Yakshagana Kalaranga

Past Events

ಕಿಶೋರ ಯಕ್ಷಗಾನ ಸಂಭ್ರಮ – 2024 ಬೈಂದೂರು ಉದ್ಘಾಟನೆ ಮತ್ತು ಸಮಾರೋಪ

30-12-2024 ರಂದು ಬೈಂದೂರಿನಲ್ಲಿ ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆಗೊಂಡಿತು. ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಸಂಜೀವ ಗಾಣಿಗರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಉದ್ಯಮಿಗಳಾದ ದಯಾನಂದ ಬಾಸ್ ಬೈಲ್, ದೀನಪಾಲ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ, ಸುರೇಶ ಬಚವಾಡಿ,ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ, ಹೆಚ್. ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ ಭಾಗವಹಿಸಿದ್ದರು. ಬೈಂದೂರಿನ ಯಕ್ಷಗುರುಕುಲದ ಸಂಚಾಲಕರಾದ ಸುನಿಲ್ ಹೊಲಾಡು ಸ್ವಾಗತಿಸಿದ ಕಾರ್ಯಕ್ರಮವನ್ನು […]

ಕಿಶೋರ ಯಕ್ಷಗಾನ ಸಂಭ್ರಮ – 2024 ಬೈಂದೂರು ಉದ್ಘಾಟನೆ ಮತ್ತು ಸಮಾರೋಪ Read More »

ಯಕ್ಷನಿಧಿ ಡೈರಿ-2025 ಬಿಡುಗಡೆ.

ಯಕ್ಷಗಾನ ಕಲಾರಂಗವು ಪ್ರತೀವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, 2025ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು 30-12-2024 ರಂದು ಬಿಡುಗಡೆಗೊಳಿಸಿದರು. ಧರ್ಮಸ್ಥಳ ಮೇಳದ ಕಲಾವಿದ ಧರ್ಮಸ್ಥಳ ಚಂದ್ರಶೇಖರ ಮತ್ತು ಕಮಲಶಿಲೆ ಮೇಳದ ಕಲಾವಿದ ನಾರಾಯಣ ಉಳ್ಳೂರರಿಗೆ ಸಾಂಕೇತಿಕವಾಗಿ ವಿತರಿಸಿದರು.ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್‍ಗೆ ಪರ್ಯಾಯ ಮಠದ ವತಿಯಿಂದ 10 ಲಕ್ಷ ರೂಪಾಯಿಯ ಕೊಡುಗೆಯನ್ನು

ಯಕ್ಷನಿಧಿ ಡೈರಿ-2025 ಬಿಡುಗಡೆ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ

19-12-2024 ರಂದು ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವಠಾರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮವನ್ನು ಉದ್ಯಮಿಗಳಾದ ಎಚ್. ಶಂಕರ್ ಹೆಗ್ಡೆ, ಜನ್ನಾಡಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಇಂಜಿನಿಯರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿ, ಹಾಲಾಡಿ ವಲಯ ಭಜನಾ ಮಂಡಳಿಗಳ ಅಧ್ಯಕ್ಷರಾದ ಶ್ರೀಮತಿ ಸುಶೀಲಾ ಬಿ. ಶೆಟ್ಟಿ, ಪಂಚಾಯತ್ ಪಿ.ಡಿ.ಒ. ಶ್ರೀಮತಿ ರೇಖಾ ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ – 2024 ಬಿದ್ಕಲ್ ಕಟ್ಟೆ ಉದ್ಘಾಟನೆ ಮತ್ತು ಸಮಾರೋಪ Read More »

ಯಕ್ಷಗಾನ ಕಲಾರಂಗದ 60ನೇ ಮನೆ ಹಸ್ತಾಂತರ.

