ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ.
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿಯರಾದ ಪ್ರಥಮ ಬಿ. ಕಾಂ. ನ ಸಂಗೀತಾ ಹಾಗೂ ದ್ವಿತೀಯ ಪಿ.ಯು.ಸಿಯ ಸುಪ್ರೀತಾ ಇವರಿಗೆ ಬ್ರಹ್ಮಾವರ ತಾಲೂಕಿನ ಜಾನುವಾರುಕಟ್ಟೆಯಲ್ಲಿ ಶಾರದಾ ಮತ್ತು ಪಾಂಡೇಶ್ವರ ರಾಮರಾಯರ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ರೂ.7ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಶಾರದಾರಾಮ 26.10.2024ರಂದು ಶಾರದಾ ಕಾರಂತರ 50ನೇ ಪುಣ್ಯತಿಥಿಯ ದಿನ ಉದ್ಘಾಟನೆಗೊಂಡಿತು. ಶಾರದಾ ರಾಮ ಕಾರಂತರ ಮಕ್ಕಳಾದ ಪಿ. ಗೋವಿಂದರಾಜ ಕಾರಂತ, ಪಿ. ವಾಸುದೇವ ಕಾರಂತ, ಜಯಲಕ್ಷ್ಮೀ ಉಪಾಧ್ಯ, ಸೀತಾಲಕ್ಷ್ಮೀ ಜಿ.ರಾವ್ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. […]
ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ. Read More »