Yakshagana Kalaranga

Yakshagana Kalaranga

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 65ನೇ ಮನೆ ಹಸ್ತಾಂತರ

ವಿದ್ಯಾಪೋಷಕ್ ನ 65 ನೇ ಮನೆ ಉದ್ಘಾಟನೆ. ಯಕ್ಷಗಾನ ಕಲಾರಂಗ ಬೀಜಾಡಿಯಲ್ಲಿ ವಿದ್ಯಾಪೋಷಕ್ ದ್ವಿತೀಯ. ಪಿ.ಯು. ವಿದ್ಯಾರ್ಥಿನಿ ಮಾನ್ಯಳಿಗೆ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 23.02.2025 ರಂದು ಜರಗಿತು. ಸಾಲಿಗ್ರಾಮದ ಮಂಟಪ ರಾಮ ಉಪಾಧ್ಯ- ಫಣಿಯಮ್ಮ ದಂಪತಿಗಳ ನೆನಪಿನಲ್ಲಿ ಅವರ ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಪ್ರಾಯೋಜಿಸಿದ ‘ಫಣಿರಾಮ’ ಮನೆಯನ್ನು ಮಂಟಪ ಶ್ರೀಮತಿ ಯಶೋಧಾ ಉಪಾಧ್ಯರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ರಾಮ ಉಪಾಧ್ಯರ ಪುತ್ರಿ ಶ್ರೀಮತಿ ಸತ್ಯಭಾಮಾ ಮಯ್ಯರು ಉಪಸ್ಥತರಿದ್ದರು. ಡಾ. ರತ್ನಾಕರ ಉಪಾಧ್ಯರು ತಮ್ಮ ಅಜ್ಜ ರಾಮ ಉಪಾಧ್ಯರ ಶಿಸ್ತು, […]

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 65ನೇ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 64ನೇ ಮನೆಯ ಉದ್ಘಾಟನೆ.

05-02-2025 ರಂದು ಕಾರ್ಕಳ ತಾಲೂಕಿನ ಶಿವತಿಕೆರೆಯ ಹಿರಿಯಂಗಡಿಯಲ್ಲಿ ವಿದ್ಯಾಪೋಷಕ್ ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂದರ್ಶಿನಿ ಇವಳಿಗೆ ಉಡುಪಿಯ ನಿವೃತ್ತ ಬ್ಯಾಂಕ್ ಉದ್ಯೋಗಿಗಳಾದ ಸದಾನಂದ ಪಿ.ಶೆಣೈ – ಸಹನಾ ಎಸ್. ಶೆಣೈ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ 64ನೇ ಮನೆ ” ಸಹನಾ ಸದನ”ವನ್ನು ಸದಾನಂದ ಪಿ .ಶೆಣೈ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಕಲಾರಂಗ ದಾನಿಗಳು ನೀಡಿದ ಒಂದು ರೂಪಾಯಿಯೂ ಪೋಲಾಗದಂತೆ ಫಲಾನುಭವಿಗಳಿಗೆ ತಲಪಿಸುತ್ತದೆ. ಈ ಸಂಸ್ಥೆಗೆ ದಾನ ನೀಡಿ ಆನಂದ ಅನುಭವಿಸಿದ್ದೇನೆ ಎಂದರು. ಅಧ್ಯಕ್ಷ ಸ್ಥಾನವಹಿಸಿದ

