Yakshagana Kalaranga

Past Events

ವಿದ್ಯಾಪೋಷಕ್‍ನ 68ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 22.04.2025 ರಂದು ಜರಗಿತು. ಓಎನ್‍ಜಿಸಿಯ ನಿವೃತ್ತ ಸಿ.ಜಿ.ಎಂ. ಬನ್ನಾಡಿ ನಾರಾಯಣ ಆಚಾರ್ ಇವರು ತಮ್ಮ ಮಾತೃಶ್ರೀಯವರಾದ, ಬನ್ನಾಡಿ ಮಂಜುನಾಥ ಅಕ್ಕಸಾಲರ ಧರ್ಮಪತ್ನಿ ಬನ್ನಾಡಿ ಪದ್ದು ಆಚಾರ್ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಪದ್ಮಾಲಯ’ ಮನೆಯನ್ನು ಅವರೇ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಾಲ್ಯದ ತನ್ನ ಕಷ್ಟದ ದಿನಗಳನ್ನು ಸ್ಮರಿಸಿಕೊಂಡು ತನ್ನ ತಾಯಿಯ ತ್ಯಾಗ ಮತ್ತು ತನಗೆ […]

ವಿದ್ಯಾಪೋಷಕ್‍ನ 68ನೇ ಮನೆ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗ – ಕಲಾವಿದನ ಮನೆಗೆ ಶಿಲಾನ್ಯಾಸ

ಮಂದಾರ್ತಿ ಮೇಳದ ಚೆಂಡೆವಾದಕರಾದ ಸುರೇಶ್ ಆಚಾರ್ಯ,ಕನ್ನಾರ್ ಇವರಿಗೆ ಪೇತ್ರಿಯ ಆಚಾರ್ ಬೆಟ್ಟಿನಲ್ಲಿ,ಹೆಬ್ರಿಯ ಡಾ.ಭಾರ್ಗವಿ ಐತಾಳ್ ಇವರ ಪ್ರಾಯೋಜಕದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಶಿಲಾನ್ಯಾಸವನ್ನು 20-4-2025 ರಂದು ಕೃಷಿತಜ್ಞರು, ಅರ್ಥಧಾರಿಯೂ ಆದ ಡಾ.ವೈಕುಂಠ ಹೇರ್ಳೆ ಅವರು ನೆರವೇರಿಸಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ರವರು ಮನೆ ನಿರ್ಮಿಸಲಿದ್ದು,ಇದೇ ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸ ಹಾಗೂ ಸಂಸ್ಥೆಯ ಸದಸ್ಯರೂ ಆದ ಸೀತಾರಾಮ ಭಟ್,ಸಾಮಾಜಿಕ ಕಾರ್ಯಕರ್ತರಾದ ಕಮಲಾಕ್ಷ ಹೆಬ್ಬಾರ್,ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ

ಯಕ್ಷಗಾನ ಕಲಾರಂಗ – ಕಲಾವಿದನ ಮನೆಗೆ ಶಿಲಾನ್ಯಾಸ Read More »

ಭೀಮ-ಯಕ್ಷಶಿಕ್ಷಣ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ

ಭೀಮ-ಯಕ್ಷಶಿಕ್ಷಣ ಸನಿವಾಸ ಶಿಬಿರದ ಮುಂದುವರಿದ ಭಾಗವಾಗಿ ಆಸಕ್ತ 18 ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ 15-04-25 ರಂದು ಐವೈಸಿಯಲ್ಲಿ ಆರಂಭಗೊಂಡಿತು. ಗುರು ಬನ್ನಂಜೆ ಸುವರ್ಣರ ಮಾರ್ಗದರ್ಶನದಲ್ಲಿ ಮಿಥುನ್ ನಾಯಕ್ ಮತ್ತು ನರಸಿಂಹ ತುಂಗರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಸೂಕ್ಷ್ಮವನ್ನು ತಿಳಿಸಿದರು.ಇದೇ ಸಂದರ್ಭದಲ್ಲಿ ಇಂಗ್ಲೆಂಡಿನಲ್ಲಿದ್ದು, ಹವ್ಯಾಸಿ ಕಲಾವಿದರಾಗಿ,ಯು.ಕೆ.ಯಲ್ಲಿ ಯಕ್ಷಗಾನದ ರಾಯಭಾರಿಯಂತೆ ಕಾರ್ಯನಿರ್ವಹಿಸುತ್ತಿರುವ ಡಾ.ಗುರುಪ್ರಸಾದ್ ಪಟ್ವಾಲ್ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಮೆಚ್ಚಿ,ಸಂತಸ ವ್ಯಕ್ತಪಡಿಸಿದರು.

