ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 44ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 44ನೇ ಮನೆ ಹಸ್ತಾಂತರ ಆಮಂತ್ರಣ ಪತ್ರಿಕೆ– 2023 Read More »
ಮೊರಾರ್ಜಿ ದೇಸಾಯಿ ವಸತಿಶಾಲೆ ಕಳತ್ತೂರಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.), ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 25.08.2023 ರಂದು ಉದ್ಘಾಟಿಸಲಾಯಿತು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲರಾದ ಉಮಾಕಾಂತ ಗೌಡ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಯಕ್ಷಗಾನ ಗುರು ಸತೀಶ್ ಆಚಾರ್ ಉಪಸ್ಥಿತರಿದ್ದರು.
ಕಳತ್ತೂರು ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭ. Read More »
ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.), ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನೀಡುವ ಯಕ್ಷಗಾನ ತರಗತಿಯನ್ನು 25.08.2023ರಂದು ಉದ್ಘಾಟಿಸಲಾಯಿತು. ಶಾಲೆಯ ಸಂಚಾಲಕ ಶಿವರಾಮ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಯಕ್ಷಶಿಕ್ಷಣ ಟ್ರಸ್ಟ್ ಗ್ರಾಮೀಣ ಪ್ರದೇಶದ ಶಾಲೆಗೆ ಈ ಸೌಲಭ್ಯ ಕಲ್ಪಿಸಿದಕ್ಕಾಗಿ ಅಭಿನಂದಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ,
ಕಳತ್ತೂರು ಪಿ.ಕೆ.ಎಸ್ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭ. Read More »
ಯಕ್ಷಗಾನ ಕಲಾರಂಗದ ಅಂಗಸಂಸ್ಥೆಯ ವಿದ್ಯಾಪೋಷಕ ವಿದ್ಯಾರ್ಥಿನಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಬೈಕಾಡಿಯ ಸುಲೋಚನಾ ಮತ್ತು ಕೃಷ್ಣಮೂರ್ತಿ ಆಚಾರ್ಯರ ಸುಪುತ್ರಿ ನವ್ಯಾಳಿಗೆ ನಿರ್ಮಿಸಿದ ನೂತನ ಮನೆ ‘ಪುಷ್ಪಾನಂದ’ ಇದರ ಉದ್ಘಾಟನೆಯನ್ನು ಉಡುಪಿ ಶಾಸಕರೂ, ಮನೆಯ ಪ್ರಾಯೋಜಕರೂ ಆದ ಶ್ರೀ ಯಶ್ಪಾಲ್ ಎ. ಸುವರ್ಣರು 25.08.2023 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅವರ ಮಾತಾಪಿತರಾದ ಪುಷ್ಪಾವತಿ ಸುವರ್ಣ ಮತ್ತು ಆನಂದ ಎನ್. ಪುತ್ರನ್ ನೆನಪಿನಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಯಕ್ಷಗಾನ ಕಲಾರಂಗವು ವಿಶ್ವಾಸಾರ್ಹತೆಗೆ ಇನ್ನೊಂದು ಹೆಸರಾಗಿದೆ. ಕಲೆ,
ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ Read More »
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಹೆಸ್ಕುತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂದು (23.08.2023) ಯಕ್ಷಶಿಕ್ಷಣ ಉದ್ಘಾಟನೆಗೊಂಡಿತು. ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಎರಡು ವರ್ಷದಿಂದ ವಿದ್ಯಾರ್ಥಿಯಾಗಿದ್ದುಕೊಂಡು, ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನವನ್ನು ಅಭ್ಯಸಿಸಿದ ಅಬ್ದುಲ್ ರವೂಫ್ ಅವರು ಈ ಶಾಲೆಯ ಮುಖ್ಯೋಪಾಧ್ಯಾಯರಾಗಿರುವುದು ನಾವೆಲ್ಲ ಹೆಮ್ಮೆ ಪಡುವಂತ ವಿಚಾರವಾಗಿದೆ ಎಂದು ಶುಭಕೋರಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ
ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »
ಎಸ್.ವಿ.ಎಚ್ ಕನ್ನಡ ಮಾಧ್ಯಮ ಪ್ರೌಢ ಶಾಲೆ ಇನ್ನಂಜೆಯಲ್ಲಿ ಕಾಪು ವಿಧಾನಸಭಾ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 22-08-2023 ರಂದು ಹಿರಿಯ ಯಕ್ಷಗಾನ ಕಲಾವಿದ ಡಾ. ಕೊಳ್ಯೂರು ರಾಮಚಂದ್ರ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಮತ್ತು ಸದಸ್ಯರಾದ ಸುಬ್ರಹ್ಮಣ್ಯ ಬೈಪಡಿತ್ತಾಯ ಶುಭ ಹಾರೈಸಿದರು. ಶಾಲಾ
ಇನ್ನಂಜೆ ಎಸ್.ವಿ.ಎಚ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »
ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸರೇಶ್ ಶೆಟ್ಟಿಯವರ ಆಶಯದಂತೆ ಯಕ್ಷಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಯಕ್ಷಗಾನ ತರಗತಿಯನ್ನು 18.08.2023 ರಂದು ಪ್ರಾರಂಭಿಸಲಾಯಿತು. ಯಕ್ಷಗಾನ ಕಲಾರಂಗದ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆಯವರು ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಗೀತದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸುತ್ತಾ ಯಕ್ಷಗಾನದ ಮಹತ್ವವನ್ನು ತಿಳಿಸಿದರು. ಯಕ್ಷಗುರು ನರಸಿಂಹ ತುಂಗರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಎಸ್. ಎನ್. ಸ್ವಾಗತಿಸಿದರು. ಶಿಕ್ಷಕಿ ಅಕ್ಷತಾ ವಿ. ಕಾರ್ಯಕ್ರಮವನ್ನು
ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಯಲ್ಲಿ ಯಕ್ಷಶಿಕ್ಷಣ ಆರಂಭ. Read More »
2007ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸುವ ಉದ್ದೇಶದಿಂದ ಹುಟ್ಟಿಕೊಂಡ ಯಕ್ಷಶಿಕ್ಷಣ ಟ್ರಸ್ಟ್ ಪ್ರತೀ ವರ್ಷ 40ಕ್ಕೂ ಮೇಲ್ಪಟ್ಟು ಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸಿ ಪ್ರದರ್ಶನದ ವ್ಯವಸ್ಥೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ ಸನಿಹದ ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೂ ಯಕ್ಷಶಿಕ್ಷಣ ಅಭಿಯಾನ ವಿಸ್ತರಣೆಗೊಂಡಿದೆ. ಉಡುಪಿ, ಕಾಪು ಮತ್ತು ಕುಂದಾಪುರ ಕ್ಷೇತ್ರಗಳಲ್ಲಿ ಕ್ರಮವಾಗಿ 43, 15 ಮತ್ತು 11 ಹೀಗೆ ಒಟ್ಟೂ 69 ಪ್ರೌಢಶಾಲೆಗಳಲ್ಲಿ 31 ಗುರುಗಳು ಯಕ್ಷಶಿಕ್ಷಣವನ್ನು ನೀಡುತ್ತಿದ್ದಾರೆ. ಆಗಸ್ಟ್ 16, 2023ರಂದು ಈ
ಯಕ್ಷಶಿಕ್ಷಣ ಗುರುಗಳ ಸಮಾವೇಶ. Read More »