ’ವನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಸ್ವಾಮೀಜಿ ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಾಮಾಜಿಕ ಕಾಳಜಿಯ ಕಾರ್ಯಕ್ರಮವನ್ನು ಮೆಚ್ಚಿಕೊಂಡು ಪ್ರಜಾರಾಜ್ಯದಲ್ಲಿ ರಾಮರಾಜ್ಯ ನಿರ್ಮಾಣವಾಗಲು ಆರ್ಥಿಕವಾಗಿ ಸಬಲರಾದ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 31ನೇ ಮನೆ ಹಸ್ತಾಂತರ – 2022 Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 30ನೇ ಮನೆ ಹಸ್ತಾಂತರ – 2022

ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಾದೂರಿನ ಮಲ್ಲಿಕಾ ಶೆಟ್ಟಿ (ದ್ವಿತೀಯ ಪಿ.ಯು.ಸಿ) ಹಾಗೂ ನರ್ಸಿಂಗ್ ವಿದ್ಯಾರ್ಥಿನಿ ರಕ್ಷಿತಾ ಶೆಟ್ಟಿ ಇವರಿಗೆ ಮಂಗಳೂರಿನ ಉದ್ಯಮಿ ಶ್ರೀ ಪಿ. ಗೋಕುಲನಾಥ ಪ್ರಭುರವರು ತಮ್ಮ ಮಾತೃಶ್ರೀ ಶ್ರೀಮತಿ ಪದ್ಮಾವತಿ ವೆಂಕಟ್ರಾಯ ಪ್ರಭು ಅವರ ಜನ್ಮಶತಾಬ್ದದ ಶುಭಾವಸರದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಪದ್ಮಾವತಿ’ಯನ್ನು ಶ್ರೀಮತಿ ನಿವೇದಿತಾ ಜಿ. ಪ್ರಭು ಮತ್ತು ಶ್ರೀ ಪಿ. ಗೋಕುಲನಾಥ ಪ್ರಭು ಅವರು 16-06-2022 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 30ನೇ ಮನೆ ಹಸ್ತಾಂತರ – 2022 Read More »

ಯಕ್ಷಗಾನ ಕಲಾರಂಗ ಉಡುಪಿಯ ವಿದಯಾಪೋಷಕ್ ನ 29ನೇ ಮನೆ ಹಸ್ತಾಂತರ – 2022

ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾದ ಬಾರ್ಕೂರಿನ ಕೋಟೆಕೆರೆಯ ಶರತ್ ಕುಮಾರ್ (ಸಿ.ಎ ವಿದ್ಯಾರ್ಥಿ) ಮತ್ತು ಜ್ಞಾನೇಶ್ ಕುಮಾರ್ (ಅಂತಿಮ ಇಂಜೀನಿಯರಿಂಗ್) ಇವರಿಗೆ ಉಡುಪಿಯಲ್ಲಿ ಲೆಕ್ಕ ಪರಿಶೋಧಕರಾಗಿರುವ ಸಿಎ ಗಣೇಶ್ ಕಾಂಚನ್‍ರ ಪ್ರಾಯೋಜಕತ್ವದಲ್ಲಿ ನೂತನವಾಗಿ ನಿರ್ಮಿಸಿದ ಮನೆಯನ್ನು ಜೂನ್ 11, 2022ರಂದು ಶ್ರೀ ಗಣೇಶ್ ಕಾಂಚನ್ ಮತ್ತು ಶ್ರೀಮತಿ ಪ್ರಫುಲ್ಲಾ ಜಿ. ಕಾಂಚನ್ ದಂಪತಿಗಳು ಜ್ಯೋತಿಬೆಳಗಿಸಿ ಉದ್ಘಾಟಿಸಿದರು. ಕೃತಜ್ಞತಾಭಾವ ಬದುಕಿನಲ್ಲಿ ರೂಢಿಸಿಕೊಳ್ಳಲೇಬೇಕಾದ ಮಹತ್ವದ ಗುಣ. ಕಷ್ಟದಲ್ಲಿದ್ದಾಗ ಬೇರೆಯವರು ಸಹಾಯಮಾಡಿದ್ದನ್ನು ಮರೆಯದೆ ನಾವು ಒಳ್ಳೆಯ ಸ್ಥಿತಿಗೆ ಬಂದಾಗ ಸಮಾಜದಲ್ಲಿ ಇನ್ನೊಬ್ಬರಿಗೆ ಸಹಾಯ …

ಯಕ್ಷಗಾನ ಕಲಾರಂಗ ಉಡುಪಿಯ ವಿದಯಾಪೋಷಕ್ ನ 29ನೇ ಮನೆ ಹಸ್ತಾಂತರ – 2022 Read More »

ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ

ಯಕ್ಷಗಾನ ಕಲಾರಂಗ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಸಿದ ಈ ವರ್ಷದ ‘ಉತ್ತರ ರಾಮಾಯಣ’ದ ಶೀರ್ಷಿಕೆಯಲ್ಲಿ ಜರಗಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 29-05-2022 ರಂದು ಸಂಪನ್ನಗೊಂಡಿತು. ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶ್ರೀ ಕೆ. ಎಲ್. ಕುಂಡಂತಾಯ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು. ಎಸ್. ಎಂ. ಹೆಗಡೆ ಮುಡಾರೆಯವರಿಗೆ ಮರಣೋತ್ತರವಾಗಿ ನೀಡಿದ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ …

ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ Read More »

ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022

ಯಕ್ಷಗಾನ ಕಲಾರಂಗ ಕಳೆದ 24 ವರ್ಷಗಳಿಂದ ಆಯೋಜಿಸುತ್ತಾ ಬಂದ ತಾಳಮದ್ದಲೆ ಸಪ್ತಾಹ ‘ಉತ್ತರ ರಾಮಾಯಣ’ವು ದಿನಾಂಕ 23-05-2022 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ತಾಳಮದ್ದಲೆ ನಮ್ಮ ಪುರಾಣಲೋಕವನ್ನು ಅನಾವರಣಗೊಳಿಸುವ ವಿಶಿಷ್ಟ ಕಲಾಪ್ರಕಾರ. ಅರ್ಥಧಾರಿಗಳು ಮೂಲ ಕೃತಿಗೆ ಚ್ಯುತಿ ಬಾರದಂತೆ ವಿಷಯ ಪ್ರತಿಪಾದಿಸಿ ಜನಮಾನಸಕ್ಕೆ ನಮ್ಮ ಪುರಾಣ ಸಂಪತ್ತನ್ನು ತಲುಪಿಸಬೇಕೆಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಜ್ಯೋತಿಷ್ಯ ವಿದ್ವಾನ್ ಕೆ. …

ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022 Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 27 ಮತ್ತು 28ನೇ ಮನೆ ಹಸ್ತಾಂತರ – 2022

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಒಟ್ಟು ಐದು ಮನೆಗಳನ್ನು ನಿರ್ಮಿಸಿಕೊಡುತ್ತಿರುವ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಪ್ರಾಯೋಜಕತ್ವದ ಎರಡು ಮನೆಗಳ ಉದ್ಘಾಟನೆಯು 23-05-2022 ರಂದು ನೆರವೇರಿತು.ದ್ವಿತೀಯ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ ಗಂಗೊಳ್ಳಿಯ ಸ್ವಾತಿ ಖಾರ್ವಿ ಹಾಗೂ ದ್ವಿತೀಯ ಬಿ.ಕಾಂ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈತ್ತಿರುವ ವಡ್ಡರ್ಸೆಯ ಚೈತ್ರಾ ಮತ್ತು ರಕ್ಷಿತಾ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾಗಿದ್ದು, ಇವರಿಗೆ ಸಂಸ್ಥೆ ನಿರ್ಮಿಸಿ ಕೊಟ್ಟ ಮನೆಗಳಾಗಿವೆ. ಗಂಗೊಳ್ಳಿಯ ಮನೆಯ ಉದ್ಘಾಟನೆಯನ್ನು ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ …

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 27 ಮತ್ತು 28ನೇ ಮನೆ ಹಸ್ತಾಂತರ – 2022 Read More »

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಕೊಡಮಾಡುವ ‘ಯಕ್ಷಗಾನ ಸಾಧಕ’ ಪ್ರಶಸ್ತಿ ಪ್ರದಾನ – 2022

22-05-2022 ರಂದು ಹಿರಿಯ ಯಕ್ಷಗಾನ ಕಲಾವಿದ, ಯಕ್ಷಗುರು, ಲೇಖಕ ತಾರಾನಾಥ ವೊರ್ಕಾಡಿಯವರಿಗೆ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಕೊಡಮಾಡುವ ‘ಯಕ್ಷಗಾನ ಸಾಧಕ’ ಪ್ರಶಸ್ತಿ ಪ್ರದಾನ ಸಮಾರಂಭ ಅರ್ಥಪೂರ್ಣವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಂಡಿತು. ಉದ್ಘಾಟನೆ, ‘ಗೋವಿಂದ ನಂದ ಮುಕುಂದ ಪಾಹಿ ದೇವಾ’ ಪ್ರಾತ್ಯಕ್ಷಿಕೆ, ‘ಲೇಖಕ-ಕವಿ ತಾರಾನಾಥ’ ವಿಚಾರಗೋಷ್ಠಿ, ‘ಕಲಾವಿದ-ನೃತ್ಯಗುರು ತಾರಾನಾಥ’ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಬಳಿಕ ಪ್ರಶಸ್ತಿ ಪ್ರದಾನ ಸರ್ವರಿಗೂ ನೆನಪಿನಲ್ಲಿಟ್ಟುಕೊಳ್ಳುವಂತೆ ಸೊಗಸಾಗಿ ಮೂಡಿಬಂತು.

ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ

ಯಕ್ಷಗಾನ ಕಲಾರಂಗ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಸಿದ ಈ ವರ್ಷದ ‘ಉತ್ತರ ರಾಮಾಯಣ’ದ ಶೀರ್ಷಿಕೆಯಲ್ಲಿ ಜರಗಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 29-05-2022 ರಂದು ಸಂಪನ್ನಗೊಂಡಿತು. ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶ್ರೀ ಕೆ. ಎಲ್. ಕುಂಡಂತಾಯ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು. ಎಸ್. ಎಂ. ಹೆಗಡೆ ಮುಡಾರೆಯವರಿಗೆ ಮರಣೋತ್ತರವಾಗಿ ನೀಡಿದ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ …

ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ Read More »

We're currently hard at work gathering information and crafting content to bring you the best experience. Stay tuned for exciting updates!