ಸುವರ್ಣ ವರ್ಷವನ್ನು ಆಚರಿಸುತ್ತಿರುವ, ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾ ಪೋಷಕ್‍ನ ದ್ವಿತೀಯ ಪಿ.ಯು.ಸಿ.ಯ ವಿದ್ಯಾರ್ಥಿನಿ ಪ್ರಮಿತಾ ಇವಳಿಗೆ ಕುಂದಾಪುರ ತಾಲೂಕಿನ ಮೂಡುಮುಂದದ ಬೆಳ್ಳಾಲದಲ್ಲಿ ಶ್ರೀಮತಿ ಜಯಲಕ್ಷ್ಮೀ ಮತ್ತು ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಎ.ಜಿ.ಎಂ.ಶ್ರೀ ಅಶೋಕ್ ನಾಯಕ್ ಇವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ 60ನೆಯ ಮನೆ ‘ಲಕ್ಷ್ಮೀ ಕುಟೀರ’ 17-12-2024 ರಂದು ಉದ್ಘಾಟನೆಗೊಂಡಿತು. ಅಶೋಕ್ ನಾಯಕ್ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ನಾಯಕರು, ಇಂದು ನನ್ನ ಮಡದಿಯ 68ನೇ ಜನ್ಮದಿನ. ಅಲ್ಲದೆ ತನಗೆ 70 ವರ್ಷ ಪೂರ್ತಿಗೊಂಡ

ಯಕ್ಷಗಾನ ಕಲಾರಂಗದ 60ನೇ ಮನೆ ಹಸ್ತಾಂತರ. Read More »

ವಿದ್ಯಾಪೋಷಷಕ್ 59 ಮನೆ ಹಸ್ತಾಂತರ.

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ಸಾತ್ವಿಕ್ ವೈ. ಪೂಜಾರಿ ಇವನಿಗೆ ಉಡುಪಿ ಕಲ್ಯಾಣಪುರದ ಕೆಳನೇಜಾರಿನಲ್ಲಿ ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರಿಶ್ಚಂದ್ರ ಇವರು, ಸುಮಾರು ಎರಡೂವರೆ ದಶಕಗಳ ಕಾಲ ತನಗೆ ಆಶ್ರಯ ನೀಡಿ,ಬೆಳೆಸಿದ ಉಡುಪಿಯ “ಮಿತ್ರ ಸಮಾಜ”ದ ಸಂಸ್ಥಾಪಕರಾದ ಕೀರ್ತಿಶೇಷ ಎನ್. ಗೋಪಾಲ ಹೊಳ್ಳ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಹೊಳ್ಳ ಇವರ ಗೌರವಾರ್ಥ ನಿರ್ಮಿಸಿದ ನೂತನ ಮನೆ “ಸತ್ಯಸದನ” ರಂದು 16.12.2024 ಉದ್ಘಾಟನೆಗೊಂಡಿತು. ಡಾ.ಹರಿಶ್ಚಂದ್ರ ಅವರು

ವಿದ್ಯಾಪೋಷಷಕ್ 59 ಮನೆ ಹಸ್ತಾಂತರ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ,ಕಾಪು ವಿಧಾನ ಸಭಾ ವ್ಯಾಪ್ತಿಯ ಮೂರು ಶಾಲೆಗಳ ಪ್ರದರ್ಶನಗಳು ಹಿರಿಯಡಕ ವೀರಭದ್ರ ದೇವಳದ ವಠಾರದಲ್ಲಿ ನಡೆಯಲಿದ್ದು ರಂದು 18.12.24 ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಉದ್ಯಮಿ ನಟರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಪೋಷಕ ಶ್ರೀನಿವಾಸ ರಾವ್,ಪ್ರಾಯೋಜಕರಾದ ವೈದಿಕರಾದ ಸ್ಕಂದ ಗಂಪು ಸುಬ್ರಹ್ಮಣ್ಯ ಆಚಾರ್ಯ ಮತ್ತು ಸೆಲ್ಕೊದ ಸುಬ್ರಹ್ಮಣ್ಯರು ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಯು. ಎಸ್. ರಾಜಗೋಪಾಲ ಆಚಾರ್ಯ,

