Yakshagana Kalaranga

Past Events

ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022

ಯಕ್ಷಗಾನ ಕಲಾರಂಗ ಕಳೆದ 24 ವರ್ಷಗಳಿಂದ ಆಯೋಜಿಸುತ್ತಾ ಬಂದ ತಾಳಮದ್ದಲೆ ಸಪ್ತಾಹ ‘ಉತ್ತರ ರಾಮಾಯಣ’ವು ದಿನಾಂಕ 23-05-2022 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ತಾಳಮದ್ದಲೆ ನಮ್ಮ ಪುರಾಣಲೋಕವನ್ನು ಅನಾವರಣಗೊಳಿಸುವ ವಿಶಿಷ್ಟ ಕಲಾಪ್ರಕಾರ. ಅರ್ಥಧಾರಿಗಳು ಮೂಲ ಕೃತಿಗೆ ಚ್ಯುತಿ ಬಾರದಂತೆ ವಿಷಯ ಪ್ರತಿಪಾದಿಸಿ ಜನಮಾನಸಕ್ಕೆ ನಮ್ಮ ಪುರಾಣ ಸಂಪತ್ತನ್ನು ತಲುಪಿಸಬೇಕೆಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಜ್ಯೋತಿಷ್ಯ ವಿದ್ವಾನ್ ಕೆ. […]

ತಾಳಮದ್ದಲೆ ಸಪ್ತಾಹ ಉದ್ಘಾಟನೆ – 2022 Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 27 ಮತ್ತು 28ನೇ ಮನೆ ಹಸ್ತಾಂತರ – 2022

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಒಟ್ಟು ಐದು ಮನೆಗಳನ್ನು ನಿರ್ಮಿಸಿಕೊಡುತ್ತಿರುವ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಪ್ರಾಯೋಜಕತ್ವದ ಎರಡು ಮನೆಗಳ ಉದ್ಘಾಟನೆಯು 23-05-2022 ರಂದು ನೆರವೇರಿತು.ದ್ವಿತೀಯ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ ಗಂಗೊಳ್ಳಿಯ ಸ್ವಾತಿ ಖಾರ್ವಿ ಹಾಗೂ ದ್ವಿತೀಯ ಬಿ.ಕಾಂ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈತ್ತಿರುವ ವಡ್ಡರ್ಸೆಯ ಚೈತ್ರಾ ಮತ್ತು ರಕ್ಷಿತಾ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಾಗಿದ್ದು, ಇವರಿಗೆ ಸಂಸ್ಥೆ ನಿರ್ಮಿಸಿ ಕೊಟ್ಟ ಮನೆಗಳಾಗಿವೆ. ಗಂಗೊಳ್ಳಿಯ ಮನೆಯ ಉದ್ಘಾಟನೆಯನ್ನು ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 27 ಮತ್ತು 28ನೇ ಮನೆ ಹಸ್ತಾಂತರ – 2022 Read More »

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಕೊಡಮಾಡುವ ‘ಯಕ್ಷಗಾನ ಸಾಧಕ’ ಪ್ರಶಸ್ತಿ ಪ್ರದಾನ – 2022

22-05-2022 ರಂದು ಹಿರಿಯ ಯಕ್ಷಗಾನ ಕಲಾವಿದ, ಯಕ್ಷಗುರು, ಲೇಖಕ ತಾರಾನಾಥ ವೊರ್ಕಾಡಿಯವರಿಗೆ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಕೊಡಮಾಡುವ ‘ಯಕ್ಷಗಾನ ಸಾಧಕ’ ಪ್ರಶಸ್ತಿ ಪ್ರದಾನ ಸಮಾರಂಭ ಅರ್ಥಪೂರ್ಣವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಂಡಿತು. ಉದ್ಘಾಟನೆ, ‘ಗೋವಿಂದ ನಂದ ಮುಕುಂದ ಪಾಹಿ ದೇವಾ’ ಪ್ರಾತ್ಯಕ್ಷಿಕೆ, ‘ಲೇಖಕ-ಕವಿ ತಾರಾನಾಥ’ ವಿಚಾರಗೋಷ್ಠಿ, ‘ಕಲಾವಿದ-ನೃತ್ಯಗುರು ತಾರಾನಾಥ’ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಬಳಿಕ ಪ್ರಶಸ್ತಿ ಪ್ರದಾನ ಸರ್ವರಿಗೂ ನೆನಪಿನಲ್ಲಿಟ್ಟುಕೊಳ್ಳುವಂತೆ ಸೊಗಸಾಗಿ ಮೂಡಿಬಂತು.

