Yakshagana Kalaranga

Past Events

ಯಕ್ಷಗಾನ ಕಲಾರಂಗದ 55ನೆಯ ಮನೆಯ ಉದ್ಘಾಟನೆ.

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿಗಳಾದ ಪ್ರಥಮ ಪಿ.ಯು.ಸಿ.ಯ ಶ್ರೀನಿಧಿ ಹಾಗೂ ಪ್ರಥಮ ಬಿ.ಇ.ಯ ಭೂಮಿಕಾ ಸಹೋದರಿಯರಿಗೆ ಬ್ರಹ್ಮಾವರ ತಾಲೂಕಿನ ಹೇರಾಡಿಯ ಸಂಕಾಡಿಯಲ್ಲಿ ಶ್ರೀ ಪಣಂಬೂರು ವಾಸುದೇವ ಐತಾಳ್ ಇವರು ತಮ್ಮ 60ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪ್ರಾಯೋಜಿಸಿದ ನೂತನ ಮನೆ ‘ಕೃಪಾರಂಗ’ 12.10.2024ರಂದು ಉದ್ಘಾಟನೆಗೊಂಡಿತು. ಶ್ರೀ ಪಣಂಬೂರು ವಾಸುದೇವ ಐತಾಳ್ ಶ್ರೀಮತಿ ಮೀನಾಕ್ಷಿ ವಿ. ಐತಾಳ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸಹೋದರಿ ಶ್ರೀಮತಿ ಜಯಶ್ರೀ ಉಪಸ್ಥಿತರಿದ್ದರು. ಕಲಾರಂಗ ವಿಶ್ವಾಸಾರ್ಹತೆ ಮತ್ತು ಸಮಾಜ ಪ್ರೀತಿಯಿಂದ …

ಯಕ್ಷಗಾನ ಕಲಾರಂಗದ 55ನೆಯ ಮನೆಯ ಉದ್ಘಾಟನೆ. Read More »

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ಕಾರ್ಯಕ್ರಮ – 2024

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ. ಸೆಪ್ಟೆಂಬರ್ 29, 2024 ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 20ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕಿರಿಯ ಸ್ವಾಮೀಜಿ ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತರಿದ್ದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಮಣಿಪಾಲ ಮಾಹೆಯ ಉಪಕುಲಪತಿಗಳಾದ ಲೆ. ಜ. (ಡಾ.) ಎಂ. …

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ಕಾರ್ಯಕ್ರಮ – 2024 Read More »

ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ

ಯಕ್ಷಶಿಕ್ಷಣ ಟ್ರಸ್ಟ್( ರಿ)ಉಡುಪಿ,ಇವರ ಸಹಕಾರದಿಂದ ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಅಗಸ್ಟ್ 8 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದಾನಿಗಳಾದ ಸುಜಿತ್ ಎಸ್. ಅಮೀನ್ ರವರು ನೆರವೇರಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಸದಸ್ಯರಾದ ನಾರಾಯಣ ಎಂ.ಹೆಗಡೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.ಯಕ್ಷಗಾನ ಗುರುಗಳಾದ ಬಿ. ಕೇಶವ್ ರಾವ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸುಜಿತ್ ಎಸ್.ಅಮೀನ್ ರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ …

ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ Read More »

“ಕಲಾಂತರಂಗ 2023-24” ಬಿಡುಗಡೆ.

ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ”ಕಲಾಂತರಂಗ 2023-24″ವನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ …

“ಕಲಾಂತರಂಗ 2023-24” ಬಿಡುಗಡೆ. Read More »

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿಪ್ರಶಸ್ತಿ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರಗಿತು. ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ,ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವೀಕರಿಸಿದರು.‌ಕಟೀಲು ಕ್ಷೇತ್ರದ …

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.

