ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 42ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 42ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023 Read More »
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾದ ಅಮಾಸೆಬೈಲಿನ ಚೇತನ್ ಮತ್ತು ನಯನಾ ಇವರಿಗೆ ಪಂಚಮಿ ಟ್ರಸ್ಟ್ (ರಿ.), ಗಾಂಧಿ ಆಸ್ಪತ್ರೆ, ಉಡುಪಿ ಇದರ ಪ್ರಾಯೋಜಕತ್ವದಲ್ಲಿ ನವೀಕರಣಗೊಂಡ ಮನೆ ‘ನಂದಾದೀಪ’ ವನ್ನು ಗಾಂಧಿ ಆಸ್ಪತ್ರೆಯ ವರಿಷ್ಠರಾದ ಡಾ. ಹರಿಶ್ಚಂದ್ರ ಹಾಗೂ ಶ್ರೀಮತಿ ಲಕ್ಷ್ಮೀ ಹರಿಶ್ಚಂದ್ರರು ಜೂನ್ 22, 2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಹರಿಶ್ಚಂದ್ರರು ಬಡ ವಿದ್ಯಾರ್ಥಿಗಳನ್ನು ಹುಡುಕಿ ಅವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಯಕ್ಷಗಾನ ಕಲಾರಂಗ ಸಂಸ್ಥೆ ದೇಶಕ್ಕೆ ಮಾದರಿಯಾಗಿದೆ. ಸೇವಾಮನೋಭಾವ ಹೊಂದಿರುವ
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 40ನೇ ಮನೆ ಹಸ್ತಾಂತರ Read More »
ಎಂಟು ವರ್ಷಗಳ ಕಾಲ ಕೋಶಾಧಿಕಾರಿಯಾಗಿ ತನ್ನ ಬದುಕಿನ ಅಮೂಲ್ಯ ಸಮಯ ಮತ್ತು ಅನುಭವವನ್ನು ನೀಡಿ ಸಂಸ್ಥೆಯ ಕಾರ್ಯನಿರ್ವಹಣೆ ಸುಗಮವಾಗಿ ಸಾಗಲು ಕಾರಣೀಕರ್ತರಾಗಿದ್ದ ಮನೋಹರ ಕೆ. ಜೂನ್ 18ರಂದು ನಮ್ಮನ್ನಗಲಿದ್ದು, ಇವರ ಬಗ್ಗೆ ನುಡಿನಮನ ಕಾರ್ಯಕ್ರಮ ಜೂನ್ 20, 2023 ಮಂಗಳವಾರ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಜರಗಿತು. ಮನೋಹರ್ ಅವರ ಒಡನಾಡಿಗಳಾಗಿದ್ದ ಶೇಖರ್ ಅಂಚನ್, ಅನಂತರಾಜ ಉಪಾಧ್ಯ, ಕೆ. ಸದಾಶಿವ ರಾವ್, ಸೂರ್ಯಪ್ರಕಾಶ್, ಗಣೇಶ್ ಬ್ರಹ್ಮಾವರ, ವಿ.ಜಿ. ಶೆಟ್ಟಿ ಭಾವಪೂರ್ಣ ನುಡಿನಮನ ಸಲ್ಲಿಸಿದರು. ನುಡಿನಮನದಲ್ಲಿ ಅವರ ಸ್ನೇಹ, ಕರ್ತವ್ಯನಿಷ್ಠೆ,
ಮನೋಹರ್ ಕೆ. ಶ್ರದ್ಧಾಂಜಲಿ ಸಭೆ Read More »
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ಹಾಲಾಡಿ ಸಮೀಪದ ಗೋರಾಜೆಯ ಸಿಂಚನಾ (ಶ್ರೀಮತಿ ಲಲಿತಾ ಮತ್ತು ದಿ. ಸಂಜೀವ ಕುಲಾಲ ಇವರ ಪುತ್ರಿ) ಇವಳಿಗೆ ಪೂಜ್ಯ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಅನುಗ್ರಹಪೂರ್ವಕ ಪ್ರಾಯೋಜಕತ್ವದಲ್ಲಿ 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಕಸ್ತೂರಿ ನಿವಾಸ’ ವನ್ನು ಜೂನ್ 19, 2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ನೀಡಿದರೆ ಎಲ್ಲರೂ
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 39ನೇ ಮನೆ ಹಸ್ತಾಂತರ Read More »
ಉಡುಪಿ ವಿಧಾನಸಭಾ ವ್ಯಾಪ್ತಿಯ 45 ಪ್ರೌಢ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್ ನ ಗುರುಗಳ ಸಮಾಲೋಚನಾ ಸಭೆ ಇಂದು (10-06-2023ರಂದು) ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಜರಗಿತು. ಉಡುಪಿಯ ನಿಕಟಪೂರ್ವ ಶಾಸಕರೂ, ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಘುಪತಿ ಭಟ್ ಟ್ರಸ್ಟ್ ನ ನಿಯಮಾವಳಿಯಂತೆ ಉಡುಪಿ ಶಾಸಕರಾಗಿ ಆಯ್ಕೆಯಾದ ಯಶಪಾಲ್ ಸುವರ್ಣರಿಗೆ ಟ್ರಸ್ಟ್ ನ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಗೌರವಿಸಿದರು. ಅಧಿಕಾರ ವಹಿಸಿಕೊಂಡ ಯಶಪಾಲ್ ಸುವರ್ಣರು ರಾಜ್ಯದಲ್ಲೇ ಅಪೂರ್ವವಾದ ಈ ಯೋಜನೆಯನ್ನು ಯಶಸ್ವಿಯಾಗಿ ಮುಂದುವರಿಯಲು ಎಲ್ಲರೀತಿಯ
ಯಕ್ಷಶಿಕ್ಷಣ ಟ್ರಸ್ಟ್ ಗುರುಗಳೊಂದಿಗೆ ಸಮಾಲೋಚನಾ ಸಭೆ Read More »
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಬೀಜಾಡಿಯ ಸಾನಿಕಾಳ (ಶ್ರೀಮತಿ ಶ್ಯಾಮಲಾ ಮತ್ತು ಶ್ರೀ ನಾಗೇಶ್ರವರ ಪುತ್ರಿ) ತೀರಾ ದುಸ್ಥಿತಿಯಲ್ಲಿದ್ದ ಮನೆಯನ್ನು ಪುನರ್ನವೀಕರಿಸಿ ಜೂನ್ 08, 2023ರಂದು ಹಸ್ತಾಂತರಿಸಲಾಯಿತು. ಸಂಸ್ಥೆಯ ಸದಸ್ಯರೂ, ಮೆಟ್ರೈಸ್ ರೂಫಿಂಗ್ ಸ್ಟ್ರಕ್ಚರ್ ಪುತ್ತೂರು ಇದರ ಮಾಲಕರಾದ ಶ್ರೀ ಪ್ರಸಾದ್ ರಾವ್, ಪುತ್ತೂರು ಇವರು ಶ್ರೀ ಆನಂದ್ ಸಿ. ಕುಂದರ್ ಇವರ 75ರ ಸಂಭ್ರಮದ ಶುಭಾವಸರದಲ್ಲಿ ಕೃತಜ್ಞತಾಪೂರ್ವಕವಾಗಿ ರೂಪಿಸಿದ ಮನೆಯನ್ನು ಕೋಟ ಮಣೂರಿನ ಗೀತಾನಂದ ಫೌಂಡೇಶನ್ನ ಅಧ್ಯಕ್ಷರು, ದಾನಿಗಳೂ ಆದ ಶ್ರೀ
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ Read More »