Yakshagana Kalaranga

Past Events

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಗೆ ಈ ವರ್ಷ ಆಯ್ಕೆಗೊಂಡ ಪ್ರಥಮ ಪಿ.ಯು ವಿದ್ಯಾರ್ಥಿಗಳ ಮತ್ತು ಹೆತ್ತವರ ಒಂದು ದಿನದ ಸಮಾಲೋಚನಾ ಸಭೆಯನ್ನು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ 25.08.2026 ರಂದು ಆಯೋಜಿಸಿತ್ತು. ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಮಣಿಪಾಲ ಡಾ. ಟಿ. ಎಂ. ಎ. ಪೈ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ಟಿ. ಅಶೋಕ್ ಪೈ ಅವರು ಮಾತನಾಡಿ ಐವತ್ತು ವರ್ಷಗಳ ಹಿಂದೆ ಹೆಣ್ಣುಮಕ್ಕಳು ಶಾಲೆಗೆ ಹೋಗಲು ಹಿಂಜರಿಯುತ್ತಿದ್ದ ಕಾಲದಲ್ಲಿ ಡಾ. ಟಿ. ಎಂ. ಎ. ಪೈ ಅವರು […]

ವಿದ್ಯಾಪೋಷಕ್ ವಿದ್ಯಾರ್ಥಿ ಮತ್ತು ಪೋಷಕರ ಸಮಾವೇಶ Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 102ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ನ, ವಿವೇಕ ವಿದ್ಯಾಸಂಸ್ಥೆಯ,ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೀರ್ತನಾ ( ಶ್ರೀದೇವಿ ಮತ್ತು ಕೇಶವ ಆಚಾರ್ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಹಳ್ಳಾಡಿಯಲ್ಲಿ, ಉಡುಪಿಯ ನಿವೃತ್ತ ಉಪತಹಶೀಲ್ದಾರ್ ವಿಷ್ಣುಮೂರ್ತಿ ಭಟ್ ಇವರು ತಮ್ಮ ಮಾತಾ-ಪಿತೃಗಳಾದ ಯಮುನಮ್ಮ ಮತ್ತು ಮಾಧವ ಭಟ್ ಇವರ ಸ್ಮರಣೆಯಲ್ಲಿ ರೂ.7 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಯಮುನಾಮಾಧವ’ 21.08.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ವಿಷ್ಣುಮೂರ್ತಿ ಭಟ್ ಅವರು ನನಗೆ ಯಕ್ಷಗಾನ ಕಲಾರಂಗವನ್ನು ಪರಿಚಯಿಸಿದವರು ಹಿರಿಯ ಬಂಧುಗಳಾದ ಯು.

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 102ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ಇಂಜಿನೀಯರಿಂಗ್ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ

ವಿವಿಧ ತರಗತಿಗಳಲ್ಲಿ ಇಂಜಿನೀಯರಿಂಗ್ ವ್ಯಾಸಾಂಗ ಮಾಡುತ್ತಿರುವ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶಿ ಶಿಬಿರ 02.08.2026ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಯು. ಸಿ. ನಿರಂಜನ್ ನೇತೃತ್ವದಲ್ಲಿ ಡಾ. ಪ್ರಶಾಂತ ಹೆಬ್ಬಾರ್, ಶ್ರೀಪಾದ ಹೆಬ್ಬಾರ್, ಕಿರಣ್ ನಾಯ್ಕ್, ಡಾ. ಮಂಜುಳ ಸಿ. ಬೆಳವಾಗಿ, ದಿವ್ಯಶ್ರೀ ಬಿ. ತಂಡ ಹಾಗೂ ಯೋಗೀಶ್‍ಚಂದ್ರಾಧರ್, ಪ್ರತಿಮಾ ಪಾಂಗಣ್ಣಾಯ, ರಮ್ಯಾ ದೇಶಪಾಂಡೆ ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಜೀವನ್ ಮೌಲ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ವಿದ್ಯಾಪೋಷಕ್ ಇಂಜಿನೀಯರಿಂಗ್ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ Read More »