ಭೀಮ-ಯಕ್ಷಶಿಕ್ಷಣ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಮುಖವರ್ಣಿಕೆ ಮತ್ತು ವೇಷ ಕಟ್ಟಿಕೊಳ್ಳುವ ಶಿಬಿರ Read More »

ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ.

ಯಕ್ಷಗಾನ ಕಲಾರಂಗ ಕುಂದಾಪುರ ತಾಲೂಕಿನ ಕೋಟೇಶ್ವರದ ಕುಂಬ್ರಿಯ ವಿದ್ಯಾಪೋಷಕ್ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಪೃಥ್ವಿಗೆ 6 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 10.04.2025 ರಂದು ಜರಗಿತು. ಉದಯವಾಣಿಯ ನಿವೃತ್ತ ಉಪಸಂಪಾದಕ,ಪ್ರಕೃತ ಬೆಂಗಳೂರಿನಲ್ಲಿರುವ ಹಾರ್ಯಾಡಿ ಮಂಜುನಾಥ ಭಟ್ಟರು ತಮ್ಮ ತಾಯಿ ಗಂಗಾ ಲಕ್ಷ್ಮೀನಾರಾಯಣ ಭಟ್ಟರು ಮತ್ತು ಅತ್ತೆ ಐರೋಡಿ ಭಾಗೀರಥಿ ನಾಗಪ್ಪಯ್ಯ ಅಲ್ಸೆ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಗಂಗಾ ಭಾಗೀರಥಿ’ ಮನೆಯನ್ನು ಬೆದ್ರಾಡಿ ಗಣಪತಿ ಭಟ್ಟರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತನ್ನ ಕಾರ್ಯಕ್ಷಮತೆಯಿಂದ ಕಲಾರಂಗವು ಸಮಾಜದ ವಿಶ್ವಾಸವನ್ನು

ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ. Read More »

ಯಕ್ಷ ಶಿಕ್ಷಣ ಸನಿವಾಸ ಶಿಬಿರ – 2025 ಸಮಾರೋಪ ಸಮಾರಂಭ

ಯಕ್ಷಗಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. – ಗಣಪತಿ ಕೆ. ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಒಂದು ವಾರದ ಯಕ್ಷಗಾನ ತರಬೇತಿ ಸನಿವಾಸ ಶಿಬಿರದ ಸಮಾರೋಪ ಸಮಾರಂಭವು 28.03.2025 ರಂದುಜರಗಿತು. ಉಡುಪಿ ವಿದ್ಯಾಂಗ ಉಪನಿರ್ದೇಶಕರಾದ ಗಣಪತಿ ಕೆ. ಯವರು ಶುಭಾಶಂಸನೆಯ ಮಾತುಗಳನ್ನಾಡುತ್ತಾ ಮೇಲಿನಂತೆ ಉಲ್ಲೇಖಿಸಿದರು. ಕೇವಲ ಪಠ್ಯ ಶಿಕ್ಷಣಕ್ಕಷ್ಟೇ ನಿಮ್ಮ ಮಕ್ಕಳನ್ನು ಸೀಮಿತಗೊಳಿಸದೆ ಇಂತಹ ಶಿಬಿರಗಳಲ್ಲಿ ಭಾಗವಹಿಸುವಂತೆ ಮಾಡಿ ಅವರ ಆತ್ಮ ವಿಶ್ವಾಸ, ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುವಂತೆ ಪಾಲಕರಿಗೆ

ಯಕ್ಷ ಶಿಕ್ಷಣ ಸನಿವಾಸ ಶಿಬಿರ – 2025 ಸಮಾರೋಪ ಸಮಾರಂಭ Read More »

ಯಕ್ಷಶಿಕ್ಷಣ ಸನಿವಾಸ ಶಿಬಿರ– 2025 ಉದ್ಘಾಟನೆ

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ,ಭೀಮ ಗೋಲ್ಡ್ ಪ್ರೈ.ಲಿ.,ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದುವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2025ನ್ನು 22.03.2025 ರಂದು ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು.ಯಕ್ಷಗಾನ ಶಿಕ್ಷಣ,ವಿದ್ಯಾರ್ಥಿಗಳ ಶೖಕ್ಷಣಿಕ ಕಲಿಕೆಗೆ ಪೂರಕವಾಗಿ ಧನಾತ್ಮಕ ಪರಿಣಾಮ ಬೀರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಯಕ್ಷಗಾನ ಪರಿಪೂರ್ಣ ಕಲಾಪ್ರಕಾರವಾಗಿದ್ದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣ