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಕೊಡಮಾಡುವ ‘ಯಕ್ಷಗಾನ ಸಾಧಕ’ ಪ್ರಶಸ್ತಿ ಪ್ರದಾನ – 2022 Read More »

ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್‍ನ 24ನೇ ಮನೆ ಹಸ್ತಾಂತರ 20-03-2022

ಉಡುಪಿ : ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್ ಫಲಾನುಭವಿ ಅಕ್ಷಯ್ ಕುಮಾರ್ ಮತ್ತು ಅವನ ತಂದೆ ಯಕ್ಷಗಾನ ಹಿಮ್ಮೇಳವಾದಕ ಹೆರಂಜಾಲು ಬಾಲಕೃಷ್ಣ ಗಾಣಿಗ ಇವರಿಗೆ ನಾಗೂರಿನಲ್ಲಿ ನಿರ್ಮಿಸಿಕೊಟ್ಟ ಮನೆ ‘ಸಾಯಿಮಯಿ’ಯ ಹಸ್ತಾಂತರ ಕಾರ್ಯಕ್ರಮ 20-03-2022 ರಂದು ಜರಗಿತು. ಪ್ರಾಯೋಜಕರಾದ ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್.ಭಟ್, ಇವರು ಜ್ಯೋತಿಬೆಳಗಿಸಿ ಉದ್ಘಾಟಿಸಿ, ಈ ಮನೆಯಲ್ಲಿ ನೆಮ್ಮದಿಯಿಂದ ಬದುಕಿ, ದೊಡ್ಡ ಸಾಧನೆಮಾಡಿ, ಉಳಿದವರಿಗೆ ಆಸರೆಯಾಗಬೇಕೆಂದು ಅಕ್ಷಯನಿಗೆ ಕಿವಿಮಾತು ಹೇಳಿದರು. ಮುಖ್ಯ ಭ್ಯಾಗತರಾಗಿ ಆಗಮಿಸಿದ ಸಂಸ್ಥೆಯ ದಾನಿ ಪಿ.ಗೋಕುಲನಾಥ ಪ್ರಭು ಮಾತನಾಡಿ

ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್‍ನ 24ನೇ ಮನೆ ಹಸ್ತಾಂತರ 20-03-2022 Read More »

Kolyuru Vaibhava 2021

ಹೊಸದಾಖಲೆ ನಿರ್ಮಿಸಿದ ಕೋಳ್ಯೂರು ವೈಭವ ಡಾ. ಕೋಳ್ಯೂರು ರಾಮಚಂದ್ರ ರಾವ್ ಯಕ್ಷಗಾನರಂಗ ಕಂಡ ಅಪೂರ್ವ ಕಲಾಪ್ರತಿಭೆ. ಯಕ್ಷಗಾನ ಆಕಾಶದಲ್ಲಿ ಬೆಳಗಿದ ಹೊಳಪಿನ ತಾರೆ. ಸುಮಾರು ಆರು ದಶಕ ಯಕ್ಷಸಾಮ್ರಾಜ್ಯ ಆಳಿದ ಸಾಮ್ರಾಜ್ಞಿ. ಯೋಗ, ಯೋಗ್ಯತೆ, ಆಯುಷ್ಯ, ಆರೋಗ್ಯ ಇವೆಲ್ಲ ಏಕತ್ರ ಸೇರಿಕೊಂಡಿರುವ ಅಪರೂಪದ ಕಲಾವಿದ. ಅವರ ನವತ್ಯಬ್ದ ಸಂಭ್ರಮವನ್ನು ಉಡುಪಿಯ ಯಕ್ಷಗಾನ ಕಲಾರಂಗ, ಅವರ ಮಕ್ಕಳ ಪೂರ್ಣ ಸಹಕಾರದೊಂದಿಗೆ ವಿಶಿಷ್ಟವಾಗಿ ಆಯೋಜಿಸಿತು. ಅಕ್ಟೋಬರ್ 14ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರು ನಿರಂತರ ಒಂದು ತಿಂಗಳು