ವಿದ್ಯಾಪೋಷಕ್‍ ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿ (ಶ್ರೀಮತಿ ಆಶಾ ಮತ್ತು ಶ್ರೀ ಮೋಹನ್ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭು ಅವರು ತಮ್ಮ ಸಹಪಾಠಿ ಹಾಗೂ ಸ್ನೇಹಿತರೂ ಆಗಿದ್ದ ವಿ. ನಂದನ ಕಾಮತ್ ಇವರ ಸ್ಮರಣೆಯಲ್ಲಿ ರೂ.7 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ನಂದನ’ 31.07.2026ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಗೋಕುಲನಾಥ ಪ್ರಭು ಅವರು ಯಾವ ಆಡಂಬರವಿಲ್ಲದೆ ನಾವು ಕೊಡುವ ಹಣದ

ವಿದ್ಯಾಪೋಷಕ್‍ ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ Read More »

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿಗಳಾದ ಪ್ರಥಮ ಪದವಿ, ಸ್ನಾತಕೋತ್ತರ, ನರ್ಸಿಂಗ್, ಕಾನೂನು ಶಾಸ್ತ್ರ ಮತ್ತು ಮೆಡಿಕಲ್‍ನ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಒಂದು ದಿನದ ಮಾರ್ಗದರ್ಶನ ಶಿಬಿರ ಸಂಸ್ಥೆಯ ಐವೈಸಿ ಸಭಾಭವನದಲ್ಲಿ 26.07.2026 ರಂದು ಜರುಗಿತು. ಪ್ರಧಾನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ತ್ರಿಶಾ ವಿದ್ಯಾಸಂಸ್ಥೆಗಳ ಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆ, ಕಠಿಣ ಪರಿಶ್ರಮ ರೂಢಿಸಿಕೊಳ್ಳ ಬೇಕು. ಕೃತಜ್ಞತೆ, ಜೀವನದ ಉದ್ದೇಶ, ಗುರಿ ಇವುಗಳನ್ನು ಗಮನದಲ್ಲಿಟ್ಟು ಅಧ್ಯಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಪಡೆದು

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ Read More »

ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ

ಪದವಿಯೊಂದಿಗೆ ಮಾನವೀಯ ಗುಣವನ್ನು ಬೆಳೆಸಿಕೊಳ್ಳಿ – ಡಾ. ಮಹಾಬಲೇಶ್ವರ ರಾವ್ ಕೇವಲ ಪದವಿ ಪಡೆಯುವುದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಸಾಕಷ್ಟು ಕೌಶಲ್ಯಗಳ ತರಬೇತಿಯನ್ನು ಪಡೆದಿರಬೇಕು. ಶೈಕ್ಷಣಿಕ ಪಠ್ಯದೊಂದಿಗೆ ವರ್ತಮಾನ ಕಾಲದ ಎಲ್ಲಾ ವಿದ್ಯಾಮಾನಗಳ ಅರಿವು ವಿದ್ಯಾರ್ಥಿಗಳಿಗಿರಬೇಕು. ಸಾಮರ್ಥ್ಯ ಸ್ಥಾಪಿಸಿಕೊಳ್ಳುವ ಮೂಲಕ ವೃತ್ತಿ ಕೌಶಲ್ಯದೊಂದಿಗೆ ಶ್ರದ್ಧೆವಹಿಸಿ ದುಡಿದರೆ ಉನ್ನತ ಸ್ಥಾನಗಳು ದೊರೆಯುತ್ತವೆ. ಇದರೊಂದಿಗೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಡಾ. ರಾವ್ ಕರೆ ನೀಡಿದರು. ಅವರು ಉಡುಪಿಯ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಅಂತಿಮ ಪದವಿ ಓದುತ್ತಿರುವ