ಯಕ್ಷಶಿಕ್ಷಣ ಸನಿವಾಸ ಶಿಬಿರ– 2025 ಉದ್ಘಾಟನೆ Read More »

ವಿದ್ಯಾಪೋಷಕ್‍ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ

21.03.2025 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ವಿದ್ಯಾಪೋಷಕ್‍ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಸಮಾಲೋಚನ ಶಿಬಿರ ಜರಗಿತು. ಅದಮಾರು ಎಜುಕೇಶನಲ್ ಕೌನ್ಸಿಲ್‍ನ ಗೌರವ ಆಡಳಿತಾಧಿಕಾರಿಗಳಾದ ಡಾ. ಎ. ಪಿ. ಭಟ್ ಹಾಗೂ ಸಂಸ್ಥೆಯ ಕೋಶಾಧಿಕಾರಿಯಾದ ಪ್ರೊ. ಕೆ. ಸದಾಶಿವ ರಾವ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಖ್ಯಾತ ಲೆಕ್ಕಪರಿಶೋಧಕರಾದ ಗಿರಿಧರ್ ಕಾಮತ್ ಅವರು ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಬಗ್ಗೆಯೂ ಹಾಗೂ ವಿಜ್ಞಾನ ವಿದ್ಯಾರ್ಥಿಗಳಿಗೆ ತ್ರಿಶಾ ಪಿಯು ಕಾಲೇಜಿನ

ವಿದ್ಯಾಪೋಷಕ್‍ನ ದ್ವಿತಿಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ Read More »

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ.

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ‘ಜೀವನ ವಿದ್ಯಾ’ದ ಸಮಾರೋಪ ಸಮಾರಂಭ ಮಾರ್ಚ್ 3, ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಪಿ. ವಿ. ಭಂಡಾರಿಯವರು ಮಾತನಾಡಿ,ಶ್ರದ್ಧೆಯಿಂದ ಕಲಿಕೆ ಮುಂದುವರಿಸಿ.ನಿಮ್ಮ ಹಿಂದೆ ವಿದ್ಯಾಪೋಷಕ್ ಇದೆ.ಧೈರ್ಯದಿಂದ ಜೀವನವನ್ನು ಎದುರಿಸಿ. ಪಲಾಯನವಾದಿಗಳಾಗ ಬೇಡಿ. ಎಂದು ಕರೆಕೊಟ್ಟರು. ವೇದಿಕೆಯಲ್ಲಿ ಉದ್ಯಮಿ

ವಿದ್ಯಾಪೋಷಕ್‍ನ ಐದು ದಿನಗಳ ಜೀವನ ವಿದ್ಯಾ ಸನಿವಾಸ ಶಿಬಿರ ಸಮಾರೋಪ ಸಮಾರಂಭ. Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಯಕ್ಷಗಾನ ಕಲಾರಂಗದಲ್ಲಿ ಪ್ರಥಮ ಪಿಯುಸಿ ವಿದ್ಯಾಪೋಷಕ್ ವಿದ್ಯಾರ್ಥಿಗಳ ಸನಿವಾಸ ಶಿಬಿರ ನಡೆಯುತ್ತಿದ್ದು, ಕೊನೆಯ ದಿನವಾದ 03.03.2025 ರಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿಯವರು ಚಾಲನೆ ನೀಡಿದರು. ಪರಿಸರ ಇಂಜಿನಿಯರ್ ಶ್ರೀಮತಿ ಸ್ನೇಹಾ, ಆರೋಗ್ಯ ನಿರೀಕ್ಷಕರಾದ ಹರೀಶ್ ಬಿಲ್ಲವ ಮತ್ತು ಪ್ರಕಾಶ್ ಪ್ರಭು ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ,ಗಾಂಧಿ ಆಸ್ಪತ್ರೆಯ ವರಿಷ್ಠರಾದ ಡಾ. ಹರಿಶ್ಚಂದ್ರ, ಸಂಸ್ಥೆಯ ದಾನಿಗಳೂ ಮತ್ತು

ವಿದ್ಯಾಪೋಷಕ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ Read More »

We're currently hard at work gathering information and crafting content to bring you the best experience. Stay tuned for exciting updates!