Yakshagana Kalaranga

Past Events

ಯಕ್ಷಗಾನ ಕಲಾರಂಗದ 83 ನೆಯ ಮನೆ ಹಸ್ತಾಂತರ.

ಸಂಸ್ಥೆ ವಿದ್ಯಾಪೋಷಕ್ ಪ್ರಥಮ ಪಿ.ಯು. ವಿದ್ಯಾರ್ಥಿನಿ,ಉಳ್ಳೂರಿನ ತೃಪ್ತಿಗೆ (ಶ್ರೀಮತಿ ಲತಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ) ಶ್ರೀಮತಿ ದೀಪಾ ಮತ್ತು ಶ್ರೀ ಅರುಣ ಕುಮಾರ್ ಇವರು 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಟ್ಟ ‘ಶ್ರೀ ಸಿದ್ಧಿವಿನಾಯಕ’ ಮನೆಯನ್ನು 4.1.2026 ರಂದು ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಶ್ರೀ ಸಿದ್ಧಿವಿನಾಯಕ ಕ್ಯಾಶ್ಯು ಇಂಡಸ್ಟ್ರೀಸ್ ಮಾಲಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ ನಾನೇನು ದೊಡ್ಡ ಶ್ರೀಮಂತನಲ್ಲ. ಸಾಲದಲ್ಲೆ ಮನೆ ಕಟ್ಟಲು ಆರಂಭಿಸಿದ್ದು, ನನ್ನ ನೂತನ […]

ಯಕ್ಷಗಾನ ಕಲಾರಂಗದ 83 ನೆಯ ಮನೆ ಹಸ್ತಾಂತರ. Read More »

ಯಕ್ಷಗಾನ ಕಲಾರಂಗದ 82ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವರ್ಷಿತಾ (ಶ್ರೀಮತಿ ಮಂಜುಳಾ ಮತ್ತು ಶ್ರೀ ಕೇಶವ ಇವರ ಪುತ್ರಿ) ಇವಳಿಗೆ ಪೆರ್ಣಂಕಿಲದ ವರ್ವಾಡಿಯಲ್ಲಿ ಬೆಂಗಳೂರಿನ ಟೆಕ್ಸೆಲ್ ಮಾರ್ಕೆಟಿಂಗ್ ಕಾರ್ಪೊರೇಶನ್ ಪ್ರವರ್ತಕರಾದ ಶ್ರೀ ಹರೀಶ್ ರಾಯಸ್ ಅವರು ತಮ್ಮ 60ರ ವರ್ಷಾಚರಣೆಯ ಸಂದರ್ಭದಲ್ಲಿ 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಹರಿಗುರು ಕೃಪಾ’ ಮನೆಯನ್ನು 20.12.2025 ರಂದು ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದ ಕಾರ್ಯಕರ್ತರ ಸಾಮಾಜಿಕ ಬದ್ಧತೆ, ಕೃತಜ್ಞತಾ ಮನೋಭಾವ ಸಾಮಾಜಿಕವಾಗಿ ಕೆಲಸ ಮಾಡುವವರಿಗೆ ಮಾದರಿಯಾಗಿದೆ.

ಯಕ್ಷಗಾನ ಕಲಾರಂಗದ 82ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗದ 81ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ (ಶ್ರೀಮತಿ ಶ್ಯಾಮಲಾ ಮತ್ತು ಶ್ರೀ ದೇವೇಂದ್ರ ಇವರ ಪುತ್ರ) ಇವನಿಗೆ ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ. ರಾಜೇಶ್ವರೀ ಜಿ. ಭಟ್ ಅವರು ತಮ್ಮ ತೀರ್ಥರೂಪರಾದ ಕೆ. ರಾಮಕೃಷ್ಣ ರಾವ್ ಅವರ ಸ್ಮರಣೆಯಲ್ಲಿ, 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಜಾನಕೀರಾಮ’ ಮನೆಯನ್ನು 02.12.2025 ರಂದು ಜಾನಕಿ ಕೆ. ಆರ್. ರಾವ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಡಾ. ರಾಜೇಶ್ವರೀ ಜಿ. ಭಟ್ ಅವರು ನಮ್ಮ

ಯಕ್ಷಗಾನ ಕಲಾರಂಗದ 81ನೆಯ ಮನೆ ಹಸ್ತಾಂತರ Read More »

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2025

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ 23.11.2025 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು.ವಿದ್ವಾಂಸರೊಬ್ಬರು ಇತ್ತೀಚಿಗೆ ಮಾಡಿದ ಹೇಳಿಕೆಯೊಂದನ್ನು ಉಲ್ಲೇಖಿಸಿ ಕಲಾವಿದರು ಇಂತಹ ಕ್ಷುಲ್ಲಕ ಮಾತುಗಳಿಗೆ ಅಧೀರರಾಗಬೇಕಿದ್ದಿಲ್ಲ, ಶತಮಾನಗಳಿಂದಲೂ ಸಮಾಜವನ್ನು ತಿದ್ದುವಲ್ಲಿ ಯಕ್ಷಗಾನ ಕಲೆ ಗಣನೀಯಪಾತ್ರ ವಹಿಸಿದೆ. ಯಕ್ಷಗಾನ ಕಲಾರಂಗ ಸಾಮಾಜಿಕ ಸಾಂಸ್ಕøತಿಕ ಕೆಲಸಗಳನ್ನು ಮಾಡುವ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶಾಸಕ ಯಶ್‍ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2025 Read More »

ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ.