ಯಕ್ಷಗಾನ ಕಲಾರಂಗದ 64ನೇ ಮನೆಯ ಉದ್ಘಾಟನೆ. Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ.30-01-2025ರಂದು ಬೈಂದೂರು ತಾಲೂಕಿನ ಅರೆಶಿರೂರಿನ ವಿದ್ಯಾ ಪೋಷಕ್ ವಿದ್ಯಾರ್ಥಿಗಳಾದ, ದ್ವಿತೀಯ ಪಿಯುಸಿ ಓದುತ್ತಿರುವ ರಶ್ಮಿತಾ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿ ರಕ್ಷತ್ ಇವರಿಗೆ ಉಡುಪಿ ಗೋಪಾಲಪುರದ ಉದ್ಯಮಿಗಳಾದ ಅರವಿಂದ ಆರ್. ನಾಯಕ್ ಇವರು ತಮ್ಮ ಮಾವ ರೈತಬಂಧು ಶಿವಪುರ ಸುಬ್ಬಣ್ಣ ನಾಯಕ್ ಸ್ಮರಣಾರ್ಥ ಮತ್ತು ಅತ್ತೆ ಇಂದಿರಾ ಎಸ್. ನಾಯಕ್ ಇವರ ಗೌರವಾರ್ಥ ನಿರ್ಮಿಸಿದ 63ನೇ ಮನೆ “ಇಂದಿರಾ ನಿಲಯ”ವನ್ನು ಶ್ರೀಮತಿ ಇಂದಿರಾ ಎಸ್. ನಾಯಕ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 63ನೇ ಮನೆಯ ಉದ್ಘಾಟನೆ Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 62ನೇ ಮನೆ ಹಸ್ತಾಂತರ

ಸುವರ್ಣ ವರ್ಷವನ್ನು ಆಚರಿಸುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗವು, ಪ್ರಥಮ ಪಿಯುಸಿ ಯಲ್ಲಿ ಓದುತ್ತಿರುವ, ಕೊಡವೂರು ಬಾಚನಕೆರೆಯ ವಿದ್ಯಾಪೋಷಕ್ ವಿದ್ಯಾರ್ಥಿ, ತನುಷ್ ಗೆ, ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ 62ನೇ ಮನೆ ‘ಗೌರೀತನಯ’ ರಂದು 26-1-2025 ಉದ್ಘಾಟನೆಗೊಂಡಿತು.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ, ಡಾ ಪಿ.ವಿ.ಭಂಡಾರಿ ಈ ಸಂದರ್ಭದಲ್ಲಿ ಮಾತನಾಡಿ, ಯಕ್ಷಗಾನ ಕಲಾರಂಗವು ಕಲಾವಿದರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನನ್ಯ ಸೇವೆಯನ್ನು ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳ ಆಪ್ತ ಸಮಾಲೋಚನೆ ಬಹಳ ಮುಖ್ಯ. ಈ ದಿಸೆಯಲ್ಲಿ ನಮ್ಮ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗ – 62ನೇ ಮನೆ ಹಸ್ತಾಂತರ Read More »

ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.

ಹಕ್ಲಾಡಿ ಶ್ರೀ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಡಿಸೆಂಬರ್ 26 ಮತ್ತು 27 ರಂದು ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು 26.12.2024 ರಂದು ಹಿರಿಯ ಪ್ರಸಂಗಕರ್ತರಾದ ಶ್ರೀ ಕಂದಾವರ ರಘುರಾಮ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ, ಹಕ್ಲಾಡಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಗೀತ ಸಂತೋಷ ಮೊಗವೀರ, ಯಕ್ಷಗಾನ ಕಲಾರಂಗದ ಅಧ್ಯಕ್ಷ

ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ. Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 61 ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಕಾರ್ಕಳದ ಪರಪ್ಪಾಡಿಯಲ್ಲಿ ವಿದ್ಯಾಪೋಷಕ್ ನ ಪ್ರಥಮ ಪಿ.ಯು. ವಿದ್ಯಾರ್ಥಿ ಪ್ರಶಾಂತನಿಗೆ ನಿರ್ಮಿಸಿದ ಮನೆಯ ಪ್ರಾಯೋಜಕತ್ವ ವಹಿಸಿ, ತನ್ನ ಪತ್ನಿಯ ನೆನಪಿಗೆ ಸಮರ್ಪಿಸಿದ, ಸುರತ್ಕಲ್ ನ ಕುಮಾರಚಂದ್ರ ರಾವ್ ‘ಜಯಲಕ್ಷ್ಮಿ’ ಮನೆಯನ್ನು 04.01.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪರೋಪಕಾರಿಯಾಗಿ ಬಾಳಿದ ನನ್ನ ಮಡದಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಳು. ಈ ಮನೆ ನಿರ್ಮಿಸುವ ಮೂಲಕ ಆಕೆಯ ಸಂಕಲ್ಪ ನೆರವೇರಿಸಿದಂತಾಯಿತು ಎಂದು ಈ ಸಂದರ್ಭದಲ್ಲಿ ನುಡಿದರು. ಅಧ್ಯಕ್ಷತೆ ವಹಿಸಿದ್ದ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಮಾತನಾಡಿ,

