Yakshagana Kalaranga

Past Events

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ 17.11.2024 ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ಆರ್.ಎಲ್ ಭಟ್- ವಾರಿಜಾಕ್ಷಿ ಆರ್ ಭಟ್ ಗೌರವಾರ್ಥ ಅವರ ಸುಪುತ್ರ ಹರಿಪ್ರಸಾದ್ ಭಟ್ ಪ್ರಾಯೋಜಿಸಿದ ಬಣ್ಣದ ಕೋಣೆಯನ್ನು ಉದ್ಘಾಟಿಸಿದರು. […]

ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ – 2024 Read More »

ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ.

ವಿದ್ಯಾಪೋಷಕ್ ವಿದ್ಯಾರ್ಥಿನಿ ಸೌಜನ್ಯಾ (ತೃತೀಯ ಇಂಜಿನೀಯರ್) ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ನಿರ್ಮಿಸಲಿರುವ ಮನೆಗೆ 28-10-2024 ರಂದು ಶಿರ್ವದ ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರು ಶಿಲಾನ್ಯಾಸಗೈದರು. ಇಂದು ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರಿಗೆ 60ನೇ ಹುಟ್ಟುಹಬ್ಬ ಹಾಗೂ ವಿವಾಹದ 30ನೇ ವರ್ಷವಾಗಿದ್ದು, ಇದನ್ನು ಓರ್ವ ಪ್ರತಿಭಾನ್ವಿತ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಗೆ ಮನೆ ನಿರ್ಮಿಸಿಕೊಟ್ಟು ಅರ್ಥಪೂರ್ಣವಾಗಿ ಆಚರಿಸಲು ಸಂಕಲ್ಪಿಸಿದ್ದು, ಇನ್ನೆರಡು ತಿಂಗಳಲ್ಲಿ ಈ ಮನೆಯನ್ನು ಪೂರ್ಣಗೊಳಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದರು.

ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ. Read More »

ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ.

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿಯರಾದ ಪ್ರಥಮ ಬಿ. ಕಾಂ. ನ ಸಂಗೀತಾ ಹಾಗೂ ದ್ವಿತೀಯ ಪಿ.ಯು.ಸಿಯ ಸುಪ್ರೀತಾ ಇವರಿಗೆ ಬ್ರಹ್ಮಾವರ ತಾಲೂಕಿನ ಜಾನುವಾರುಕಟ್ಟೆಯಲ್ಲಿ ಶಾರದಾ ಮತ್ತು ಪಾಂಡೇಶ್ವರ ರಾಮರಾಯರ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ರೂ.7ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಶಾರದಾರಾಮ 26.10.2024ರಂದು ಶಾರದಾ ಕಾರಂತರ 50ನೇ ಪುಣ್ಯತಿಥಿಯ ದಿನ ಉದ್ಘಾಟನೆಗೊಂಡಿತು. ಶಾರದಾ ರಾಮ ಕಾರಂತರ ಮಕ್ಕಳಾದ ಪಿ. ಗೋವಿಂದರಾಜ ಕಾರಂತ, ಪಿ. ವಾಸುದೇವ ಕಾರಂತ, ಜಯಲಕ್ಷ್ಮೀ ಉಪಾಧ್ಯ, ಸೀತಾಲಕ್ಷ್ಮೀ ಜಿ.ರಾವ್ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಯಕ್ಷಗಾನ ಕಲಾರಂಗದ 57ನೆಯ ಮನೆಯ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗದ 56ನೆಯ ಮನೆಯ ಉದ್ಘಾಟನೆ.

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಇವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಚಂದ್ರಿಕಾ ನಿಲಯ 18.10.2024ರಂದು ಉದ್ಘಾಟನೆಗೊಂಡಿತು. ವೇ. ಮೂ ಕಡಂದಲೆ ಕೆ.ವಿ.ಕೃಷ್ಣ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ವಿದ್ವಾನ್ ಪಂಜ ಭಾಸ್ಕರ ಭಟ್ – ಶ್ರೀಮತಿ ಚಂದ್ರಿಕಾ ಭಾಸ್ಕರ ಭಟ್ ದಂಪತಿಗಳು ಅವರ ಸುಪುತ್ರ ಶ್ರೀವತ್ಸ,ಸೊಸೆ ಕೌಸಲ್ಯಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಶಾಸಕ

ಯಕ್ಷಗಾನ ಕಲಾರಂಗದ 56ನೆಯ ಮನೆಯ ಉದ್ಘಾಟನೆ. Read More »

ಯಕ್ಷಗಾನ ಕಲಾರಂಗದ 55ನೆಯ ಮನೆಯ ಉದ್ಘಾಟನೆ.

