Yakshagana Kalaranga

Yakshagana Kalaranga

ವಿದ್ಯಾಪೋಷಕ್ 53 ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‍ನ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ, ಕುಂದಾಪುರ ತಾಲೂಕಿನ,ಹೆಮ್ಮಾಡಿಯ ಕಟ್ಟುವಿನಲ್ಲಿ, ಸಿಂಚನಾಳಿಗೆ,ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಿಸಿದ ನೂತನ ಮನೆ ‘ಸರಸ್ವತೀ ನಿಲಯ’ 30.05.2024 ರಂದು ಉದ್ಘಾಟನೆಗೊಂಡಿತು. ಕೃಷ್ಣಪ್ರಸಾದ್ ಅಡ್ಯಂತಾಯರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ ಗಂಟಿಹೊಳೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಪರ ಕೆಲಸಗಳು ಅಗಾಧವಾದುದು. ಅವರು ವಿದ್ಯಾಪೋಷಕ್ ಗೆ ಹಾಗೂ ಮನೆ ನಿರ್ಮಾಣಕ್ಕೆ ಆಯ್ಕೆ ಮಾಡುವ ವಿಧಾನವೇ ಅತ್ಯಂತ ವೈಜ್ಞಾನಿಕ. ಕನಿಷ್ಟ ವೆಚ್ಚದಲ್ಲಿ ವಾಸಯೋಗ್ಯ […]

ವಿದ್ಯಾಪೋಷಕ್ 53 ನೆಯ ಮನೆ ಹಸ್ತಾಂತರ Read More »

ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರಧಾನ ಸಮಾರಂಭ.

ಮಹಾನ್ ಕಲಾಸಾಧಕರ ಒಡನಾಟ ನನ್ನ ಕಲಾ ಬದುಕನ್ನು ರೂಪಿಸಿತು. ಮಾರ್ಪಳ್ಳಿ. ನನ್ನ ಮನೆಯ ಪರಿಸ್ಥಿತಿ ಮತ್ತು ಕಲಾಸಕ್ತಿ ನಾನು ಸದಾ ಕಲೆಯಲ್ಲಿ ಕ್ರಿಯಾಶೀಲನಾಗಲು ಕಾರಣವಾಯಿತು. ನಾನು ಒಂದು ಕಡೆ ನೆಲೆ ನಿಲ್ಲದೆ ಕಲೆಗಾಗಿ ಅಲೆದಾಡಿದೆ. ಇದರಿಂದ ಹಲವು ಶ್ರೇಷ್ಠ ಕಲಾ ಸಾಧಕರ ಒಡನಾಟದ ಭಾಗ್ಯ ಲಭಿಸಿತು. ಹೊಸತನ್ನು ಅನ್ವೇಷಿಸುವ ನನ್ನ ಸ್ವಭಾವಕ್ಕೆ ಅವರೆಲ್ಲ ತಮ್ಮ ಅನುಭವ ಧಾರೆ ಎರೆದರು. ಕಲಾ ಕ್ಷೇತ್ರದ ಅನ್ಯಾನ್ಯ ಪ್ರಕಾರಗಳಲ್ಲಿ ಪ್ರಯೋಗ ನಡೆಸುತ್ತಾ ಸಾಗಿದೆ ಎಂದು ಗುರುರಾಜ ಮಾರ್ಪಳ್ಳಿ ಹೇಳಿದರು. ಅವರು ಉಡುಪಿಯ

ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರಧಾನ ಸಮಾರಂಭ. Read More »

ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾ ಪೋಷಕ್ ನ 220 ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಸಮಾವೇಶ ಇಂದು ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್(ಐ.ವೈ.ಸಿ.)ನಲ್ಲಿ ಜರುಗಿತು. ಹುಬ್ಬಳ್ಳಿಯ ಮೈಲೈಫ್ ಸಂಸ್ಥಾಪಕ ಪ್ರವೀಣ್ ವಿ. ಗುಡಿ ಅವರು ಪ್ರೇರಕರಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿ. ಇ. ಟಿ ಬರೆದ ಇಂಜಿನಿಯರಿಂಗ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಡಾ.ಶ್ರುತಕೀರ್ತಿರಾಜ್ ವಿಸ್ತೃತವಾದ ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ವಿಭಾಗದಲ್ಲಿ ಅಧ್ಯಯನ ಮಾಡಲಿರುವ ವಾಣಿಜ್ಯದ ವಿದ್ಯಾರ್ಥಿಗಳಿಗೆ

ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. Read More »

ಸನಿವಾಸ ಶಿಬಿರದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿವೇತನ ವಿತರಣೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾದ,ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಶೆಣೈ ಪಿ. ತನ್ನ 70ರ ವರ್ಷಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿಕೊಂಡರು. ತನ್ನ ಪತ್ನಿ ಸಹನಾ ಎಸ್. ಶೆಣೈ ಅವರೊಂದಿಗೆ ಮೇ 12, 2024ರಂದು ವಿದ್ಯಾಪೋಷಕ್‍ನ 70 ವಿದ್ಯಾರ್ಥಿಗಳಿಗೆ ತಲಾ 5000/- ದಂತೆ ಒಟ್ಟು 3,50,000 ರೂ.ವಿದ್ಯಾರ್ಥಿವೇತನವನ್ನು ನೀಡಿ ಔದಾರ್ಯ ಮೆರೆದರು.ಅವರ ಈ ಉದಾರ ಕೊಡುಗೆಗೆ ಸಂಸ್ಥೆಯ ಹೃದಯ ಪೂರ್ವಕ ಕೃತಜ್ಞತೆಗಳು.