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 61 ನೇ ಮನೆ ಉದ್ಘಾಟನೆ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಬೈಂದೂರು ಉದ್ಘಾಟನೆ ಮತ್ತು ಸಮಾರೋಪ

30-12-2024 ರಂದು ಬೈಂದೂರಿನಲ್ಲಿ ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆಗೊಂಡಿತು. ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಸಂಜೀವ ಗಾಣಿಗರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಉದ್ಯಮಿಗಳಾದ ದಯಾನಂದ ಬಾಸ್ ಬೈಲ್, ದೀನಪಾಲ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ, ಸುರೇಶ ಬಚವಾಡಿ,ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ, ಹೆಚ್. ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ ಭಾಗವಹಿಸಿದ್ದರು. ಬೈಂದೂರಿನ ಯಕ್ಷಗುರುಕುಲದ ಸಂಚಾಲಕರಾದ ಸುನಿಲ್ ಹೊಲಾಡು ಸ್ವಾಗತಿಸಿದ ಕಾರ್ಯಕ್ರಮವನ್ನು

ಕಿಶೋರ ಯಕ್ಷಗಾನ ಸಂಭ್ರಮ – 2024 ಬೈಂದೂರು ಉದ್ಘಾಟನೆ ಮತ್ತು ಸಮಾರೋಪ Read More »

ಯಕ್ಷನಿಧಿ ಡೈರಿ-2025 ಬಿಡುಗಡೆ.

ಯಕ್ಷಗಾನ ಕಲಾರಂಗವು ಪ್ರತೀವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, 2025ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು 30-12-2024 ರಂದು ಬಿಡುಗಡೆಗೊಳಿಸಿದರು. ಧರ್ಮಸ್ಥಳ ಮೇಳದ ಕಲಾವಿದ ಧರ್ಮಸ್ಥಳ ಚಂದ್ರಶೇಖರ ಮತ್ತು ಕಮಲಶಿಲೆ ಮೇಳದ ಕಲಾವಿದ ನಾರಾಯಣ ಉಳ್ಳೂರರಿಗೆ ಸಾಂಕೇತಿಕವಾಗಿ ವಿತರಿಸಿದರು.ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್‍ಗೆ ಪರ್ಯಾಯ ಮಠದ ವತಿಯಿಂದ 10 ಲಕ್ಷ ರೂಪಾಯಿಯ ಕೊಡುಗೆಯನ್ನು

ಯಕ್ಷನಿಧಿ ಡೈರಿ-2025 ಬಿಡುಗಡೆ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ

19-12-2024 ರಂದು ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವಠಾರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮವನ್ನು ಉದ್ಯಮಿಗಳಾದ ಎಚ್. ಶಂಕರ್ ಹೆಗ್ಡೆ, ಜನ್ನಾಡಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಇಂಜಿನಿಯರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿ, ಹಾಲಾಡಿ ವಲಯ ಭಜನಾ ಮಂಡಳಿಗಳ ಅಧ್ಯಕ್ಷರಾದ ಶ್ರೀಮತಿ ಸುಶೀಲಾ ಬಿ. ಶೆಟ್ಟಿ, ಪಂಚಾಯತ್ ಪಿ.ಡಿ.ಒ. ಶ್ರೀಮತಿ ರೇಖಾ ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ Read More »

We're currently hard at work gathering information and crafting content to bring you the best experience. Stay tuned for exciting updates!