Yakshagana Kalaranga

Yakshagana Kalaranga

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ 52ನೇ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‍ನ, ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ, ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ ನ ಮಾಲಕರಾದ ಪಿ. ಪುರುಷೋತ್ತಮ ಶೆಟ್ಟಿಯವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಭಾಗೀರಥೀ ನಿಲಯ’ 20.04.2024ರಂದು ಉದ್ಘಾಟನೆಗೊಂಡಿತು. ಪಿ. ಪುರುಷೋತ್ತಮ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಪುರುಷೋತ್ತಮ ಶೆಟ್ಟಿಯವರ ಪತ್ನಿ ಅಮೃತಾ ಪಿ. ಶೆಟ್ಟಿ, ಪುತ್ರರಾದ ಉಜ್ವಲ್, ಅಜಯ್ ಭಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ಸಂಸ್ಥೆಯ ದಾನಿ ಯು. ವಿಶ್ವನಾಥ ಶೆಣೈ, […]

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ 52ನೇ ಮನೆ ಹಸ್ತಾಂತರ Read More »

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

ಯಕ್ಷಗಾನ ಕಲಾರಂಗಕ್ಕೆ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿ ಕೊಡುತ್ತಿರುವ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್’ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎಪ್ರಿಲ್ 21ರಂದು ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಸಂಸ್ಥೆ ಇನ್ನಷ್ಟು ಸುದೃಢವಾಗಿ ಕಲೆ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬೆಳೆಯಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ. Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ, ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಬ್ರಹ್ಮಾವರ ತಾಲೂಕಿನ ನಿಂಜೂರುಬೆಟ್ಟಿನ ಜಯಲಕ್ಷ್ಮೀ ಇವಳಿಗೆ ಪಿ. ಉಪೇಂದ್ರ ನಾಯಕ್ ಇವರ ಸ್ಮರಣಾರ್ಥ ಯು. ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ದಲ್ಲಿ ನಿರ್ಮಿಸಿದ ‘ಉಪೇಂದ್ರ ನಿಲಯ’ ಮನೆ 03.04.2024ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿ ಶುಭಕೋರಿದ ಯು. ಎಸ್.ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್‍ನ ವಿಶ್ವಸ್ಥರಾದ ಪಿ. ಸುರೇಶ್ ನಾಯಕ್ ತಮ್ಮ ಅಜ್ಜ ಉಪೇಂದ್ರ ನಾಯಕ್ ರ ಜನಪರ ಕಾಳಜಿಯನ್ನು ಸ್ಮರಿಸಿಕೊಂಡರು. ಶುಭಾಶಂಸನೆಗೈದ ಹಾದಿಗಲ್ಲು ಅಭಯಲಕ್ಷ್ಮೀ ನರಸಿಂಹ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.

ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಇಂದು (09.03.2024) ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ. Read More »

ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಧುಕರ ವೃತ್ತಿಯನ್ನು ರೂಢಿಸಿಕೊಳ್ಳಬೇಕು- ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಯಕ್ಷಗಾನ ಕಲಾರಂಗದಲ್ಲಿ 27 ವರ್ಷಗಳ ಕಾಲ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ 24-02-2024 ರಂದು ಪೇಜಾವರ ಮಠದ ಶ್ರೀರಾಮವಿಠಲ ಸಭಾಭವನದಲ್ಲಿ ಜರಗಿತು. ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ನಿವೃತ್ತ ಬ್ಯಾಂಕ್ ಅಧಿಕಾರಿ, ರಾಷ್ಟ್ರಪ್ರೇಮಿ, ಸಾವಯವ ಕೃಷಿಕ, ದೃಷ್ಟಿ ತೊಡಕನ್ನು ಮೀರಿನಿಂತ ಸಾಧಕ ಶ್ರೀ ಪಿ. ಪಾಂಡುರಂಗ ಶಾನುಭಾಗ್ ಇವರಿಗೆ ಪ್ರದಾನ ಮಾಡಿ, ಶಾನುಭಾಗರು

ಸೇವಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ – 2024 Read More »

ಯಕ್ಷಗಾನ ಕಲಾರಂಗದ 50ನೇ ಮನೆ ಉದ್ಘಾಟನೆ .

ಸಾಮಾಜಿಕ ಕೆಲಸ ಮಾಡುವವರಿಗೆ ಉಡುಪಿಯ ಯಕ್ಷಗಾನ ಕಲಾರಂಗ ಮಾದರಿ – ಸೋದೆ ಶ್ರೀ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ, ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಕಾರ್ಕಳ ನೂರಾಲ್‍ಬೆಟ್ಟುವಿನ ಚೈತ್ರಾ ಇವಳಿಗೆ ನಿವೃತ್ತ ಅಧ್ಯಾಪಕಾರದ ಯು. ಎಸ್. ರಾಜಗೋಪಾಲ್ ಆಚಾರ್ಯ ಮತ್ತು ಸುಶೀಲಾ ಆರ್. ಆಚಾರ್ಯ ಇವರು ತಮ್ಮ ವಿವಾಹದ ಸುವರ್ಣ ವರ್ಷಾಚರಣೆಯ ಸವಿನೆನಪಿನಲ್ಲಿ 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀನಿಲಯ’ವನ್ನು 14.02.2024ರಂದು ಉದ್ಘಾಟಿಸಿ ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು

ಯಕ್ಷಗಾನ ಕಲಾರಂಗದ 50ನೇ ಮನೆ ಉದ್ಘಾಟನೆ . Read More »

ಯಕ್ಷಗಾನ ಕಲಾರಂಗದ 49ನೇ ಮನೆ ಉದ್ಘಾಟನೆ .