ವಿದ್ಯಾಪೋಷಕ್ ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ Read More »

ಯಕ್ಷಗಾನ ಕಲಾರಂಗ (ರಿ.) ಉಡುಪಿ – 51ನೇ ವಾರ್ಷಿಕ ಮಹಾಸಭೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ 51ನೇ ವಾರ್ಷಿಕ ಮಹಾಸಭೆಯು 11.07.2026ರಂದು ಸಂಜೆ 6.00 ಗಂಟೆಗೆ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಿತು. ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಅಗಲಿದ ಸದಸ್ಯರಿಗೆ, ಕಲಾವಿದರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಗತ ಮಹಾಸಭೆಯ ವರದಿ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ 2025-26ರ ಪರಿಶೋಧಿತ ಲೆಕ್ಕಪತ್ರ ಮಂಡಿಸಿದರು. 2026-27ನೇ ಸಾಲಿಗೆ ಸಿಎ

ಯಕ್ಷಗಾನ ಕಲಾರಂಗ (ರಿ.) ಉಡುಪಿ – 51ನೇ ವಾರ್ಷಿಕ ಮಹಾಸಭೆ Read More »

ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ

05.7.2026: ಯಕ್ಷಗಾನ ಕಲಾರಂಗದ ಐ.ವೈ.ಸಿ.ಸಭಾಂಗಣದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ‘ಶ್ರೀಮತಿ ಪರಿಣಯ’ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು. ಸೋದೆ ಮಠಾಧೀಶರಾದ ಶ್ರೀ.ಶ್ರೀ.ವಿಶ್ವವಲ್ಲಭ ತೀರ್ಥ ಶ್ರೀಪಾದರು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 12.7.2026 : ಯಕ್ಷಗಾನ ಕಲಾರಂಗದಲ್ಲಿ ಬಡಗುತಿಟ್ಟಿನ ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರಿಂದ ‘ಪವನಸುತ ಪಾಂಚಾಲೆ’, ಯಕ್ಷಗಾನ ಅತ್ಯಂತ ಸೊಗಸಾಗಿ ಪ್ರದರ್ಶನಗೊಂಡಿತು. ಅದಮಾರು ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಯಕ್ಷಗಾನವನ್ನು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.

ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ Read More »

ಯಕ್ಷಗಾನ ಕಲಾರಂಗ – ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಯಕ್ಷಗಾನ ಕಲಾರಂಗವು ಸಾಧಕ ಹಿರಿಯ ಅರ್ಥಧಾರಿಗಳಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾ ಭವನದಲ್ಲಿ ಇಂದು (11/07/26) ಜರುಗಿತು. ಈ ವರ್ಷ ಹೊಸದಾಗಿ ಸೇರಿಕೊಂಡ ಡಿ. ಬಿ. ವೆಂಕಟಸುಬ್ಬಾ ಜೋಯಿಸ್ ಹಾಗು ಮಟ್ಟಿ ಮುರಳೀಧರ ರಾವ್, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ರೂ.20000 ನಗದನ್ನೊಳಗೊಂಡ ಪ್ರಶಸ್ತಿಗಳನ್ನು ಅನುಕ್ರಮವಾಗಿ ಶ್ರೀ ವೆಂಕಟರಾಮ ಭಟ್ಟ, ಸುಳ್ಯ, ಡಾ. ಜಿ. ಕೆ. ಹೆಗಡೆ, ಹೊನ್ನಾವರ, ಶ್ರೀ ಕೋಟೆ ರಾಮ ಭಟ್, ಕಾರ್ಕಳ ಇವರುಗಳಿಗೆ ಪ್ರದಾನ

ಯಕ್ಷಗಾನ ಕಲಾರಂಗ – ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ Read More »

We're currently hard at work gathering information and crafting content to bring you the best experience. Stay tuned for exciting updates!