Kolyuru Vaibhava 2021 Read More »

Kolyuru Vaibhava Udgatane

‘ಕೋಳ್ಯೂರು ವೈಭವ’ ಉದ್ಘಾಟನೆ ಯಕ್ಷಗಾನದ ಶ್ರೇಷ್ಠ ಕಲಾಸಾಧಕರಾದ ಕೋಳ್ಯೂರಿಗೆ ತೊಂಭತ್ತು ತುಂಬಿದ ಶುಭಾವಸರದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಕೋಳ್ಯೂರು ವೈಭವದ ಉದ್ಘಾಟನಾ ಸಮಾರಂಭ 14-10-2021 ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸಂಪನ್ನಗೊಂಡಿತು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ತಿಂಗಳ ಪಯರ್ಂತ ನಡೆಯಲಿರುವ ಕಾರ್ಯಕ್ರಮಗಳ ಮತ್ತು ಕೋಳ್ಯೂರರ ಕುರಿತು ಸಮಗ್ರ ಪರಿಚಯ ಒಳಗೊಂಡಿರುವ ‘ಕ್ವೀನ್ ಆಫ್ ಯಕ್ಷಗಾನ’ ಜಾಲತಾಣವನ್ನು ಉದ್ಘಾಟಿಸಿದರು. ನಾವು ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸುವುದು ಸರಿಯಲ್ಲ. ಕಲೆ, ಕಲಾವಿದರ ಕ್ಷೇಮ ಚಿಂತನೆಯು

Kolyuru Vaibhava Udgatane Read More »

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಯಕ್ಷಗಾನ ಕಲಾರಂಗವು ಪ್ರತಿ ವರ್ಷ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಗೆ ಹಾಗೂ ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಅನುಕ್ರಮವಾಗಿ ಹಿರಿಯ ಅರ್ಥಧಾರಿಗಳಾದ ವಾಸುದೇವ ರಾವ್ ಸುರತ್ಕಲ್ ಹಾಗೂ ಉಮಾಕಾಂತ ಭಟ್ಟ ಕೆರೇಕೈ ಇವರಿಗೆ ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್ 26,

ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ Read More »

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ

ಉಡುಪಿ : ಮಂದಾರ್ತಿ ಮೇಳದ ಕಲಾವಿದ ಚಂದ್ರ ನಾಯ್ಕ ಹಾಗೂ ಮಕ್ಕಳಾದ ಯಕ್ಷಗಾನ ಕಲಾರಂಗದ ಉದ್ಯೋಗಿ ಸಂಗೀತಾ ಮತ್ತು ದ್ವಿತಿಯ ಪಿ.ಯು.ಸಿ ಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಗೀತಾ ಇವರ ಕುಟುಂಬಕ್ಕೆ, ಮೈಸೂರು ಮರ್ಕಂಟೈಲ್ ಕಂಪನಿ ಲಿ. ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ನೆರವಿನಿಂದ ಮಂದಾರ್ತಿಯಲ್ಲಿ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ದ ಹಸ್ತಾಂತರ ಕಾರ್ಯಕ್ರಮ ದಿನಾಂಕ 30-09-2021 ರಂದು ಸಂಪನ್ನಗೊಂಡಿತು. ಜ್ಯೋತಿ ಬೆಳಗಿಸಿ, ಮನೆಯನ್ನು ಉದ್ಘಾಟಿಸಿ ಮಾತನಾಡಿದ

ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!