Yakshagana Kalaranga

Past Events

ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ.

ಸಂಸ್ಥೆಯು ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕಮಲಶಿಲೆ ಮೇಳದ ಕಲಾವಿದರೂ ಹಾಗೂ ಯಕ್ಷಶಿಕ್ಷಣದ ಗುರುಗಳೂ ಆದ ವಿಘ್ನೇಶ್ ಪೈ ಇವರಿಗೆ ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ,ಉಡುಪಿ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರರಾಗಿದ್ದ, ಪುತ್ರಾಯ ಕೃಷ್ಣ ಭಟ್ ಮತ್ತು ಅವರ ಧರ್ಮಪತ್ನಿ ಗಂಗಮ್ಮ ಇವರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ಮನೆ ‘ಗಂಗಾಕೃಷ್ಣ’ವನ್ನು 29.10.2025 ರಂದು ಅವರ ಸುಪುತ್ರ ಪಿ. ದಾಮೋದರ ಭಟ್ ಉದ್ಘಾಟಿಸಿದರು.ಹಿರಿಯ ಯಕ್ಷಗಾನ ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈಯವರು […]

ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ. Read More »

ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ.

ಅಕ್ಟೋಬರ್ 05, 2025ರಂದು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 21ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆಯ ಸಹಕುಲಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್ ಅªರು ಯಕ್ಷಗಾನ ಕಲಾರಂಗದ ನಿರಂತರ ಸಾಧನೆಯನ್ನು ಶ್ಲಾಘಿಸಿ, ಮಾಹೆ ಸದಾ ನಿಮ್ಮೊಂದಿಗಿದೆ. ನಿಮ್ಮ

ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ. Read More »

ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ

ಪ್ರತ್ಯರ್ಪಣಕ್ಕಿಂತಲು ದೊಡ್ಡ ಧರ್ಮವಿಲ್ಲ – ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿ : ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದ್ದು, ಈ ವರ್ಷ 1234 ವಿದ್ಯಾರ್ಥಿಗಳಿಗೆ 1,38,68,000/- ರೂಪಾಯಿ ವಿದ್ಯಾರ್ಥಿವೇತನವನ್ನು ಅಕ್ಟೋಬರ್ 05, 2025 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿತರಿಸಲಾಯಿತು. ಪ್ರತ್ಯರ್ಪಣ ಗುಣದಿಂದಲೇ ಜಗತ್ತಿನ ಚಲನೆ ನಡೆಯುತ್ತದೆ. ಪಡೆದ ಸಹಾಯವನ್ನು ದಾನದ ರೂಪದಲ್ಲಿ ಮುಂದಿನ

ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ Read More »

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ.

ವಿದ್ಯಾಪೋಷಕ್‍ನ ಇಂಜಿನೀಯರ್, ಮೆಡಿಕಲ್ ಹಾಗು ಸ್ನಾತಕೋತ್ತರದ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸಮಾವೇಶವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ 24.08.2025 ರಂದು ಜರಗಿತು.ಇದೇ ಸಂದರ್ಭದಲ್ಲಿ ಸಂಸ್ಥೆಯ 50ನೇ ವರ್ಷದ ವಾರ್ಷಿಕ ಸಂಚಿಕೆಯನ್ನು ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರೂ ಹಾಗೂ ಕೋಟೇಶ್ವರದ ಸಹನಾ ಕನ್ವೆನ್ಶನ್‍ನ ಮಾಲಕರಾದ ಸುರೇಂದ್ರ ಶೆಟ್ಟಿಯವರು ಉದ್ಘಾಟನೆಗೊಳಿಸಿ ಸಂಸ್ಥಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ದಾನಿಗಳಾದ ಡಾ. ಸುದರ್ಶನಮೂರ್ತಿ, ಲಕ್ಷ್ಮೀ ಎಸ್. ಮೂರ್ತಿ, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಆರ್.ಹೆಗಡೆ, ಡಾ. ಎಂ.ಎಸ್. ರಾವ್, ಡಾ.

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ. Read More »

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ (ಶ್ರೀಮತಿ ಜ್ಯೋತಿ ಮತ್ತು ಶ್ರೀ ಭಾಸ್ಕರ ಪೂಜಾರಿ ಇವರ ಪುತ್ರ) ಇವನಿಗೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಡಾ. ಮಹಾಬಲೇಶ್ವರ ರಾವ್ ಅವರು ತಮ್ಮ ಮಾತಾ – ಪಿತರಾದ ಮಣೂರು ವಿಶ್ವನಾಥ ಮಯ್ಯ ಮತ್ತು ಸರಸ್ವತಿ ಇವರ ಸ್ಮರಣೆಯಲ್ಲಿ, 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ವಿಶ್ವಸರಸ್ವತಿ’ಯನ್ನು 17.08.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳು ಮತ್ತು ತಂದೆ ತಾಯಿಗಳನ್ನು