ಸಂಸ್ಥೆಯು ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕಮಲಶಿಲೆ ಮೇಳದ ಕಲಾವಿದರೂ ಹಾಗೂ ಯಕ್ಷಶಿಕ್ಷಣದ ಗುರುಗಳೂ ಆದ ವಿಘ್ನೇಶ್ ಪೈ ಇವರಿಗೆ ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ,ಉಡುಪಿ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರರಾಗಿದ್ದ, ಪುತ್ರಾಯ ಕೃಷ್ಣ ಭಟ್ ಮತ್ತು ಅವರ ಧರ್ಮಪತ್ನಿ ಗಂಗಮ್ಮ ಇವರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ಮನೆ ‘ಗಂಗಾಕೃಷ್ಣ’ವನ್ನು 29.10.2025 ರಂದು ಅವರ ಸುಪುತ್ರ ಪಿ. ದಾಮೋದರ ಭಟ್ ಉದ್ಘಾಟಿಸಿದರು.ಹಿರಿಯ ಯಕ್ಷಗಾನ ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈಯವರು

ಯಕ್ಷಗಾನ ಕಲಾರಂಗದ 80 ನೆಯ ಮನೆ ಹಸ್ತಾಂತರ. Read More »

ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ.

ಅಕ್ಟೋಬರ್ 05, 2025ರಂದು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 21ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆಯ ಸಹಕುಲಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್ ಅªರು ಯಕ್ಷಗಾನ ಕಲಾರಂಗದ ನಿರಂತರ ಸಾಧನೆಯನ್ನು ಶ್ಲಾಘಿಸಿ, ಮಾಹೆ ಸದಾ ನಿಮ್ಮೊಂದಿಗಿದೆ. ನಿಮ್ಮ

ವಿದ್ಯಾಪೋಷಕ್ 21ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ. Read More »

ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ

ಪ್ರತ್ಯರ್ಪಣಕ್ಕಿಂತಲು ದೊಡ್ಡ ಧರ್ಮವಿಲ್ಲ – ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿ : ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದ್ದು, ಈ ವರ್ಷ 1234 ವಿದ್ಯಾರ್ಥಿಗಳಿಗೆ 1,38,68,000/- ರೂಪಾಯಿ ವಿದ್ಯಾರ್ಥಿವೇತನವನ್ನು ಅಕ್ಟೋಬರ್ 05, 2025 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿತರಿಸಲಾಯಿತು. ಪ್ರತ್ಯರ್ಪಣ ಗುಣದಿಂದಲೇ ಜಗತ್ತಿನ ಚಲನೆ ನಡೆಯುತ್ತದೆ. ಪಡೆದ ಸಹಾಯವನ್ನು ದಾನದ ರೂಪದಲ್ಲಿ ಮುಂದಿನ

ವಿದ್ಯಾಪೋಷಕ್ ವಿನಮ್ರ ಸಹಾಯಧನ – 2025 – ಸಮಾರೋಪ ಸಮಾರಂಭ Read More »

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ.

ವಿದ್ಯಾಪೋಷಕ್‍ನ ಇಂಜಿನೀಯರ್, ಮೆಡಿಕಲ್ ಹಾಗು ಸ್ನಾತಕೋತ್ತರದ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸಮಾವೇಶವು ಸಂಸ್ಥೆಯ ಐವೈಸಿ ಸಭಾಭವನದಲ್ಲಿ 24.08.2025 ರಂದು ಜರಗಿತು.ಇದೇ ಸಂದರ್ಭದಲ್ಲಿ ಸಂಸ್ಥೆಯ 50ನೇ ವರ್ಷದ ವಾರ್ಷಿಕ ಸಂಚಿಕೆಯನ್ನು ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರೂ ಹಾಗೂ ಕೋಟೇಶ್ವರದ ಸಹನಾ ಕನ್ವೆನ್ಶನ್‍ನ ಮಾಲಕರಾದ ಸುರೇಂದ್ರ ಶೆಟ್ಟಿಯವರು ಉದ್ಘಾಟನೆಗೊಳಿಸಿ ಸಂಸ್ಥಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ದಾನಿಗಳಾದ ಡಾ. ಸುದರ್ಶನಮೂರ್ತಿ, ಲಕ್ಷ್ಮೀ ಎಸ್. ಮೂರ್ತಿ, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಆರ್.ಹೆಗಡೆ, ಡಾ. ಎಂ.ಎಸ್. ರಾವ್, ಡಾ.

ಕಲಾಂತರಂಗ – 2024-25 ಬಿಡುಗಡೆ ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾವೇಶ. Read More »

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ (ಶ್ರೀಮತಿ ಜ್ಯೋತಿ ಮತ್ತು ಶ್ರೀ ಭಾಸ್ಕರ ಪೂಜಾರಿ ಇವರ ಪುತ್ರ) ಇವನಿಗೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಡಾ. ಮಹಾಬಲೇಶ್ವರ ರಾವ್ ಅವರು ತಮ್ಮ ಮಾತಾ – ಪಿತರಾದ ಮಣೂರು ವಿಶ್ವನಾಥ ಮಯ್ಯ ಮತ್ತು ಸರಸ್ವತಿ ಇವರ ಸ್ಮರಣೆಯಲ್ಲಿ, 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ವಿಶ್ವಸರಸ್ವತಿ’ಯನ್ನು 17.08.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತನ್ನ ಬಾಲ್ಯದ ಕಷ್ಟದ ದಿನಗಳು ಮತ್ತು ತಂದೆ ತಾಯಿಗಳನ್ನು

ಯಕ್ಷಗಾನ ಕಲಾರಂಗದ 79ನೆಯ ಮನೆ ಹಸ್ತಾಂತರ Read More »

We're currently hard at work gathering information and crafting content to bring you the best experience. Stay tuned for exciting updates!