ಸನಿವಾಸ ಶಿಬಿರದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿವೇತನ ವಿತರಣೆ. Read More »

ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಸಂಸ್ಕೃತಿ ಸಂವರ್ಧನೆ ನಮ್ಮೆಲ್ಲರ ಕರ್ತವ್ಯ – ಹಾದಿಗಲ್ಲು ಲಕ್ಷ್ಮೀನಾರಾಯಣ ಶಿಕ್ಷಣ ಸಂಸ್ಕಾರವನ್ನು ಕೊಡಬೇಕು. ಕೇವಲ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣವಾಗಬಾರದು, ಅದು ನಮ್ಮ ವ್ಯಕ್ತಿತ್ವವನ್ನು ರೂಪಿಸಿ ತನ್ಮೂಲಕ ರಾಷ್ಟ್ರದ ಒಳಿತಿಗೆ ಕಾರಣವಾದರೆ ಅರ್ಥಪೂರ್ಣವಾಗುತ್ತದೆ ಎಂದು ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇವಳದ ಧರ್ಮದರ್ಶಿ ಶ್ರೀ ಹಾದಿಗಲ್ಲು ಲಕ್ಷ್ಮೀನಾರಾಯಣ ಹೇಳಿದರು. ಅವರು ಮೇ 12, 2024ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ

ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ Read More »

ವಿದ್ಯಾಪೋಷಕ್ ಶಿಬಿರಕ್ಕೆ ಜಿಲ್ಲಾಧಿಕಾರಿ ಭೇಟಿ

ಯಕ್ಷಗಾನ ಕಲಾರಂಗದ ನೂತನ ಕಟ್ಟಡದಲ್ಲಿ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಐದು ದಿನಗಳ ಸನಿವಾಸ ಶಿಬಿರ ನಡೆಯುತ್ತಿದೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮತ್ತು ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್.ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಅನಂತರ ಐವೈಸಿ ಸಭಾಂಗಣದಲ್ಲಿ ಶಿಬಿರಾರ್ಥಿಗಳನ್ನುದ್ದೇಶಿಸಿ ಅಭಿಪ್ರೇರಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ಪರಿಚಯಿಸಿದರು. ಈರ್ವರನ್ನೂ ಶಾಲು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.ಪೂರ್ವಾಹ್ನ ಕೃಷಿ ತಜ್ಞರಾದ ಡಾ.ವೈಕುಂಠ ಹೇರ್ಳೆ ಹಾಗೂ ಸಾಹಿತಿ,ಸುಹಾಸಂ ಸ್ಥಾಪಕರಾದ ಕು.ಗೋ.ಆಗಮಿಸಿ

ವಿದ್ಯಾಪೋಷಕ್ ಶಿಬಿರಕ್ಕೆ ಜಿಲ್ಲಾಧಿಕಾರಿ ಭೇಟಿ Read More »

ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ.

ಯಕ್ಷಗಾನ ಕಲಾರಂಗದ ಪ್ರಥಮ ಪಿ.ಯು.ಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಮೇ 8, 2024ರಂದು ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನಲ್ಲಿ ಆರಂಭಗೊಂಡಿತು. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಜ್ಯೋತಿ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಕಳೆದ 12 ವರ್ಷಗಳಿಂದ ಅಂಬಲಪಾಡಿ ದೇವಳದಲ್ಲಿ ನಡೆಸುತ್ತಾ ಬಂದ ಅತ್ಯಂತ ಉಪಯುಕ್ತವಾದ ಶೈಕ್ಷಣಿಕ ಶಿಬಿರವು ಈ ಬಾರಿ ಸಂಸ್ಥೆಯ ಸ್ವಂತ ಕಟ್ಟಡದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸಾರ್ವಜನಿಕರ

ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಇನ್ಫೋಸಿಸ್ ಫೌಂಡೇಶನ್ ಉಡುಪಿಯ ಯಕ್ಷಗಾನ ಕಲಾರಂಗದ ಕಾರ್ಯಚಟುವಟಿಕೆಯನ್ನು ಗಮನಿಸಿ ಸಂಸ್ಥೆಗೆ ನಿರ್ಮಿಸಿ ಕೊಟ್ಟ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನ ಉದ್ಘಾಟನಾ ಸಮಾರಂಭ ಎಪ್ರಿಲ್ 20 ರಿಂದ 23, 2024ರ ವರೆಗೆ ಜರಗಿತು. ಧಾರ್ಮಿಕ ಕಾರ್ಯಕ್ರಮಗಳನ್ನು ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಹಾಗು ವೇ. ಮೂ. ಸೀತಾರಾಮ ಭಟ್ ತಂಡ ನಡೆಸಿ ಕೊಟ್ಟಿತು. ಎಪ್ರಿಲ್ 20ರ ಸಂಜೆ 6.00 ಗಂಟೆಗೆ ಪಲಿಮಾರು ಮಠಾಧೀಶರುಗಳಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ಶ್ರೀ

ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ Read More »

We're currently hard at work gathering information and crafting content to bring you the best experience. Stay tuned for exciting updates!