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಘಟಕವು ಈ ವರ್ಷ ವಿದ್ಯಾಪೋಷಕ್ ಗೆ ಆಯ್ಕೆಗೊಂಡ ಪ್ರಥಮ ಪಿ. ಯು ವಿದ್ಯಾರ್ಥಿಗಳ ಮತ್ತು ಹೆತ್ತವರ ಒಂದು ದಿನದ ಸಮಾಲೋಚನಾ ಸಭೆಯನ್ನು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 17.08.25 ರಂದು ಆಯೋಜಿಸಿತ್ತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಖ್ಯಾತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ವಿದ್ಯೆಯ ಮಹತ್ತ್ವ ತಿಳಿಸಿ ವಿದ್ಯಾ ಪೋಷಕ್ ಮೂಲಕ ಯಕ್ಷಗಾನ ಕಲಾರಂಗ ಸಮಾಜದ ಸಂಕಷ್ಟಕ್ಕೆ ವಿಶಿಷ್ಟವಾಗಿ ಸ್ಪಂದಿಸುತ್ತಿದೆ ಎಂದರು. ಪ್ರಥಮ ದರ್ಜೆ ಗುತ್ತಿಗೆದಾರ ದಾನಿ ರಾಜೇಶ್ ಕಾರಂತ ಮಾತನಾಡಿ

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ Read More »

ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚೈತ್ರಾ (ಶ್ರೀಮತಿ ಲಕ್ಷ್ಮಿ ಮತ್ತು ಶ್ರೀ ಜಯಂತ ಇವರ ಪುತ್ರಿ) ಇವಳಿಗೆ ಬೈಂದೂರು ತಾಲೂಕಿನ ತೆಗ್ಗರ್ಸೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕರಾದ ಜಪಾನ್‍ನ ಹರಿಕೃಷ್ಣ ಭಟ್ ಅವರು ತಮ್ಮ ತಂದೆ-ತಾಯಂದಿರಾದ ವಾಸುದೇವ ಭಟ್ ಮತ್ತು ರುಕ್ಮಿಣಿ ಭಟ್ ಇವರ ಸವಿನೆನಪಿನಲ್ಲಿ, 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ರುಕ್ಮಿಣೀವಾಸುದೇವ’ ವನ್ನು 16.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡರು.

ಯಕ್ಷಗಾನ ಕಲಾರಂಗದ 78ನೆಯ ಮನೆ ಹಸ್ತಾಂತರ Read More »

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಧಾನ ಸಮಾರಂಭ’ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರ ಸಮಾರೋಪ

4.7.2025 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶತಾವಧಾನಿ ಡಾ.ಆರ್. ಗಣೇಶರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ವಿದ್ವಾಂಸರಿಗೆ ನೀಡಲಾಗುವ, 60000 ರೂ. ನಗದನ್ನೊಳಗೊಂಡ “ಯಕ್ಷಗಾನ ಕಲಾರಂಗ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಲಕ್ಷ್ಮೀಶ ತೋಳ್ಪಾಡಿ ವಹಿಸಿದ್ದು,ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಅಭಿನಂದನಾ ಭಾಷಣ ಮಾಡಿದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪವನ್ನು ಇದೇ ಸಂದರ್ಭದಲ್ಲಿ ನೆರವೇರಿಸಲ್ಪಟ್ಟಿತು. ಪವನ್ ಕಿರಣ್ಕೆರೆ,

ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಧಾನ ಸಮಾರಂಭ’ ಮತ್ತು ಯಕ್ಷಗಾನ ಮಾರ್ಗದರ್ಶಿ ಶಿಬಿರ ಸಮಾರೋಪ Read More »

ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ವಿಕಾಳಿಗೆ (ಶ್ರೀಮತಿ ಚಂದ್ರಾವತಿ ಮತ್ತು ಶ್ರೀ ಮಾದೇವ ಖಾರ್ವಿ ಇವರ ಪುತ್ರಿ) ಬೈಂದೂರು ತಾಲೂಕಿನ ಮರವಂತೆಯಲ್ಲಿ ಬೆಂಗಳೂರಿನ ಶ್ರೀಮತಿ ಗೀತಾ ಎಲ್. ಎನ್. ಶೆಟ್ಟಿಯವರು ತಮ್ಮ ತಂದೆ-ತಾಯಿಯವರಾದ ಬಿ. ಎಲ್. ಎನ್. ರೈ ಮತ್ತು ಲಲಿತಾ ರೈಯವರ ಸವಿ ನೆನಪಿನಲ್ಲಿ, 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಲಲಿತಾ ನಿವಾಸ’ವನ್ನು 02.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಠಿಣ ಪರಿಶ್ರಮಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ

ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!