ಇಂಜಿನೀಯರ್, ಸ್ನಾತಕೋತ್ತರ ಮತ್ತು ಇತರೆ ವಿಭಾಗಗಳಲ್ಲಿ ಕಲಿಯುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ದಿನಾಂಕ 28.07.2024 ರಂದು ಸಂಸ್ಥೆಯ ಐ.ವೈ.ಸಿ ಸಭಾಂಗಣದಲ್ಲಿ ಜರಗಿತು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಯು. ಎಸ್. ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು. ಸಮಾಲೋಚನಾ ಸಭೆಯ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಯು.ಸಿ.ನಿರಂಜನರ ನೇತೃತ್ವದ ತಂಡದಲ್ಲಿ ನಿವಿಯಸ್ ಸೊಲ್ಯೂಷನ್ಸ,ಉಡುಪಿ ಇದರ ಮೆನೇಜರ್ ಪವಿತ್ರಾ, MUTBI ಮಣಿಪಾಲ್‌ನ ಮ್ಯಾನೇಜರ್ ಮಲ್ಲೇಶ್ ಕುಮಾರ್ ಎಸ್., ಎಂ.ಐ.ಟಿಯ ಉಪನ್ಯಾಸಕರಾದ , ಚೇತನಾ ಪೂಜಾರಿ, ದುಂಡೇಶ್ …

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ. Read More »

ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು – ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು ಇಲ್ಲಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಹಾಗೂ ಇತರ ಅಭ್ಯಾಗತರು ದೀಪ ಪ್ರಜ್ವಲನದೊಂದಿಗೆ ಚೆಂಡೆಯನ್ನು ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತದನಂತರ ಅವರು ಮಾತನಾಡಿ ಯಕ್ಷಗಾನದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಜ್ಯೋತಿ …

ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು – ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More »

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ.

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟೆಸ್ಟ್ ಗೆ ಅಭಿನಂದನೆಗಳು.ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು.ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್ ರವರು ಜುಲೈ 27 ರಂದು ವಿವೇಕ ವಿದ್ಯಾ ಸಂಸ್ಥೆಗಳ ಯಕ್ಷಶಿಕ್ಷಣವನ್ನು ಉದ್ಘಾಟಿಸಿ ನುಡಿದರು.ಈ ಬಾರಿ ಕುಂದಾಪುರ ವಿಧಾನಸಭಾ ವ್ಯಾಪ್ತಿಯ 24 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ಆರಂಭಗೊಂಡಿದ್ದು,ಇದಕ್ಕೆ ಕಾರಣೀಕರ್ತರಾದ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಅಭಿನಂದನೀಯರು. ರಾಜ್ಯಕ್ಕೆ ಮಾದರಿಯಾದ ವಿವೇಕ ವಿದ್ಯಾಸಂಸ್ಥೆಯ ಆವರಣದಲ್ಲಿ ಹುಡುಗರ ಮತ್ತು …

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ. Read More »

ಯಕ್ಷಗಾನ ಕಲಾರಂಗ 49ನೆಯ ವಾರ್ಷಿಕ ಮಹಾಸಭೆ

ಉಡುಪಿಯ ಸಾಂಸ್ಕøತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 49ನೆಯ ವಾರ್ಷಿಕ ಮಹಾಸಭೆಯು ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್ ರಿಸರ್ಚ್ & ಟ್ರೈನಿಂಗ್ ಸೆಂಟರ್‍ನಲ್ಲಿ ಜುಲೈ 21, 2024 ಭಾನುವಾರದಂದು ಎಂ.ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯುು ಡಾ.ರಾಜೇಶ್ ನಾವಡರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಉಪಾಧ್ಯಕ್ಷರಾದ ಎಸ್.ವಿ.ಭಟ್ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಸದಸ್ಯರಾದ ಯು. ಶ್ರೀಧರ್ ಜ್ಯೋತಿ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಕ್ರಮವಾಗಿ ಜೊತೆ ಕಾರ್ಯದರ್ಶಿ ಎಚ್. …

ಯಕ್ಷಗಾನ ಕಲಾರಂಗ 49ನೆಯ ವಾರ್ಷಿಕ ಮಹಾಸಭೆ Read More »

We're currently hard at work gathering information and crafting content to bring you the best experience. Stay tuned for exciting updates!