ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 61 ನೇ ಮನೆ ಉದ್ಘಾಟನೆ.
ಯಕ್ಷಗಾನ ಕಲಾರಂಗ ಕಾರ್ಕಳದ ಪರಪ್ಪಾಡಿಯಲ್ಲಿ ವಿದ್ಯಾಪೋಷಕ್ ನ ಪ್ರಥಮ ಪಿ.ಯು. ವಿದ್ಯಾರ್ಥಿ ಪ್ರಶಾಂತನಿಗೆ ನಿರ್ಮಿಸಿದ ಮನೆಯ ಪ್ರಾಯೋಜಕತ್ವ ವಹಿಸಿ, ತನ್ನ ಪತ್ನಿಯ ನೆನಪಿಗೆ ಸಮರ್ಪಿಸಿದ, ಸುರತ್ಕಲ್ ನ ಕುಮಾರಚಂದ್ರ ರಾವ್ ‘ಜಯಲಕ್ಷ್ಮಿ’ ಮನೆಯನ್ನು 04.01.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪರೋಪಕಾರಿಯಾಗಿ ಬಾಳಿದ ನನ್ನ ಮಡದಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಳು. ಈ ಮನೆ ನಿರ್ಮಿಸುವ ಮೂಲಕ ಆಕೆಯ ಸಂಕಲ್ಪ ನೆರವೇರಿಸಿದಂತಾಯಿತು ಎಂದು ಈ ಸಂದರ್ಭದಲ್ಲಿ ನುಡಿದರು. ಅಧ್ಯಕ್ಷತೆ ವಹಿಸಿದ್ದ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಮಾತನಾಡಿ, […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 61 ನೇ ಮನೆ ಉದ್ಘಾಟನೆ. Read More »