ಕಿಶೋರ ಯಕ್ಷಗಾನ ಸಂಭ್ರಮ – 2024 ಹಿರಿಯಡಕ ಉದ್ಘಾಟನೆ ಮತ್ತು ಸಮಾರೋಪ Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಶಿರ್ವ ಉದ್ಘಾಟನೆ ಮತ್ತು ಸಮಾರೋಪ

ಶಿರ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ 17-12-2024 ರಂದು ಮಹಿಳಾ ಸೌಧದ ಸಭಾಂಗಣದಲ್ಲಿ ಜರಗಿತು.ಶೀರ್ವ ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿಗಳಾದಂತಹ ಭಾಸ್ಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಭಾಗವಹಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ಪ್ರಮಾಣ ಪತ್ರ ಮತ್ತು ಗುಂಪು ಫೋಟೋ ನೀಡಿದರು. ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರ್ ಪ್ರಸಾದ್ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠಲ

ಕಿಶೋರ ಯಕ್ಷಗಾನ ಸಂಭ್ರಮ – 2024 ಶಿರ್ವ ಉದ್ಘಾಟನೆ ಮತ್ತು ಸಮಾರೋಪ Read More »

ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ – 2024 ಉದ್ಘಾಟನೆ ಮತ್ತುಸಮಾರೋಪ.

ಉಡುಪಿ : ನವೆಂಬರ್ 30 ರಿಂದ ಡಿಸೆಂಬರ್ 14, 2024ರ ವರೆಗೆ ಉಡುಪಿ ಆಸುಪಾಸಿನ 27 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ – 2024, 30.11.2024 ರಂದು ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಉದ್ಘಾಟಿಸಿ, ವಿಶ್ವದಾದ್ಯಂತ ಸಾವಿರಾರು ಮಂದಿ ನಲಿದ, ನರ್ತಿಸಿದ, ಹಾಡಿದ, ಕಲೆಯನ್ನು ಪ್ರದರ್ಶಿಸಿದ ಈ ವೇದಿಕೆಯಲ್ಲಿ ಮಕ್ಕಳು ಕುಣಿದಾಡುವುದು ಕೃಷ್ಣನಿಗೆ ಬಹಳ ಸಂತಸದ ವಿಚಾರ. ಯಕ್ಷಶಿಕ್ಷಣ ಒಂದು ದೇಶಕ್ಕೆ ಮಾದರಿಯಾದಂತಹ ಸಂಸ್ಥೆ. ಈ ಅಭಿಯಾನ

ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ – 2024 ಉದ್ಘಾಟನೆ ಮತ್ತುಸಮಾರೋಪ. Read More »

ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ

ಡಿಸೆಂಬರ್ 20 ರಿಂದ 23ರ ತನಕ,ಎಂಟು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಾಳದ ವಠಾರದಲ್ಲಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು 20-12-2024 ರಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಜಿ.ಶಂಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ, ಕ್ಷೇತ್ರ ಆಡಳಿತ ಅಧ್ಯಕ್ಷರಾದ ಗಿರಿಧರ ಸುವರ್ಣ,ಮಹಾಜನ ಸಂಘದ ಸದಸ್ಯರಾದ ಗುಂಡು ಬಿ.ಅಮೀನ್, ಕೋಶಾಧಿಕಾರಿ ಸುಧಾಕರ ಕುಂದರ್ ಅಭ್ಯಾಗತರಾಗಿ ಭಾಗವಹಿಸಿದ್ದರು.

ಕಿಶೋರ ಯಕ್ಷಗಾನ ಸಂಭ್ರಮ – 2024 ಉಚ್ಚಿಲ ಉದ್ಘಾಟನೆ ಮತ್ತು ಸಮಾರೋಪ Read More »

We're currently hard at work gathering information and crafting content to bring you the best experience. Stay tuned for exciting updates!