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿಗಳಾದ ಪ್ರಥಮ ಪಿ.ಯು.ಸಿ.ಯ ಶ್ರೀನಿಧಿ ಹಾಗೂ ಪ್ರಥಮ ಬಿ.ಇ.ಯ ಭೂಮಿಕಾ ಸಹೋದರಿಯರಿಗೆ ಬ್ರಹ್ಮಾವರ ತಾಲೂಕಿನ ಹೇರಾಡಿಯ ಸಂಕಾಡಿಯಲ್ಲಿ ಶ್ರೀ ಪಣಂಬೂರು ವಾಸುದೇವ ಐತಾಳ್ ಇವರು ತಮ್ಮ 60ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪ್ರಾಯೋಜಿಸಿದ ನೂತನ ಮನೆ ‘ಕೃಪಾರಂಗ’ 12.10.2024ರಂದು ಉದ್ಘಾಟನೆಗೊಂಡಿತು. ಶ್ರೀ ಪಣಂಬೂರು ವಾಸುದೇವ ಐತಾಳ್ ಶ್ರೀಮತಿ ಮೀನಾಕ್ಷಿ ವಿ. ಐತಾಳ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸಹೋದರಿ ಶ್ರೀಮತಿ ಜಯಶ್ರೀ ಉಪಸ್ಥಿತರಿದ್ದರು. ಕಲಾರಂಗ ವಿಶ್ವಾಸಾರ್ಹತೆ ಮತ್ತು ಸಮಾಜ ಪ್ರೀತಿಯಿಂದ

ಯಕ್ಷಗಾನ ಕಲಾರಂಗದ 55ನೆಯ ಮನೆಯ ಉದ್ಘಾಟನೆ. Read More »

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ಕಾರ್ಯಕ್ರಮ – 2024

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ. ಸೆಪ್ಟೆಂಬರ್ 29, 2024 ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 20ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕಿರಿಯ ಸ್ವಾಮೀಜಿ ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತರಿದ್ದರು. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಮಣಿಪಾಲ ಮಾಹೆಯ ಉಪಕುಲಪತಿಗಳಾದ ಲೆ. ಜ. (ಡಾ.) ಎಂ.

ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ಕಾರ್ಯಕ್ರಮ – 2024 Read More »

ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ

ಯಕ್ಷಶಿಕ್ಷಣ ಟ್ರಸ್ಟ್( ರಿ)ಉಡುಪಿ,ಇವರ ಸಹಕಾರದಿಂದ ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಅಗಸ್ಟ್ 8 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದಾನಿಗಳಾದ ಸುಜಿತ್ ಎಸ್. ಅಮೀನ್ ರವರು ನೆರವೇರಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ನ ಸದಸ್ಯರಾದ ನಾರಾಯಣ ಎಂ.ಹೆಗಡೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.ಯಕ್ಷಗಾನ ಗುರುಗಳಾದ ಬಿ. ಕೇಶವ್ ರಾವ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸುಜಿತ್ ಎಸ್.ಅಮೀನ್ ರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ

ಮಲ್ಪೆಯ ಸ.ಪ.ಪೂ.ಕಾಲೇಜಿನಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ Read More »

“ಕಲಾಂತರಂಗ 2023-24” ಬಿಡುಗಡೆ.

ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ”ಕಲಾಂತರಂಗ 2023-24″ವನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ

“ಕಲಾಂತರಂಗ 2023-24” ಬಿಡುಗಡೆ. Read More »

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿಪ್ರಶಸ್ತಿ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರಗಿತು. ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ,ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವೀಕರಿಸಿದರು.‌ಕಟೀಲು ಕ್ಷೇತ್ರದ

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ Read More »

We're currently hard at work gathering information and crafting content to bring you the best experience. Stay tuned for exciting updates!