Yakshagana Kalaranga

Upcoming Events

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ.

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12, 2025 ಶನಿವಾರದಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯು ಉಪಾಧ್ಯಕ್ಷರಾದ ಎಸ್. ವಿ. ಭಟ್ ಸ್ವಾಗತಿಸುವುದರ ಮೂಲಕ ಪ್ರಾರಂಭವಾಯಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಅನುಕ್ರಮವಾಗಿ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಮಾಡಿದರು. ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ […]

ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ. Read More »

ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶನ ಸಮಾವೇಶವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ 08.07.2025ರಂದು ಜರಗಿತು. ಅದಮಾರು ಶಿಕ್ಷಣ ಸಂಸ್ಥೆಗಳ ಗೌರವ ಆಡಳಿತಾಧಿಕರಿಗಳಾದ ಡಾ. ಎ. ಪಿ. ಭಟ್ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸನ್ನಡತೆಯನ್ನು ಮೈಗೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಹಿರಿಯ ಉದ್ಯಮಿ ಮಡಾಮಕ್ಕಿ ಶಶಿಧರ ಶೆಟ್ಟಿಯವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಿಎ ಅರುಣ್ ನಾಯಕ್ ಅವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಹುಬ್ಬಳ್ಳಿಯ

ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. Read More »

ತೆಂಕುತಿಟ್ಟು ಯಕ್ಷಗಾನ -2025

ಯಕ್ಷಗಾನ ಕಲಾರಂಗವು ತನ್ನ ಸದಸ್ಯರಿಗೆ ಕಳೆದ ಮೂರು ವರ್ಷಗಳಿಂದ ಜುಲೈ ತಿಂಗಳಲ್ಲಿ ನಡೆಸುತ್ತಾ ಬಂದ ಮಳೆಗಾಲದ ಎರಡು ಯಕ್ಷಗಾನಗಳಲ್ಲಿ ಒಂದು ಪ್ರದರ್ಶನ 06.07.2025 ರಂದು ಜರಗಿತು. ಪೃಥ್ವಿರಾಜ್ ಕವತ್ತಾರ್ ರವರ ಪರಿಕಲ್ಪನೆ ಮತ್ತು ಸಮಗ್ರ ನಿರ್ದೇಶನದಲ್ಲಿ ಸಾಂಪ್ರದಾಯಿಕ ಪೂರ್ವರಂಗ ಸಹಿತ ಶ್ರೀದೇವಿ ಮಹಾತ್ಮೆ ಸುಂದರವಾಗಿ ಪ್ರದರ್ಶನಗೊಂಡಿತು.

ತೆಂಕುತಿಟ್ಟು ಯಕ್ಷಗಾನ -2025 Read More »

ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ.

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾ ಪೋಷಕ್ ನ 220 ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಸಮಾವೇಶ ಇಂದು ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್(ಐ.ವೈ.ಸಿ.)ನಲ್ಲಿ ಜರುಗಿತು. ಹುಬ್ಬಳ್ಳಿಯ ಮೈಲೈಫ್ ಸಂಸ್ಥಾಪಕ ಪ್ರವೀಣ್ ವಿ. ಗುಡಿ ಅವರು ಪ್ರೇರಕರಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿ. ಇ. ಟಿ ಬರೆದ ಇಂಜಿನಿಯರಿಂಗ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಡಾ.ಶ್ರುತಕೀರ್ತಿರಾಜ್ ವಿಸ್ತೃತವಾದ ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ವಿಭಾಗದಲ್ಲಿ ಅಧ್ಯಯನ ಮಾಡಲಿರುವ ವಾಣಿಜ್ಯದ ವಿದ್ಯಾರ್ಥಿಗಳಿಗೆ

ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ. Read More »

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

ಯಕ್ಷಗಾನ ಕಲಾರಂಗಕ್ಕೆ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿ ಕೊಡುತ್ತಿರುವ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್’ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎಪ್ರಿಲ್ 21ರಂದು ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಸಂಸ್ಥೆ ಇನ್ನಷ್ಟು ಸುದೃಢವಾಗಿ ಕಲೆ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬೆಳೆಯಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ

ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ. Read More »

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.

ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಇಂದು (09.03.2024) ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ. Read More »

We're currently hard at work gathering information and crafting content to bring you the best experience. Stay tuned for exciting updates!