Yakshagana Kalaranga

Past Events

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ 19-07-2023 ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು. ನಿವೃತ್ತ ಉಪನ್ಯಾಸಕ, ಕಲಾವಿದ ಪ್ರೊ.ಕೆ.ಜಿ. ಮಂಜುನಾಥ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಸದಸ್ಯ ಕೆ. ಅಜಿತ್ ಕುಮಾರ್, ಪ್ರಾಂಶುಪಾಲರಾದ ಭಾಸ್ಕರ ಎ. ಅಭ್ಯಾಗತರಾಗಿ […]

ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯನ್ನು ಶಾಲಾ ಮುಖ್ಯಸ್ಥರಾದ ವಂದನೀಯ ಪ್ರದೀಪ್ ಕಾರ್ಡೋಝಾ 18-07-2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತಾ ಕಾಮತ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಿ.ಜಿ ಶೆಟ್ಟಿ, ವಿದ್ಯಾಪ್ರಸಾದ್, ನಿವ್ರತ್ತ ಶಿಕ್ಷಕ ಪದ್ಮನಾಭ ನಾಯಕ್ ಶುಭಾಶಂನೆಗೈದರು. ಯಕ್ಷಗಾನ ಗುರುಗಳಾದ ಶಾಂತಾರಾಮ ಆಚಾರ್ಯ ಉಪಸ್ಥಿತರಿದ್ದರು.ಶಿಕ್ಷಕರಾದ ಸುಧೀರ್ ನಾಯಕ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಯಲ್ಲಿ

ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ Read More »

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ

15-7-2023ರಂದು ಕಾಪು ದಂಡತೀರ್ಥ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಯನ್ನು ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್,ಉಪಾಧ್ಯಕ್ಷ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯೂ ಆದ ವಿ.ಜಿ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವಿದ್ಯಾ ಸಂಸ್ಥೆಯ ಸಂಚಾಲಕರಾದ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು.ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಯಕ್ಷ ಗುರುಗಳಾದ ಮಂಜುನಾಥ್ ಕುಲಾಲ್, ಉಭಯ ಶಾಲಾ

ಕಾಪು ದಂಡ ತೀರ್ಥ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »

ಉದ್ಯಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ

13.07.2023 ರಂದು ಕಾಪು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಆಶಯದಂತೆ ಯಕ್ಷಶಿಕ್ಷಣ ಆಶ್ರಯದಲ್ಲಿ ತರಬೇತಿ ಉದ್ಘಾಟನೆಗೊಂಡಿತು. ಗುರುಗಳಾಗಿ ನಿರಂಜನ್ ಭಟ್ ಮತ್ತು ಆದ್ಯತಾ ಭಟ್ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನದ ತರಬೇತಿ ನೀಡಲಿದ್ದಾರೆ.

ಉದ್ಯಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »

ಯು.ಕಮಲಾ ಬಾಯಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

12-7-2023 ರಂದು ಯು.ಕಮಲಾ ಬಾಯಿ ಪ್ರೌಢಶಾಲೆ, ಕಡಿಯಾಳಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆ ಯಲ್ಲಿ ಈ ಬಾರಿಯ ಯಕ್ಷಗಾನ ತರಬೇತಿ ಆರಂಭಗೊಂಡಿತು.ಈ ಉಭಯ ಶಾಲೆಗಳಲ್ಲಿ ಗುರುಗಳಾಗಿ ಶ್ರೀ ಬಗ್ವಾಡಿ ಕೃಷ್ಣಮೂರ್ತಿ ಭಟ್ ಇವರು ಕಾರ್ಯನಿರ್ವಹಿಸುತ್ತಿದ್ದಾರೆ.

ಯು.ಕಮಲಾ ಬಾಯಿ ಮತ್ತು ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 12-7-2023 ರಂದು ಆರಂಭವಾಯಿತು.ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ ಎಂದು ಅವರು ನುಡಿದರು. ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ. ಜಿ. ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಯಾದ ಶ್ರೀ ಮುರಲಿ ಕಡೆಕಾರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

11.07.2023ರಂದು ಸರಕಾರಿ ಪ್ರೌಢಶಾಲೆ ನುಕ್ಕೂರು ಇಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಆರಂಭಗೊಂಡಿತು. ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್, ಸದಸ್ಯರಾದ ಗಣೇಶ್ ಬ್ರಹ್ಮಾವರ, ಗುರುಗಳಾದ ಮಹೇಶ್ ಕುಮಾರ್ ಮಂದಾರ್ತಿ, ಶಾಲಾ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಹಾಗೂ ಶಾಲಾ ಶಿಕ್ಷಕವ್ರಂದ ಉಪಸ್ಥಿತರಿದ್ದರು.

ಸರಕಾರಿ ಪ್ರೌಢಶಾಲೆ ನುಕ್ಕೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ

11.07.2023ರಂದು ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಆರಂಭಗೊಂಡಿತು. ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್, ಮುಖ್ಯ ಶಿಕ್ಷಕಿ ಅನಸೂಯ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಾಲೆಯ ಯಕ್ಷಗಾನದಲ್ಲಿ ವೇಷಧಾರಿಯಾಗಿದ್ದ ಹಳೆ ವಿದ್ಯಾರ್ಥಿ ನಿಶ್ವಲ್ ತೀರ್ಥಳ್ಳಿ ಯಕ್ಷ ಗುರುವಾಗಿ ಪಾಲ್ಗೊಳ್ಳುತ್ತಿರುವುದು ಟ್ರಸ್ಟಿಗೆ ಧನ್ಯತೆಯ ವಿಷಯವಾಗಿದೆ.ಈತ ಎರಡು ಶಾಲೆಗಳಲ್ಲಿ ಗುರುವಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಯಕ್ಷಗಾನ ಕೇಂದ್ರದಲ್ಲಿದ್ದುಕೊಂಡು ಗುರು ಬನ್ನಂಜೆ ಸಂಜೀವ ಸುವರ್ಣರ ಶಿಷ್ಯನಾಗಿ ಯಕ್ಷಗಾನವನ್ನು ಶ್ರದ್ಧೆಯಿಂದ ಅಧ್ಯಯನ ಮಾಡಿರುತ್ತಾನೆ.

ನಿಟ್ಟೂರು ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ Read More »

ತೆಂಕುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ

09-07-2023 ರಂದು ಉಡುಪಿ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಯಕ್ಷಗಾನ ಕಲಾರಂಗ ಸಂಯೋಜಿಸಿದ”ದಾಸೋಹಂ ಕೌಸಲೇಂದ್ರಸ್ಯ” ತೆಂಕುತಿಟ್ಟು ಯಕ್ಷಗಾನ ಅತ್ಯಂತ ಸೊಗಸಾಗಿ ಪ್ರಸ್ತುತಗೊಂಡಿತು.

ತೆಂಕುತಿಟ್ಟು ಯಕ್ಷಗಾನ ‘ಯವಕ್ರೀತೋಪಾಖ್ಯಾನ’ದ ಛಾಯಾಚಿತ್ರ Read More »

We're currently hard at work gathering information and crafting content to bring you the best experience. Stay tuned for exciting updates!