ಯಕ್ಷಗಾನ ಕಲಾರಂಗವು ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ವಿದ್ಯಾಪೋಷಕ್ ವಿದ್ಯಾರ್ಥಿ ಹಾಲಾಡಿ ಬೆಳಾರಮಕ್ಕಿಯ ಸಾತ್ವಿಕ್ ಇವನಿಗೆ ಪಿ. ರಬೀಂದ್ರ್ರ ನಾಯಕ್ ಇವರ ಸ್ಮರಣಾರ್ಥ ಯು. ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ದಲ್ಲಿ ನಿರ್ಮಿಸಿದ ‘ರಬೀಂದ್ರ ನಿಲಯ’ ಮನೆಯನ್ನು, ಇಂದು (07.02.2024) ಉದ್ಘಾಟಿಸಲಾಯಿತು. ಜ್ಯೋತಿ ಬೆಳಗಿಸಿ ಶುಭಕೋರಿದ ಯು. ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ವಿಶ್ವಸ್ಥರಾದ ಪಿ. ಸುರೇಶ್ ನಾಯಕ್ ತಮ್ಮ ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ರಬೀಂದ್ರ ನಾಯಕ್‍ರ ಆಶಯದಂತೆ ದಾನ ನೀಡುತ್ತಾ

ಯಕ್ಷಗಾನ ಕಲಾರಂಗದ 49ನೇ ಮನೆ ಉದ್ಘಾಟನೆ . Read More »

ಒಂದೇ ದಿನ ವಿದ್ಯಾಪೋಷಕ್‍ನ ಎರಡು ಮನೆಗಳ ಹಸ್ತಾಂತರ .

ಉಡುಪಿ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಇಬ್ಬರು ಫಲಾನುಭವಿ ವಿದ್ಯಾರ್ಥಿಗಳಿಗೆ ತೆಂಕುತಿಟ್ಟಿನ ಖ್ಯಾತ ಸ್ತ್ರೀವೇಷಧಾರಿಯಾಗಿದ್ದ ಕಡಂದೇಲು ಪುರುಷೋತ್ತಮ ಭಟ್ ಇವರ ಮಗನಾದ ಬೆಂಗಳೂರಿನ ಕೆ. ಸದಾಶಿವ ಭಟ್ ಪ್ರಾಯೋಜಕತ್ವದ ಎರಡು ಮನೆಗಳ ಉದ್ಘಾಟನೆ 30.01.2024 ರಂದು ನೆರವೇರಿತು.ದ್ವಿತೀಯ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಗುಜ್ಜಾಡಿಯ ಅಂಕಿತಾ ಹಾಗೂ ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಕೊಡೇರಿಯ ಶಿವರಾಜ್ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾಗಿದ್ದು, ಇವರಿಗೆ ಸಂಸ್ಥೆ ನಿರ್ಮಿಸಿ ಕೊಟ್ಟ ಮನೆಗಳಾಗಿವೆ. ಮನೆಗಳ ಪ್ರಾಯೋಜಕರಾದ ಕೆ. ಸದಾಶಿವ ಭಟ್ ಅವರು ಎರಡೂ ಮನೆಗಳ ಉದ್ಘಾಟನೆಯನ್ನು ಮಾಡಿ

ಒಂದೇ ದಿನ ವಿದ್ಯಾಪೋಷಕ್‍ನ ಎರಡು ಮನೆಗಳ ಹಸ್ತಾಂತರ . Read More »

ಯಕ್ಷಗಾನ ಕಲಾರಂಗದ 46ನೇ ಮನೆ ‘ಶ್ರೀರಾಮಚಂದ್ರ ನಿಲಯ’ ಉದ್ಘಾಟನೆ.

ಸಂಸ್ಥೆ 2012ರಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳು ಮತ್ತು ಯಕ್ಷಗಾನ ಕಲಾವಿದರಿಗೆ ಮನೆ ನಿರ್ಮಿಸಿ ಕೊಡುತ್ತಾ ಬಂದಿದ್ದು, ಕಾರ್ಕಳದ ಕೆರ್ವಾಶೆಯಲ್ಲಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ಇವಳಿಗೆ ಉಡುಪಿಯ ರಾಮಚಂದ್ರ ವಿ. ನಾಯಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ‘ಶ್ರೀರಾಮಚಂದ್ರ ನಿಲಯ’ ಮನೆಯನ್ನು, 22.01.2024 ರಂದು ಉದ್ಘಾಟಿಸಲಾಯಿತು. ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಪವಿತ್ರ ದಿನದಂದು ಸಂಸ್ಥೆ ನಿರ್ಮಿಸಿದ ಈ ಮನೆಯನ್ನು ಕಾರ್ಕಳದ ಶಾಸಕ ಸುನಿಲ್ ಕುಮಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಈ ಪರ್ವ ಕಾಲದಲ್ಲಿ ಮನೆ ಹಸ್ತಾಂತರಿಸಿದ ಮನೆಯ ಪ್ರಾಯೋಜಕರು, ಯಕ್ಷಗಾನ

ಯಕ್ಷಗಾನ ಕಲಾರಂಗದ 46ನೇ ಮನೆ ‘ಶ್ರೀರಾಮಚಂದ್ರ ನಿಲಯ’ ಉದ್ಘಾಟನೆ. Read More »

We're currently hard at work gathering information and crafting content to bring you the best experience. Stay tuned for exciting updates!